ಶುಕ್ರವಾರ ಸಂಜೆ 5 ಗಂಟೆ ಒಳಗೆ ವಿಶ್ವಾಸಮತ ಸಾಬೀತು ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಮಧ್ಯ ಪ್ರದೇಶ ವಿಧಾನಸಭೆ ಸ್ಪೀಕರ್ಗೆ ಆದೇಶ ನೀಡಿತ್ತು. ಅಗತ್ಯ ಸಂಖ್ಯಾಬಲ ಇಲ್ಲದಿರುವುದರಿಂದ ಕಮಲನಾಥ್ ರಾಜೀನಾಮೆ ನೀಡಲಿದ್ದಾರೆಯೇ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ದಿಗ್ವಿಜಯ್ ಸಿಂಗ್, ‘ಮುಖ್ಯಮಂತ್ರಿಗಳು ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಅಲ್ಲಿವರೆಗೂ ಕಾಯಿರಿ’ ಎಂದು ಹೇಳಿದ್ದಾರೆ.