ಕೇಜ್ರಿವಾಲ್ ತಪ್ಪೊಪ್ಪಿಕೊಂಡ ಹಿನ್ನೆಲೆಯಲ್ಲಿ ‘ಈ ಪ್ರಕರಣವನ್ನು ಇಲ್ಲಿಗೆ ಮುಕ್ತಾಯಗೊಳಿಸಲು ಬಯಸುವಿರಾ’ ಎಂದು ದೂರುದಾರರನ್ನು ಪೀಠವು ಕೇಳಿತು. ಮಾತ್ರವಲ್ಲ, ಕೇಜ್ರಿವಾಲ್ ಅವರ ಪ್ರಕರಣವನ್ನು ಮಾರ್ಚ್ 11ರವರೆಗೆ ಕೈಗೆತ್ತಿಕೊಳ್ಳಬಾರದು ಎಂದು ವಿಚಾರಣಾ ನ್ಯಾಯಾಲಯಕ್ಕೆ ಸೂಚಿಸಿತು. ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ಅವರು ಕೇಜ್ರಿವಾಲ್ ಪರ ಹಾಜರಾದರು.