<p><strong>ಅನುಪ್ಪುರ್ (ಮಧ್ಯಪ್ರದೇಶ):</strong> ನ್ಯಾಯಾಧೀಶರಿಗೆ ಗುಂಪೊಂದು ಕೊಲೆ ಬೆದರಿಕೆ ಹಾಕಿ, ಆಸ್ತಿಗೆ ಹಾನಿ ಮಾಡಿ, ಅವರ ಮನೆಯ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಮಧ್ಯಪ್ರದೇಶದ ಅನುಪ್ಪುರ್ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.ಮಧ್ಯಪ್ರದೇಶ | ದಲಿತ ವ್ಯಕ್ತಿಗೆ ಥಳಿಸಿ, ಮೂತ್ರ ಕುಡಿಸಿದ ಆರೋಪ; ಮೂವರ ಸೆರೆ.<p>ಜಿಲ್ಲಾ ಕೇಂದ್ರದಿಂದ 35 ಕಿ.ಮೀ ದೂರದಲ್ಲಿರುವ ಭಾಲುಮಾಡ ಎಂಬಲ್ಲಿ ಶುಕ್ರವಾರ ಮಧ್ಯರಾತ್ರಿ 12.30ರ ಹೊತ್ತಿಗೆ ಈ ಘಟನೆ ನಡೆದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಮತಿ–ಉರ್–ರೆಹಮಾನ್ ತಿಳಿಸಿದ್ದಾರೆ.</p><p>ಈ ಬಗ್ಗೆ ಪ್ರಥಮ ದರ್ಜೆ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅಮನ್ದೀಪ್ ಸಿಂಗ್ ಛಾಬ್ರಾ ಭಾಲುಮಾಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅಧಿಕೃತ ನಿವಾಸದಲ್ಲಿ ಮಲಗಿದ್ದಾಗ ಗುಂಪೊಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಹೇಳಿದ್ದಾರೆ.</p>.ಮಧ್ಯಪ್ರದೇಶ: ಸಿರಪ್ನಲ್ಲಿ ಅಪಾಯಕಾರಿ ರಾಸಾಯನಿಕ ನಂತರ, ಈಗ ಔಷಧದಲ್ಲಿ ಹುಳು ಪತ್ತೆ.<p>ಆ ಗುಂಪು ಮನೆಯ ಆಸ್ತಿಗೂ ಹಾನಿ ಮಾಡಿದ್ದು, ಗೇಟ್ನಲ್ಲಿದ್ದ ದೀಪ ಹಾಗೂ ಕಬ್ಬಿಣಗಳನ್ನು ಧ್ವಂಸ ಮಾಡಿದೆ. ಮನೆ ಮೇಲೂ ಕಲ್ಲು ಎಸೆದಿದ್ದಾರೆ. ಮನೆಯಿಂದ ನಾನು ಹೊರಬಂದಾಗ ಗುಂಪು ಅಲ್ಲಿಂದ ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖವಾಗಿದೆ.</p><p>ಅಪರಿಚಿತ ವ್ಯಕ್ತಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳಡಿ ಪ್ರಕರಣ ದಾಖಲಾಗಿದೆ.</p><p>ಪೊಲೀಸರು ತನಿಖೆ ಆರಂಭಿಸಿದ್ದು, ಮ್ಯಾಜಿಸ್ಟ್ರೇಟ್ ಇತ್ತೀಚೆಗೆ ನೀಡಿದ ಯಾವುದೇ ತೀರ್ಪು ಅಥವಾ ಬೇಲ್ ನಿರಾಕರಿಸಿದ ಪ್ರಕರಣಗಳನ್ನು ಪರಿಶೀಲಿಸುತ್ತಿದ್ದಾರೆ.</p> .ಮಧ್ಯಪ್ರದೇಶ: ಕೆಮ್ಮಿನ ಸಿರಪ್ ಸೇವಿಸಿದ ಇಬ್ಬರು ಮಕ್ಕಳು ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅನುಪ್ಪುರ್ (ಮಧ್ಯಪ್ರದೇಶ):</strong> ನ್ಯಾಯಾಧೀಶರಿಗೆ ಗುಂಪೊಂದು ಕೊಲೆ ಬೆದರಿಕೆ ಹಾಕಿ, ಆಸ್ತಿಗೆ ಹಾನಿ ಮಾಡಿ, ಅವರ ಮನೆಯ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಮಧ್ಯಪ್ರದೇಶದ ಅನುಪ್ಪುರ್ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.ಮಧ್ಯಪ್ರದೇಶ | ದಲಿತ ವ್ಯಕ್ತಿಗೆ ಥಳಿಸಿ, ಮೂತ್ರ ಕುಡಿಸಿದ ಆರೋಪ; ಮೂವರ ಸೆರೆ.<p>ಜಿಲ್ಲಾ ಕೇಂದ್ರದಿಂದ 35 ಕಿ.ಮೀ ದೂರದಲ್ಲಿರುವ ಭಾಲುಮಾಡ ಎಂಬಲ್ಲಿ ಶುಕ್ರವಾರ ಮಧ್ಯರಾತ್ರಿ 12.30ರ ಹೊತ್ತಿಗೆ ಈ ಘಟನೆ ನಡೆದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಮತಿ–ಉರ್–ರೆಹಮಾನ್ ತಿಳಿಸಿದ್ದಾರೆ.</p><p>ಈ ಬಗ್ಗೆ ಪ್ರಥಮ ದರ್ಜೆ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅಮನ್ದೀಪ್ ಸಿಂಗ್ ಛಾಬ್ರಾ ಭಾಲುಮಾಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅಧಿಕೃತ ನಿವಾಸದಲ್ಲಿ ಮಲಗಿದ್ದಾಗ ಗುಂಪೊಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಹೇಳಿದ್ದಾರೆ.</p>.ಮಧ್ಯಪ್ರದೇಶ: ಸಿರಪ್ನಲ್ಲಿ ಅಪಾಯಕಾರಿ ರಾಸಾಯನಿಕ ನಂತರ, ಈಗ ಔಷಧದಲ್ಲಿ ಹುಳು ಪತ್ತೆ.<p>ಆ ಗುಂಪು ಮನೆಯ ಆಸ್ತಿಗೂ ಹಾನಿ ಮಾಡಿದ್ದು, ಗೇಟ್ನಲ್ಲಿದ್ದ ದೀಪ ಹಾಗೂ ಕಬ್ಬಿಣಗಳನ್ನು ಧ್ವಂಸ ಮಾಡಿದೆ. ಮನೆ ಮೇಲೂ ಕಲ್ಲು ಎಸೆದಿದ್ದಾರೆ. ಮನೆಯಿಂದ ನಾನು ಹೊರಬಂದಾಗ ಗುಂಪು ಅಲ್ಲಿಂದ ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖವಾಗಿದೆ.</p><p>ಅಪರಿಚಿತ ವ್ಯಕ್ತಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳಡಿ ಪ್ರಕರಣ ದಾಖಲಾಗಿದೆ.</p><p>ಪೊಲೀಸರು ತನಿಖೆ ಆರಂಭಿಸಿದ್ದು, ಮ್ಯಾಜಿಸ್ಟ್ರೇಟ್ ಇತ್ತೀಚೆಗೆ ನೀಡಿದ ಯಾವುದೇ ತೀರ್ಪು ಅಥವಾ ಬೇಲ್ ನಿರಾಕರಿಸಿದ ಪ್ರಕರಣಗಳನ್ನು ಪರಿಶೀಲಿಸುತ್ತಿದ್ದಾರೆ.</p> .ಮಧ್ಯಪ್ರದೇಶ: ಕೆಮ್ಮಿನ ಸಿರಪ್ ಸೇವಿಸಿದ ಇಬ್ಬರು ಮಕ್ಕಳು ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>