<p><strong>ಭೋಪಾಲ್</strong>: ಕರ್ನಲ್ ಸೋಫಿಯಾ ಖುರೇಷಿ ಅವರ ವಿರುದ್ಧ ಮಧ್ಯಪ್ರದೇಶದ ಸಚಿವ ವಿಜಯ್ ಶಾ ಆಡಿದ್ದ ಆಕ್ಷೇಪಾರ್ಹ ಹೇಳಿಕೆ ಕುರಿತ ತನಿಖೆಗೆ ರಾಜ್ಯ ಪೊಲೀಸ್ ಇಲಾಖೆ ವಿಶೇಷ ತನಿಖಾ ತಂಡ ರಚಿಸಿದೆ.</p> <p>ಸುಪ್ರೀಂ ಕೋರ್ಟ್ ಆದೇಶದ ಅನುಸಾರ ಈ ತಂಡ ರಚಿಸಲಾಗಿದೆ. ಐಜಿಪಿ ಪ್ರಮೋದ್ ವರ್ಮಾ, ಡಿಐಜಿ ಕಲ್ಯಾಣ್ ಚಕ್ರವರ್ತಿ ಮತ್ತು ಎಸ್ಪಿ ವಾಹಿನಿ ಸಿಂಗ್ ಅವರು ಈ ತಂಡದಲ್ಲಿದ್ದಾರೆ ಎಂದು ಹೇಳಿಕೆ ತಿಳಿಸಿದೆ.</p> <p>ಸಚಿವ ವಿಜಯ್ ಶಾ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಸುಪ್ರೀಂ ಕೋರ್ಟ್,ಸಚಿವರ ವಿರುದ್ಧ ಎಫ್ಐಆರ್ ದಾಖಲಿಸಬೇಕು. ಮಂಗಳವಾರ ಬೆಳಿಗ್ಗೆ 10 ಗಂಟೆಯೊಳಗೆ ಎಸ್ಐಟಿ ರಚಿಸಬೇಕು ಎಂದೂ ನಿರ್ದೇಶಿಸಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯದ ಪೊಲೀಸ್ ಮಹಾನಿರ್ದೇಶಕರು ಎಸ್ಐಟಿ ರಚನೆ ಕುರಿತು ಆದೇಶ ಹೊರಡಿಸಿದ್ದಾರೆ.</p> <p>ತನಿಖಾ ತಂಡವು ಮೇ 28ರ ಒಳಗೆ ವಸ್ತುಸ್ಥಿತಿ ವರದಿ ಸಲ್ಲಿಸಬೇಕು ಎಂದು ಆದೇಶಿಸಿದೆ. </p> <p>ಸಂಪುಟ ಸಭೆಗೆ ಗೈರು: ಸಚಿವ ವಿಜಯ್ ಶಾ ಮಂಗಳವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಗೆ ಹಾಜರಾಗಿರಲಿಲ್ಲ. ಅವರು ಬುಡಕಟ್ಟು ವ್ಯವಹಾರ, ಸಾರ್ವಜನಿಕ ಆಸ್ತಿ ನಿರ್ವಹಣೆ ಸಚಿವರಾಗಿದ್ದಾರೆ.</p> <p>ಇನ್ನೊಂದೆಡೆ, ಆಕ್ಷೇಪಾರ್ಹ ಹೇಳಿಕೆ ಹಿನ್ನಲೆಯಲ್ಲಿ ವಿಜಯ್ ಶಾ ಅವರನ್ನು ಸಂಪುಟದಿಂದ ಕೈಬಿಡಬೇಕು ಎಂಬ ಬೇಡಿಕೆಯನ್ನು ರಾಜ್ಯ ಕಾಂಗ್ರೆಸ್ ಘಟಕ ಪುನರುಚ್ಚರಿಸಿದೆ.</p>.<p><strong>ಸೋಫಿಯಾ ಖುರೇಷಿ ಬಗ್ಗೆ ವಿಜಯ್ ಶಾ ಹೇಳಿದ್ದೇನು?</strong></p><p>‘ಯಾರು ನಮ್ಮ ಹೆಣ್ಣುಮಕ್ಕಳ ಸಿಂಧೂರವನ್ನು ಅಳಿಸಿದರೊ... ಅವರಿಗೆ ತಕ್ಕ ಪಾಠ ಕಲಿಸಲು ಅವರ ಸಹೋದರಿಯನ್ನೇ ಕಳುಹಿಸಿದೆವು’ ಎಂದು ಕರ್ನಲ್ ಸೋಫಿಯಾ ಖುರೇಷಿ ಅವರ ಕುರಿತು ಮಧ್ಯಪ್ರದೇಶದ ಸಚಿವ ವಿಜಯ್ ಶಾ ಅವರು ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ನೀಡಿರುವ ಹೇಳಿಕೆಯು ವಿವಾದಕ್ಕೆ ಕಾರಣವಾಗಿದೆ.</p><p>ಸಾಮಾಜಿಕ ಜಾಲತಾಣಗಳಲ್ಲಿ ಈಚೆಗೆ ಈ ವಿಡಿಯೊವನ್ನು ಭಾರಿ ಸಂಖ್ಯೆಯಲ್ಲಿ ಹಂಚಿಕೊಳ್ಳಲಾಗುತ್ತಿತ್ತು. ವಿಜಯ್ ಅವರ ವಿರುದ್ಧ ಸಾರ್ವಜನಿಕರೂ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವಿಡಿಯೊವನ್ನು ಕಾಂಗ್ರೆಸ್ ಕೂಡ ಹಂಚಿಕೊಂಡಿದ್ದು ತೀವ್ರವಾಗಿ ಟೀಕಿಸಿತ್ತು.</p>.ಕ್ಷಮಾಪಣೆ ಬೇಡ, ನಿಮ್ಮದು ಮೊಸಳೆ ಕಣ್ಣೀರು: ವಿಜಯ್ ಶಾಗೆ ಸುಪ್ರೀಂ ಕೋರ್ಟ್ ತರಾಟೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭೋಪಾಲ್</strong>: ಕರ್ನಲ್ ಸೋಫಿಯಾ ಖುರೇಷಿ ಅವರ ವಿರುದ್ಧ ಮಧ್ಯಪ್ರದೇಶದ ಸಚಿವ ವಿಜಯ್ ಶಾ ಆಡಿದ್ದ ಆಕ್ಷೇಪಾರ್ಹ ಹೇಳಿಕೆ ಕುರಿತ ತನಿಖೆಗೆ ರಾಜ್ಯ ಪೊಲೀಸ್ ಇಲಾಖೆ ವಿಶೇಷ ತನಿಖಾ ತಂಡ ರಚಿಸಿದೆ.</p> <p>ಸುಪ್ರೀಂ ಕೋರ್ಟ್ ಆದೇಶದ ಅನುಸಾರ ಈ ತಂಡ ರಚಿಸಲಾಗಿದೆ. ಐಜಿಪಿ ಪ್ರಮೋದ್ ವರ್ಮಾ, ಡಿಐಜಿ ಕಲ್ಯಾಣ್ ಚಕ್ರವರ್ತಿ ಮತ್ತು ಎಸ್ಪಿ ವಾಹಿನಿ ಸಿಂಗ್ ಅವರು ಈ ತಂಡದಲ್ಲಿದ್ದಾರೆ ಎಂದು ಹೇಳಿಕೆ ತಿಳಿಸಿದೆ.</p> <p>ಸಚಿವ ವಿಜಯ್ ಶಾ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಸುಪ್ರೀಂ ಕೋರ್ಟ್,ಸಚಿವರ ವಿರುದ್ಧ ಎಫ್ಐಆರ್ ದಾಖಲಿಸಬೇಕು. ಮಂಗಳವಾರ ಬೆಳಿಗ್ಗೆ 10 ಗಂಟೆಯೊಳಗೆ ಎಸ್ಐಟಿ ರಚಿಸಬೇಕು ಎಂದೂ ನಿರ್ದೇಶಿಸಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯದ ಪೊಲೀಸ್ ಮಹಾನಿರ್ದೇಶಕರು ಎಸ್ಐಟಿ ರಚನೆ ಕುರಿತು ಆದೇಶ ಹೊರಡಿಸಿದ್ದಾರೆ.</p> <p>ತನಿಖಾ ತಂಡವು ಮೇ 28ರ ಒಳಗೆ ವಸ್ತುಸ್ಥಿತಿ ವರದಿ ಸಲ್ಲಿಸಬೇಕು ಎಂದು ಆದೇಶಿಸಿದೆ. </p> <p>ಸಂಪುಟ ಸಭೆಗೆ ಗೈರು: ಸಚಿವ ವಿಜಯ್ ಶಾ ಮಂಗಳವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಗೆ ಹಾಜರಾಗಿರಲಿಲ್ಲ. ಅವರು ಬುಡಕಟ್ಟು ವ್ಯವಹಾರ, ಸಾರ್ವಜನಿಕ ಆಸ್ತಿ ನಿರ್ವಹಣೆ ಸಚಿವರಾಗಿದ್ದಾರೆ.</p> <p>ಇನ್ನೊಂದೆಡೆ, ಆಕ್ಷೇಪಾರ್ಹ ಹೇಳಿಕೆ ಹಿನ್ನಲೆಯಲ್ಲಿ ವಿಜಯ್ ಶಾ ಅವರನ್ನು ಸಂಪುಟದಿಂದ ಕೈಬಿಡಬೇಕು ಎಂಬ ಬೇಡಿಕೆಯನ್ನು ರಾಜ್ಯ ಕಾಂಗ್ರೆಸ್ ಘಟಕ ಪುನರುಚ್ಚರಿಸಿದೆ.</p>.<p><strong>ಸೋಫಿಯಾ ಖುರೇಷಿ ಬಗ್ಗೆ ವಿಜಯ್ ಶಾ ಹೇಳಿದ್ದೇನು?</strong></p><p>‘ಯಾರು ನಮ್ಮ ಹೆಣ್ಣುಮಕ್ಕಳ ಸಿಂಧೂರವನ್ನು ಅಳಿಸಿದರೊ... ಅವರಿಗೆ ತಕ್ಕ ಪಾಠ ಕಲಿಸಲು ಅವರ ಸಹೋದರಿಯನ್ನೇ ಕಳುಹಿಸಿದೆವು’ ಎಂದು ಕರ್ನಲ್ ಸೋಫಿಯಾ ಖುರೇಷಿ ಅವರ ಕುರಿತು ಮಧ್ಯಪ್ರದೇಶದ ಸಚಿವ ವಿಜಯ್ ಶಾ ಅವರು ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ನೀಡಿರುವ ಹೇಳಿಕೆಯು ವಿವಾದಕ್ಕೆ ಕಾರಣವಾಗಿದೆ.</p><p>ಸಾಮಾಜಿಕ ಜಾಲತಾಣಗಳಲ್ಲಿ ಈಚೆಗೆ ಈ ವಿಡಿಯೊವನ್ನು ಭಾರಿ ಸಂಖ್ಯೆಯಲ್ಲಿ ಹಂಚಿಕೊಳ್ಳಲಾಗುತ್ತಿತ್ತು. ವಿಜಯ್ ಅವರ ವಿರುದ್ಧ ಸಾರ್ವಜನಿಕರೂ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವಿಡಿಯೊವನ್ನು ಕಾಂಗ್ರೆಸ್ ಕೂಡ ಹಂಚಿಕೊಂಡಿದ್ದು ತೀವ್ರವಾಗಿ ಟೀಕಿಸಿತ್ತು.</p>.ಕ್ಷಮಾಪಣೆ ಬೇಡ, ನಿಮ್ಮದು ಮೊಸಳೆ ಕಣ್ಣೀರು: ವಿಜಯ್ ಶಾಗೆ ಸುಪ್ರೀಂ ಕೋರ್ಟ್ ತರಾಟೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>