<p><strong>ಭೋಪಾಲ್</strong>: ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಲು ಜನರನ್ನು ಉತ್ತೇಜಿಸುವುದಕ್ಕಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯೊಬ್ಬರು ‘ಹತ್ತು ಅತಿಥಿಗಳ ಸಮ್ಮುಖದಲ್ಲಿ ಮದುವೆಯಾಗುವ ಪ್ರತಿ ನವ ದಂಪತಿಗೆ ತಮ್ಮ ಮನೆಗೆ ಆಹ್ವಾನಿಸಿ, ರುಚಿಕರ ಭೋಜನ ಕೂಟ ಏರ್ಪಡಿಸುವುದಾಗಿ‘ ಪ್ರಕಟಿಸಿದ್ದಾರೆ.</p>.<p>ಮಧ್ಯಪ್ರದೇಶದ ಭಿಂದ್ ಜಿಲ್ಲೆಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮನೋಜ್ ಕುಮಾರ್ ಸಿಂಗ್ ಇಂಥ ದ್ದೊಂದು ಹೊಸ ಆಲೋಚನೆಯನ್ನು ಸಾರ್ವಜನಿಕವಾಗಿ ಪ್ರಕಟಿಸಿದ್ದಾರೆ. 10 ಅಥವಾ ಅದಕ್ಕಿಂತ ಕಡಿಮೆ ಅತಿಥಿಗಳ ಸಮ್ಮುಖದಲ್ಲಿ ವಿವಾಹವಾಗುವ ವಧು-ವರರಿಗೆ ಈ ಆತಿಥ್ಯ ನೀಡುವುದಾಗಿ ಮನೋಜ್ ಕುಮಾರ್ ಸೋಮವಾರ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.</p>.<p>ವಾರದ ಹಿಂದೆ ಬಿಂಧ್ ಜಿಲ್ಲೆಯ ಕುರ್ತಾರ ಗ್ರಾಮದಲ್ಲಿ ನಡೆದ ವಿವಾಹ ಸಮಾರಂಭವೊಂದರಲ್ಲಿ ಜನರು ಮಾಸ್ಕ್ ಧರಿಸಿದೇ, ವ್ಯಕ್ತಿಗತ ಅಂತರ ಕಾಪಾಡದೇ ಮನಬಂದಂತೆ ನೃತ್ಯ ಮಾಡುತ್ತಿದ್ದರು. ಇದನ್ನು ಗಮನಿಸಿದ ಮನೋಜ್ ಅವರು, ಇಂಥ ಘಟನೆಗಳು ಪುನರಾವರ್ತನೆಯಾಗದಂತೆ ಎಚ್ಚರವಹಿಸಲು ತೀರ್ಮಾನಿಸಿ, ಈ ಹೊಸ ಯೋಜನೆ ಪ್ರಕಟಿಸಿದರು.</p>.<p>‘ರುಚಿಕರವಾದ ಭೋಜನ ಪಾರ್ಟಿ ಜತೆಗೆ, ವಿವಾಹ ಮಹೋತ್ಸವದಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟು ನಿಟ್ಟಾಗಿ ಅನುಸರಿಸಿದ ದಂಪತಿಗೆ ನೆನಪಿನ ಕಾಣಿಕೆ ನೀಡಿ, ಸರ್ಕಾರಿ ವಾಹನದಲ್ಲಿ ಮನೆಗೆ ತಲುಪಿಸುವುದಾಗಿ‘ ಪ್ರಕಟಿಸಿದರು.</p>.<p><a href="https://www.prajavani.net/india-news/itbp-covid-centre-with-500-oxygen-supported-beds-starts-in-delhis-radha-soami-beas-campus-825695.html" itemprop="url">ದೆಹಲಿ: ಆಮ್ಲಜನಕದ ನೆರವಿನ 500 ಹಾಸಿಗೆಗಳ ಸಾಮರ್ಥ್ಯದ ಕೋವಿಡ್ ಕೇಂದ್ರ ಆರಂಭ </a></p>.<p>‘ಈ ಪ್ರಕಟಣೆ ನೀಡಿ ಎರಡು ದಿನಗಳಾಗಿವೆ. ಇಲ್ಲಿವರೆಗೂ ಯಾರೂ ನನ್ನ ಭೋಜನ ಸತ್ಕಾರದ ಆಹ್ವಾನವನ್ನು ಸ್ವೀಕರಿಸಲು ಬಂದಿಲ್ಲ‘ ಎಂದು ಎಸ್ಪಿ ಮನೋಜ್ ಕುಮಾರ್ ಹೇಳಿದರು.</p>.<p><a href="https://www.prajavani.net/india-news/oxygen-express-special-train-with-3-tankers-arrives-in-maharashtra-825694.html" itemprop="url">ಮಹಾರಾಷ್ಟ್ರಕ್ಕೆ ತಲುಪಿದ ಎರಡನೇ ‘ಆಕ್ಸಿಜನ್ ಎಕ್ಸ್ಪ್ರೆಸ್’ </a></p>.<p>ಏಪ್ರಿಲ್ 30ರಂದು ಎರಡು ಜೋಡಿಗಳು ವಿವಾಹವಾಗುತ್ತಿದ್ದಾರೆ. ನಾನು ಹೇಳಿದ ನಂತರ ಅವರು ಅತಿಥಿಗಳ ಸಂಖ್ಯೆಯನ್ನು 10ಕ್ಕೆ ಮಿತಿಗೊಳಿಸಲು ಯೋಚಿಸಿದ್ದಾರೆ. ಅವರು ಹಾಗೆ ಮಾಡಿದ್ದೇ ಆದರೆ, ನನ್ನ ಕುಟುಂಬದೊಂದಿಗೆ, ನನ್ನ ಮನೆಯಲ್ಲೇ ಆ ಎರಡು ಜೋಡಿಗೂ ಔತಣ ಕೂಟ ಏರ್ಪಡಿಸುತ್ತೇನೆ‘ ಎಂದು ಅವರು ಹೇಳಿದ್ದಾರೆ.</p>.<p><a href="https://www.prajavani.net/india-news/covid-patients-die-at-private-hospital-in-hisar-and-kin-alleges-oxygen-shortage-as-cause-825696.html" itemprop="url">ಹರಿಯಾಣದಲ್ಲಿ ಕೋವಿಡ್ ರೋಗಿಗಳ ಸಾವು: ಆಮ್ಲಜನಕ ಕೊರತೆಯ ಆರೋಪ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭೋಪಾಲ್</strong>: ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಲು ಜನರನ್ನು ಉತ್ತೇಜಿಸುವುದಕ್ಕಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯೊಬ್ಬರು ‘ಹತ್ತು ಅತಿಥಿಗಳ ಸಮ್ಮುಖದಲ್ಲಿ ಮದುವೆಯಾಗುವ ಪ್ರತಿ ನವ ದಂಪತಿಗೆ ತಮ್ಮ ಮನೆಗೆ ಆಹ್ವಾನಿಸಿ, ರುಚಿಕರ ಭೋಜನ ಕೂಟ ಏರ್ಪಡಿಸುವುದಾಗಿ‘ ಪ್ರಕಟಿಸಿದ್ದಾರೆ.</p>.<p>ಮಧ್ಯಪ್ರದೇಶದ ಭಿಂದ್ ಜಿಲ್ಲೆಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮನೋಜ್ ಕುಮಾರ್ ಸಿಂಗ್ ಇಂಥ ದ್ದೊಂದು ಹೊಸ ಆಲೋಚನೆಯನ್ನು ಸಾರ್ವಜನಿಕವಾಗಿ ಪ್ರಕಟಿಸಿದ್ದಾರೆ. 10 ಅಥವಾ ಅದಕ್ಕಿಂತ ಕಡಿಮೆ ಅತಿಥಿಗಳ ಸಮ್ಮುಖದಲ್ಲಿ ವಿವಾಹವಾಗುವ ವಧು-ವರರಿಗೆ ಈ ಆತಿಥ್ಯ ನೀಡುವುದಾಗಿ ಮನೋಜ್ ಕುಮಾರ್ ಸೋಮವಾರ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.</p>.<p>ವಾರದ ಹಿಂದೆ ಬಿಂಧ್ ಜಿಲ್ಲೆಯ ಕುರ್ತಾರ ಗ್ರಾಮದಲ್ಲಿ ನಡೆದ ವಿವಾಹ ಸಮಾರಂಭವೊಂದರಲ್ಲಿ ಜನರು ಮಾಸ್ಕ್ ಧರಿಸಿದೇ, ವ್ಯಕ್ತಿಗತ ಅಂತರ ಕಾಪಾಡದೇ ಮನಬಂದಂತೆ ನೃತ್ಯ ಮಾಡುತ್ತಿದ್ದರು. ಇದನ್ನು ಗಮನಿಸಿದ ಮನೋಜ್ ಅವರು, ಇಂಥ ಘಟನೆಗಳು ಪುನರಾವರ್ತನೆಯಾಗದಂತೆ ಎಚ್ಚರವಹಿಸಲು ತೀರ್ಮಾನಿಸಿ, ಈ ಹೊಸ ಯೋಜನೆ ಪ್ರಕಟಿಸಿದರು.</p>.<p>‘ರುಚಿಕರವಾದ ಭೋಜನ ಪಾರ್ಟಿ ಜತೆಗೆ, ವಿವಾಹ ಮಹೋತ್ಸವದಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟು ನಿಟ್ಟಾಗಿ ಅನುಸರಿಸಿದ ದಂಪತಿಗೆ ನೆನಪಿನ ಕಾಣಿಕೆ ನೀಡಿ, ಸರ್ಕಾರಿ ವಾಹನದಲ್ಲಿ ಮನೆಗೆ ತಲುಪಿಸುವುದಾಗಿ‘ ಪ್ರಕಟಿಸಿದರು.</p>.<p><a href="https://www.prajavani.net/india-news/itbp-covid-centre-with-500-oxygen-supported-beds-starts-in-delhis-radha-soami-beas-campus-825695.html" itemprop="url">ದೆಹಲಿ: ಆಮ್ಲಜನಕದ ನೆರವಿನ 500 ಹಾಸಿಗೆಗಳ ಸಾಮರ್ಥ್ಯದ ಕೋವಿಡ್ ಕೇಂದ್ರ ಆರಂಭ </a></p>.<p>‘ಈ ಪ್ರಕಟಣೆ ನೀಡಿ ಎರಡು ದಿನಗಳಾಗಿವೆ. ಇಲ್ಲಿವರೆಗೂ ಯಾರೂ ನನ್ನ ಭೋಜನ ಸತ್ಕಾರದ ಆಹ್ವಾನವನ್ನು ಸ್ವೀಕರಿಸಲು ಬಂದಿಲ್ಲ‘ ಎಂದು ಎಸ್ಪಿ ಮನೋಜ್ ಕುಮಾರ್ ಹೇಳಿದರು.</p>.<p><a href="https://www.prajavani.net/india-news/oxygen-express-special-train-with-3-tankers-arrives-in-maharashtra-825694.html" itemprop="url">ಮಹಾರಾಷ್ಟ್ರಕ್ಕೆ ತಲುಪಿದ ಎರಡನೇ ‘ಆಕ್ಸಿಜನ್ ಎಕ್ಸ್ಪ್ರೆಸ್’ </a></p>.<p>ಏಪ್ರಿಲ್ 30ರಂದು ಎರಡು ಜೋಡಿಗಳು ವಿವಾಹವಾಗುತ್ತಿದ್ದಾರೆ. ನಾನು ಹೇಳಿದ ನಂತರ ಅವರು ಅತಿಥಿಗಳ ಸಂಖ್ಯೆಯನ್ನು 10ಕ್ಕೆ ಮಿತಿಗೊಳಿಸಲು ಯೋಚಿಸಿದ್ದಾರೆ. ಅವರು ಹಾಗೆ ಮಾಡಿದ್ದೇ ಆದರೆ, ನನ್ನ ಕುಟುಂಬದೊಂದಿಗೆ, ನನ್ನ ಮನೆಯಲ್ಲೇ ಆ ಎರಡು ಜೋಡಿಗೂ ಔತಣ ಕೂಟ ಏರ್ಪಡಿಸುತ್ತೇನೆ‘ ಎಂದು ಅವರು ಹೇಳಿದ್ದಾರೆ.</p>.<p><a href="https://www.prajavani.net/india-news/covid-patients-die-at-private-hospital-in-hisar-and-kin-alleges-oxygen-shortage-as-cause-825696.html" itemprop="url">ಹರಿಯಾಣದಲ್ಲಿ ಕೋವಿಡ್ ರೋಗಿಗಳ ಸಾವು: ಆಮ್ಲಜನಕ ಕೊರತೆಯ ಆರೋಪ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>