ಮಿಲಾನಿ ಪರ ವಕೀಲರಾದ ವಿ. ಅರುಣ್ ಅವರ ಪ್ರಕಾರ, ರವೀಂದ್ರನಾಥ್ ಅವರು ಚುನಾವಣೆಗೆ ನಾಮಪತ್ರ ಸಲ್ಲಿಸುವಾಗ, ತಮ್ಮ ಮತ್ತು ಕುಟುಂಬ ಸದಸ್ಯರ ಹೆಸರಿನಲ್ಲಿರುವ ಸ್ಥಿರ ಮತ್ತು ಚರಾಸ್ತಿಗಳು ಸೇರಿ ಬೆಲೆಬಾಳುವ ವಿವಿಧ ವಸ್ತುಗಳ ವಿವರಗಳನ್ನು ಮುಚ್ಚಿಟ್ಟು, ಸುಳ್ಳು ಮಾಹಿತಿ ನೀಡಿದ್ದರು. ಈ ಆರೋಪ ರುಜುವಾತಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಿದ್ದರು. ಸಾಕ್ಷಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವೀಂದ್ರನಾಥ್ ಅವರು ಆಯ್ಕೆಯನ್ನು ಅಸಿಂಧು ಎಂದು ಘೋಷಿಸಿದರು.