<p>ಖಾರ್ಗೊನ್: ಮಧ್ಯಪ್ರದೇಶದ ಖಾರ್ಗೊನ್ ಜಿಲ್ಲೆಯ ನರ್ಮದಾ ನದಿ ದಂಡೆಯಲ್ಲಿ ಕಲುಷಿತ ಆಹಾರ ಸೇವನೆಯಿಂದಾಗಿ 200 ಗಿಳಿಗಳು ಮೃತಪಟ್ಟಿವೆ.</p><p>ಇಂದೋರ್ನಲ್ಲಿ ಕಲುಷಿತ ನೀರಿನ ಸೇವನೆಯಿಂದ 10 ಮಂದಿ ಮೃತಪಟ್ಟಿದ್ದು, 150ಕ್ಕೂ ಹೆಚ್ಚು ಜನರು ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ. ಈ ನಡುವೆ ಗಿಳಿಗಳ ಮಾರಣ ಹೋಮದ ಬಗ್ಗೆ ವರದಿಯಾಗಿದೆ.</p>.ದೇಶದ ಸ್ವಚ್ಛ ನಗರ ಇಂದೋರ್ ದುರಂತಕ್ಕೆ ಕಲುಷಿತ ನೀರಿನ ಸೇವನೆಯೇ ಕಾರಣ: ವರದಿ.ಇಂದೋರ್ನಲ್ಲಿ ಕಲುಷಿತ ನೀರು ಸೇವನೆ ಪ್ರಕರಣ; ಮೃತರ ಸಂಖ್ಯೆ 10ಕ್ಕೆ ಏರಿಕೆ.<p>‘ಕಳೆದ ನಾಲ್ಕು ದಿನಗಳಿಂದ ಸೇತುವೆಯೊಂದರ ಬಳಿ ಗಿಳಿಗಳ ಶವ ಪತ್ತೆಯಾಗಿವೆ. ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಹಕ್ಕಿ ಜ್ವರ ಪತ್ತೆಯಾಗಿಲ್ಲ’ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.</p><p>‘ರಕ್ಷಣಾ ಕಾರ್ಯಾಚರಣೆ ವೇಳೆ ಕೆಲ ಗಿಳಿಗಳು ಜೀವಂತವಾಗಿ ಸಿಕ್ಕಿದ್ದವು. ಆದರೆ ವಿಷದ ತೀವ್ರತೆ ಹೆಚ್ಚಿದ್ದರಿಂದ ಅವುಗಳೂ ಮೃತಪಟ್ಟವು’ ಎಂದು ಜಿಲ್ಲಾ ವನ್ಯಜೀವಿ ಅಧಿಕಾರಿ ಟೋನಿ ಶರ್ಮಾ ಅವರು ತಿಳಿಸಿದ್ದಾರೆ.</p><p>‘ಗಿಳಿಗಳ ಸಾವಿನಿಂದಾಗಿ ಈ ಪ್ರದೇಶದಲ್ಲಿ ಹಕ್ಕಿ ಜ್ವರದ ಬಗ್ಗೆ ಆತಂಕ ಉಂಟಾಗಿತ್ತು. ಆದರೆ ಮೃತ ಗಿಳಿಗಳಲ್ಲಿ ಹಕ್ಕಿ ಜ್ವರದ ಸೋಂಕು ಕಂಡುಬಂದಿಲ್ಲ’ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.</p><p>‘ಕಲುಷಿತ ಆಹಾರ ಸೇವನೆ ಮತ್ತು ಆಹಾರ ಕ್ರಮದಲ್ಲಿನ ವ್ಯತ್ಯಾಸದಿಂದಾಗಿ ಗಿಳಿಗಳು ಮೃತಪಟ್ಟಿವೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಖಾರ್ಗೊನ್: ಮಧ್ಯಪ್ರದೇಶದ ಖಾರ್ಗೊನ್ ಜಿಲ್ಲೆಯ ನರ್ಮದಾ ನದಿ ದಂಡೆಯಲ್ಲಿ ಕಲುಷಿತ ಆಹಾರ ಸೇವನೆಯಿಂದಾಗಿ 200 ಗಿಳಿಗಳು ಮೃತಪಟ್ಟಿವೆ.</p><p>ಇಂದೋರ್ನಲ್ಲಿ ಕಲುಷಿತ ನೀರಿನ ಸೇವನೆಯಿಂದ 10 ಮಂದಿ ಮೃತಪಟ್ಟಿದ್ದು, 150ಕ್ಕೂ ಹೆಚ್ಚು ಜನರು ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ. ಈ ನಡುವೆ ಗಿಳಿಗಳ ಮಾರಣ ಹೋಮದ ಬಗ್ಗೆ ವರದಿಯಾಗಿದೆ.</p>.ದೇಶದ ಸ್ವಚ್ಛ ನಗರ ಇಂದೋರ್ ದುರಂತಕ್ಕೆ ಕಲುಷಿತ ನೀರಿನ ಸೇವನೆಯೇ ಕಾರಣ: ವರದಿ.ಇಂದೋರ್ನಲ್ಲಿ ಕಲುಷಿತ ನೀರು ಸೇವನೆ ಪ್ರಕರಣ; ಮೃತರ ಸಂಖ್ಯೆ 10ಕ್ಕೆ ಏರಿಕೆ.<p>‘ಕಳೆದ ನಾಲ್ಕು ದಿನಗಳಿಂದ ಸೇತುವೆಯೊಂದರ ಬಳಿ ಗಿಳಿಗಳ ಶವ ಪತ್ತೆಯಾಗಿವೆ. ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಹಕ್ಕಿ ಜ್ವರ ಪತ್ತೆಯಾಗಿಲ್ಲ’ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.</p><p>‘ರಕ್ಷಣಾ ಕಾರ್ಯಾಚರಣೆ ವೇಳೆ ಕೆಲ ಗಿಳಿಗಳು ಜೀವಂತವಾಗಿ ಸಿಕ್ಕಿದ್ದವು. ಆದರೆ ವಿಷದ ತೀವ್ರತೆ ಹೆಚ್ಚಿದ್ದರಿಂದ ಅವುಗಳೂ ಮೃತಪಟ್ಟವು’ ಎಂದು ಜಿಲ್ಲಾ ವನ್ಯಜೀವಿ ಅಧಿಕಾರಿ ಟೋನಿ ಶರ್ಮಾ ಅವರು ತಿಳಿಸಿದ್ದಾರೆ.</p><p>‘ಗಿಳಿಗಳ ಸಾವಿನಿಂದಾಗಿ ಈ ಪ್ರದೇಶದಲ್ಲಿ ಹಕ್ಕಿ ಜ್ವರದ ಬಗ್ಗೆ ಆತಂಕ ಉಂಟಾಗಿತ್ತು. ಆದರೆ ಮೃತ ಗಿಳಿಗಳಲ್ಲಿ ಹಕ್ಕಿ ಜ್ವರದ ಸೋಂಕು ಕಂಡುಬಂದಿಲ್ಲ’ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.</p><p>‘ಕಲುಷಿತ ಆಹಾರ ಸೇವನೆ ಮತ್ತು ಆಹಾರ ಕ್ರಮದಲ್ಲಿನ ವ್ಯತ್ಯಾಸದಿಂದಾಗಿ ಗಿಳಿಗಳು ಮೃತಪಟ್ಟಿವೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>