<p><strong>ಉಜ್ಜಯಿನಿ:</strong> ಮಧ್ಯಪ್ರದೇಶದ ಉಜ್ಜಿಯಿನಿ ಜಿಲ್ಲೆಯಲ್ಲಿ ಕೊಳವೆ ಬಾವಿಗೆ ಬಿದ್ದ ಎರಡೂವರೆ ವರ್ಷದ ಮಗುವಿನ ರಕ್ಷಣೆಗಾಗಿ ಕಾರ್ಯಾಚರಣೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ಜಿಲ್ಲಾ ಕೇಂದ್ರದಿಂದ ಸುಮಾರು 75 ಕಿ.ಮೀ. ದೂರದಲ್ಲಿರುವ ಝಲಾರಿಯಾ ಗ್ರಾಮದಲ್ಲಿ ಘಟನೆ ನಡೆದಿದೆ. </p><p>ಎನ್ಡಿಆರ್ಎಫ್, ಎಸ್ಡಿಆರ್ಎಫ್ ಸೇರಿದಂತೆ ವಿವಿಧ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತವಾಗಿವೆ. </p>.ಮೂಡಿಗೆರೆ | ಮಲೆನಾಡಿನಲ್ಲಿ ಕೊಳವೆ ಬಾವಿಯ ಆರ್ಭಟ.ದೊಡ್ಡಬಳ್ಳಾಪುರ: ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು. <p>60ರಿಂದ 65 ಅಡಿ ಅಳದಲ್ಲಿ ಮಗು ಸಿಲುಕಿಕೊಂಡಿರುವುದಾಗಿ ಅಂದಾಜಿಸಲಾಗಿದೆ. ಮಗುವಿನ ರಕ್ಷಣೆಗಾಗಿ ಸಮಾನಾಂತರವಾಗಿ ಗುಂಡಿ ತೊಡಲಾಗುತ್ತಿದೆ. ಆದರೆ ಬಂಡೆಕಲ್ಲಿನಿಂದಾಗಿ ಕಾರ್ಯಾಚರಣೆ ನಿಧಾನವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಇದಕ್ಕಾಗಿ ಭೋಪಾಲ್ ಹಾಗೂ ಇಂದೋರ್ನಿಂದ ಬಂಡೆ ಕೊರೆಯುವ ಯಂತ್ರಗಳನ್ನು ತರಿಸಲಾಗಿದೆ. </p><p>ಮಗುವಿಗೆ ಆಮ್ಲಜನಕ ಪೂರೈಸಲಾಗುತ್ತಿದ್ದು, ಕೊಳವೆಯೊಳಗೆ ಕ್ಯಾಮೆರಾ ಇಳಿಸಲುವ ಮೂಲಕ ನಿಗಾ ವಹಿಸಲಾಗಿದೆ. ಮಗುವಿನ ರಕ್ಷಣೆಗೆ ಸಾಧ್ಯವಾದ ಎಲ್ಲ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಜ್ಜಯಿನಿ:</strong> ಮಧ್ಯಪ್ರದೇಶದ ಉಜ್ಜಿಯಿನಿ ಜಿಲ್ಲೆಯಲ್ಲಿ ಕೊಳವೆ ಬಾವಿಗೆ ಬಿದ್ದ ಎರಡೂವರೆ ವರ್ಷದ ಮಗುವಿನ ರಕ್ಷಣೆಗಾಗಿ ಕಾರ್ಯಾಚರಣೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ಜಿಲ್ಲಾ ಕೇಂದ್ರದಿಂದ ಸುಮಾರು 75 ಕಿ.ಮೀ. ದೂರದಲ್ಲಿರುವ ಝಲಾರಿಯಾ ಗ್ರಾಮದಲ್ಲಿ ಘಟನೆ ನಡೆದಿದೆ. </p><p>ಎನ್ಡಿಆರ್ಎಫ್, ಎಸ್ಡಿಆರ್ಎಫ್ ಸೇರಿದಂತೆ ವಿವಿಧ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತವಾಗಿವೆ. </p>.ಮೂಡಿಗೆರೆ | ಮಲೆನಾಡಿನಲ್ಲಿ ಕೊಳವೆ ಬಾವಿಯ ಆರ್ಭಟ.ದೊಡ್ಡಬಳ್ಳಾಪುರ: ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು. <p>60ರಿಂದ 65 ಅಡಿ ಅಳದಲ್ಲಿ ಮಗು ಸಿಲುಕಿಕೊಂಡಿರುವುದಾಗಿ ಅಂದಾಜಿಸಲಾಗಿದೆ. ಮಗುವಿನ ರಕ್ಷಣೆಗಾಗಿ ಸಮಾನಾಂತರವಾಗಿ ಗುಂಡಿ ತೊಡಲಾಗುತ್ತಿದೆ. ಆದರೆ ಬಂಡೆಕಲ್ಲಿನಿಂದಾಗಿ ಕಾರ್ಯಾಚರಣೆ ನಿಧಾನವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಇದಕ್ಕಾಗಿ ಭೋಪಾಲ್ ಹಾಗೂ ಇಂದೋರ್ನಿಂದ ಬಂಡೆ ಕೊರೆಯುವ ಯಂತ್ರಗಳನ್ನು ತರಿಸಲಾಗಿದೆ. </p><p>ಮಗುವಿಗೆ ಆಮ್ಲಜನಕ ಪೂರೈಸಲಾಗುತ್ತಿದ್ದು, ಕೊಳವೆಯೊಳಗೆ ಕ್ಯಾಮೆರಾ ಇಳಿಸಲುವ ಮೂಲಕ ನಿಗಾ ವಹಿಸಲಾಗಿದೆ. ಮಗುವಿನ ರಕ್ಷಣೆಗೆ ಸಾಧ್ಯವಾದ ಎಲ್ಲ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>