ವಾರದ ಹಿಂದೆ ಬಿಂಧ್ ಜಿಲ್ಲೆಯ ಕುರ್ತಾರ ಗ್ರಾಮದಲ್ಲಿ ನಡೆದ ವಿವಾಹ ಸಮಾರಂಭವೊಂದರಲ್ಲಿ ಜನರು ಮಾಸ್ಕ್ ಧರಿಸಿದೇ, ವ್ಯಕ್ತಿಗತ ಅಂತರ ಕಾಪಾಡದೇ ಮನಬಂದಂತೆ ನೃತ್ಯ ಮಾಡುತ್ತಿದ್ದರು. ಇದನ್ನು ಗಮನಿಸಿದ ಮನೋಜ್ ಅವರು, ಇಂಥ ಘಟನೆಗಳು ಪುನರಾವರ್ತನೆಯಾಗದಂತೆ ಎಚ್ಚರವಹಿಸಲು ತೀರ್ಮಾನಿಸಿ, ಈ ಹೊಸ ಯೋಜನೆ ಪ್ರಕಟಿಸಿದರು.