<p><strong>ಭಿಂಡ್(ಮಧ್ಯಪ್ರದೇಶ)</strong>: ಜಿಲ್ಲೆಯಲ್ಲಿ ದಲಿತ ವ್ಯಕ್ತಿಯೊಬ್ಬರನ್ನು ಥಳಿಸಿ, ಬಲವಂತದಿಂದ ಅವರಿಗೆ ಎರಡು ಬಾರಿ ಮೂತ್ರ ಕುಡಿಸಿದ ಆರೋಪದ ಮೇಲೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.</p>.<p>ಸೋನು ಬರುವಾ, ಅಲೋಕ್ ಶರ್ಮಾ ಹಾಗೂ ಛೋಟು ಓಝಾ ಬಂಧಿತ ಆರೋಪಿಗಳು. ಎಸ್ಸಿ, ಎಸ್ಟಿ ವಿರುದ್ಧ ದೌರ್ಜನ್ಯ ತಡೆ ಕಾಯ್ದೆ ಹಾಗೂ ಬಿಎನ್ಎಸ್ ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ಹೆಚ್ಚುವರಿ ಎಸ್ಪಿ ಸಂಜೀವ್ ಪಾಠಕ್ ತಿಳಿಸಿದ್ದಾರೆ.</p>.<p>‘ಸಂತ್ರಸ್ತ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂತ್ರಸ್ತ ವ್ಯಕ್ತಿಯು ಮುಖ್ಯ ಆರೋಪಿಯ ವಾಹನ ಚಾಲಕನಾಗಿದ್ದ. ಕೆಲಸ ಬಿಟ್ಟಿದ್ದಕ್ಕಾಗಿ ಆತನನ್ನು ಗುರಿಯಾಗಿಸಿ ಹಲ್ಲೆ ಮಾಡಿರುವುದು ಮೇಲ್ನೋಟಕ್ಕೆ ತಿಳಿದುಬಂದಿದೆ’ ಎಂದು ತಿಳಿಸಿದ್ದಾರೆ.</p>.<p>‘ಗ್ವಾಲಿಯರ್ನಲ್ಲಿನ ನನ್ನ ಮಾವನ ಮನೆಯಿಂದ ಅಪಹರಣ ಮಾಡಿ, ಭಿಂಡ್ಗೆ ಕರೆತಂದರು. ನನ್ನನ್ನು ಪ್ಲಾಸ್ಟಿಕ್ ಪೈಪ್ನಿಂದ ಥಳಿಸಿದ ಆರೋಪಿಗಳು, ದಾರಿ ಮಧ್ಯೆ ವಾಹನ ನಿಲ್ಲಿಸಿದರು. ನಂತರ, ಬಾಟಲಿಯೊಂದರಲ್ಲಿದ್ದ ಮೂತ್ರವನ್ನು ಬಲವಂತದಿಂದ ಕುಡಿಸಿದರು’ ಎಂದು ಸಂತ್ರಸ್ತ ತಿಳಿಸಿದ್ದಾರೆ.</p>.<p>‘ಬಳಿಕ, ನನ್ನನ್ನು ಅಕುತ್ಪುರ ಗ್ರಾಮಕ್ಕೆ ಕರೆದೊಯ್ದು, ಕಬ್ಬಿಣದ ಸರಪಳಿಯಿಂದ ಕಟ್ಟಿ ಹಾಕಿ, ಮತ್ತೊಮ್ಮೆ ಮೂತ್ರ ಕುಡಿಸಿದರು’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಿಂಡ್(ಮಧ್ಯಪ್ರದೇಶ)</strong>: ಜಿಲ್ಲೆಯಲ್ಲಿ ದಲಿತ ವ್ಯಕ್ತಿಯೊಬ್ಬರನ್ನು ಥಳಿಸಿ, ಬಲವಂತದಿಂದ ಅವರಿಗೆ ಎರಡು ಬಾರಿ ಮೂತ್ರ ಕುಡಿಸಿದ ಆರೋಪದ ಮೇಲೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.</p>.<p>ಸೋನು ಬರುವಾ, ಅಲೋಕ್ ಶರ್ಮಾ ಹಾಗೂ ಛೋಟು ಓಝಾ ಬಂಧಿತ ಆರೋಪಿಗಳು. ಎಸ್ಸಿ, ಎಸ್ಟಿ ವಿರುದ್ಧ ದೌರ್ಜನ್ಯ ತಡೆ ಕಾಯ್ದೆ ಹಾಗೂ ಬಿಎನ್ಎಸ್ ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ಹೆಚ್ಚುವರಿ ಎಸ್ಪಿ ಸಂಜೀವ್ ಪಾಠಕ್ ತಿಳಿಸಿದ್ದಾರೆ.</p>.<p>‘ಸಂತ್ರಸ್ತ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂತ್ರಸ್ತ ವ್ಯಕ್ತಿಯು ಮುಖ್ಯ ಆರೋಪಿಯ ವಾಹನ ಚಾಲಕನಾಗಿದ್ದ. ಕೆಲಸ ಬಿಟ್ಟಿದ್ದಕ್ಕಾಗಿ ಆತನನ್ನು ಗುರಿಯಾಗಿಸಿ ಹಲ್ಲೆ ಮಾಡಿರುವುದು ಮೇಲ್ನೋಟಕ್ಕೆ ತಿಳಿದುಬಂದಿದೆ’ ಎಂದು ತಿಳಿಸಿದ್ದಾರೆ.</p>.<p>‘ಗ್ವಾಲಿಯರ್ನಲ್ಲಿನ ನನ್ನ ಮಾವನ ಮನೆಯಿಂದ ಅಪಹರಣ ಮಾಡಿ, ಭಿಂಡ್ಗೆ ಕರೆತಂದರು. ನನ್ನನ್ನು ಪ್ಲಾಸ್ಟಿಕ್ ಪೈಪ್ನಿಂದ ಥಳಿಸಿದ ಆರೋಪಿಗಳು, ದಾರಿ ಮಧ್ಯೆ ವಾಹನ ನಿಲ್ಲಿಸಿದರು. ನಂತರ, ಬಾಟಲಿಯೊಂದರಲ್ಲಿದ್ದ ಮೂತ್ರವನ್ನು ಬಲವಂತದಿಂದ ಕುಡಿಸಿದರು’ ಎಂದು ಸಂತ್ರಸ್ತ ತಿಳಿಸಿದ್ದಾರೆ.</p>.<p>‘ಬಳಿಕ, ನನ್ನನ್ನು ಅಕುತ್ಪುರ ಗ್ರಾಮಕ್ಕೆ ಕರೆದೊಯ್ದು, ಕಬ್ಬಿಣದ ಸರಪಳಿಯಿಂದ ಕಟ್ಟಿ ಹಾಕಿ, ಮತ್ತೊಮ್ಮೆ ಮೂತ್ರ ಕುಡಿಸಿದರು’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>