<p><strong>ಭೋಪಾಲ್:</strong> ಮಧ್ಯಪ್ರದೇಶದ ಭೋಪಾಲ್ನಲ್ಲಿ ನಡೆದ ಪ್ರತಿಭಟನಾ ಸಮಾವೇಶದ ವೇದಿಕೆ ಕುಸಿದು ಕಾಂಗ್ರೆಸ್ನ ಕನಿಷ್ಠ 7 ನಾಯಕರು ಗಾಯಗೊಂಡಿದ್ದಾರೆ ಎಂದು ಶಾಸಕರೊಬ್ಬರು ತಿಳಿಸಿದ್ದಾರೆ.</p><p>ಮಧ್ಯಪ್ರದೇಶ ವಿಧಾನಸಭೆಗೆ ಕಾಲ್ನಡಿಗೆ ಮೂಲಕ ತೆರಳುವ ಮುನ್ನ ರಂಗಮಹಲ್ ಚೌಕಿ ಸಮೀಪ ನಡೆದ ಪ್ರತಿಭಟನಾ ಸಮಾವೇಶದಲ್ಲಿ ನಾಯಕರು ಭಾಷಣ ಮಾಡುತ್ತಿದ್ದಾಗ ವೇದಿಕೆ ಕುಸಿದಿದೆ ಎಂದು ಶಾಸಕ ಜೈವರ್ಧನ್ ಸಿಂಗ್ ತಿಳಿಸಿದ್ದಾರೆ.</p>.ಮಧ್ಯಪ್ರದೇಶ | ರೈತರಿಗೆ ₹5ಕ್ಕೆ ಶಾಶ್ವತ ವಿದ್ಯುತ್ ಸಂಪರ್ಕ: ಸಿಎಂ ಮೋಹನ್ ಯಾದವ್. <p>ರಾಜ್ಯ ಸರ್ಕಾರ ರೈತ ವಿರೋಧಿ ನಿಲುವುಗಳನ್ನು ವಿರೋಧಿಸಿ ಪ್ರತಿಭಟನಾ ಸಮಾವೇಶ ಆಯೋಜಿಸಲಾಗಿತ್ತು ಎಂದು ಅವರು ತಿಳಿಸಿದ್ದಾರೆ.</p><p>ಅದಾಗ್ಯೂ ಕಾಂಗ್ರೆಸ್ ಕಾರ್ಯಕರ್ತರು ವಿಧಾನಸಭೆಗೆ ಪಾದಯಾತ್ರೆ ನಡೆಸಿದ್ದು, ಅವರನ್ನು ಜಲಫಿರಂಗಿ ಹಾರಿಸುವ ಮೂಲಕ ಪೊಲೀಸರು ತಡೆದಿದ್ದಾರೆ.</p>.ಮಧ್ಯಪ್ರದೇಶ | ಟ್ರಕ್–ಎಸ್ಯುವಿ ಡಿಕ್ಕಿ: ಮೂವರು ಸಾವು, ಏಳು ಮಂದಿಗೆ ಗಾಯ. <p>‘ಸ್ಥಳದಲ್ಲಿ ನಾವು ಬ್ಯಾರಿಕೇಡ್ ಅಳವಡಿಸಿದ್ದು, ನಾವು ನಮ್ಮ ಕೆಲಸ ಮಾಡುತ್ತಿದ್ದೇವೆ’ ಎಂದು ಭೋಪಾಲ್ ವಿಭಾಗ–1ರ ಹೆಚ್ಚುವರಿ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.</p><p>ಘಟನೆಯಲ್ಲಿ ಗಾಯಗೊಂಡವರ ಸಂಖ್ಯೆಯ ಬಗ್ಗೆ ಮಾಹಿತಿ ಪಡೆದು ತಿಳಿಸುತ್ತೇವೆ ಎಂದು ಎಡಿಜಿಪಿ ಹೇಳಿದ್ದಾರೆ. ಘಟನೆ ಸಂಬಂಧ ಮಾಹಿತಿ ಬಯಸಿ ಟಿಟಿ ನಗರ ಎಸಿಪಿ ಚಂದ್ರಶೇಖರ ಪಾಂಡೆ ಹಾಗೂ ಠಾಣಾಧಿಕಾರಿ ಸುಧೀರ್ ಅವರಿಗೆ ಕರೆ ಮಾಡಿದರೂ ಅವರು ಉತ್ತರಿಸಲಿಲ್ಲ.</p> .ಮಧ್ಯ ಪ್ರದೇಶ: 5,520 ಕೆ.ಜಿ ನಕಲಿ ತುಪ್ಪ ವಶ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭೋಪಾಲ್:</strong> ಮಧ್ಯಪ್ರದೇಶದ ಭೋಪಾಲ್ನಲ್ಲಿ ನಡೆದ ಪ್ರತಿಭಟನಾ ಸಮಾವೇಶದ ವೇದಿಕೆ ಕುಸಿದು ಕಾಂಗ್ರೆಸ್ನ ಕನಿಷ್ಠ 7 ನಾಯಕರು ಗಾಯಗೊಂಡಿದ್ದಾರೆ ಎಂದು ಶಾಸಕರೊಬ್ಬರು ತಿಳಿಸಿದ್ದಾರೆ.</p><p>ಮಧ್ಯಪ್ರದೇಶ ವಿಧಾನಸಭೆಗೆ ಕಾಲ್ನಡಿಗೆ ಮೂಲಕ ತೆರಳುವ ಮುನ್ನ ರಂಗಮಹಲ್ ಚೌಕಿ ಸಮೀಪ ನಡೆದ ಪ್ರತಿಭಟನಾ ಸಮಾವೇಶದಲ್ಲಿ ನಾಯಕರು ಭಾಷಣ ಮಾಡುತ್ತಿದ್ದಾಗ ವೇದಿಕೆ ಕುಸಿದಿದೆ ಎಂದು ಶಾಸಕ ಜೈವರ್ಧನ್ ಸಿಂಗ್ ತಿಳಿಸಿದ್ದಾರೆ.</p>.ಮಧ್ಯಪ್ರದೇಶ | ರೈತರಿಗೆ ₹5ಕ್ಕೆ ಶಾಶ್ವತ ವಿದ್ಯುತ್ ಸಂಪರ್ಕ: ಸಿಎಂ ಮೋಹನ್ ಯಾದವ್. <p>ರಾಜ್ಯ ಸರ್ಕಾರ ರೈತ ವಿರೋಧಿ ನಿಲುವುಗಳನ್ನು ವಿರೋಧಿಸಿ ಪ್ರತಿಭಟನಾ ಸಮಾವೇಶ ಆಯೋಜಿಸಲಾಗಿತ್ತು ಎಂದು ಅವರು ತಿಳಿಸಿದ್ದಾರೆ.</p><p>ಅದಾಗ್ಯೂ ಕಾಂಗ್ರೆಸ್ ಕಾರ್ಯಕರ್ತರು ವಿಧಾನಸಭೆಗೆ ಪಾದಯಾತ್ರೆ ನಡೆಸಿದ್ದು, ಅವರನ್ನು ಜಲಫಿರಂಗಿ ಹಾರಿಸುವ ಮೂಲಕ ಪೊಲೀಸರು ತಡೆದಿದ್ದಾರೆ.</p>.ಮಧ್ಯಪ್ರದೇಶ | ಟ್ರಕ್–ಎಸ್ಯುವಿ ಡಿಕ್ಕಿ: ಮೂವರು ಸಾವು, ಏಳು ಮಂದಿಗೆ ಗಾಯ. <p>‘ಸ್ಥಳದಲ್ಲಿ ನಾವು ಬ್ಯಾರಿಕೇಡ್ ಅಳವಡಿಸಿದ್ದು, ನಾವು ನಮ್ಮ ಕೆಲಸ ಮಾಡುತ್ತಿದ್ದೇವೆ’ ಎಂದು ಭೋಪಾಲ್ ವಿಭಾಗ–1ರ ಹೆಚ್ಚುವರಿ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.</p><p>ಘಟನೆಯಲ್ಲಿ ಗಾಯಗೊಂಡವರ ಸಂಖ್ಯೆಯ ಬಗ್ಗೆ ಮಾಹಿತಿ ಪಡೆದು ತಿಳಿಸುತ್ತೇವೆ ಎಂದು ಎಡಿಜಿಪಿ ಹೇಳಿದ್ದಾರೆ. ಘಟನೆ ಸಂಬಂಧ ಮಾಹಿತಿ ಬಯಸಿ ಟಿಟಿ ನಗರ ಎಸಿಪಿ ಚಂದ್ರಶೇಖರ ಪಾಂಡೆ ಹಾಗೂ ಠಾಣಾಧಿಕಾರಿ ಸುಧೀರ್ ಅವರಿಗೆ ಕರೆ ಮಾಡಿದರೂ ಅವರು ಉತ್ತರಿಸಲಿಲ್ಲ.</p> .ಮಧ್ಯ ಪ್ರದೇಶ: 5,520 ಕೆ.ಜಿ ನಕಲಿ ತುಪ್ಪ ವಶ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>