<p><strong>ಚೆನ್ನೈ: </strong>ದಿನಕರನ್ ಬಣದಲ್ಲಿ ಗುರುತಿಸಿಕೊಂಡಿದ್ದ ಎಎಐಡಿಎಂಕೆ ಪಕ್ಷದ 18 ಶಾಸಕರು ಅನರ್ಹರು ಎಂದು ಮದ್ರಾಸ್ ಹೈಕೋರ್ಟ್ ತೀರ್ಪು ನೀಡಿದೆ.ಶಾಸಕರನ್ನು ಅನರ್ಹಗೊಳಿಸಿದ್ದ ತಮಿಳುನಾಡು ಸ್ಪೀಕರ್ ನಿರ್ಧಾರವನ್ನು ಸರಿ ಎಂದು ಹೇಳಿ ಮದ್ರಾಸ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸತ್ಯ ನಾರಾಯಣ್ ಈ ತೀರ್ಪು ನೀಡಿದ್ದಾರೆ.</p>.<p>ಪಳನಿಸ್ವಾಮಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಬೇಕು ಎಂದು ಒತ್ತಾಯಿಸಿ 2017 ಸೆಪ್ಟೆಂಬರ್ 18ರಂದು ಸ್ಪೀಕರ್ ಪಿ.ಧನಪಾಲನ್ ಅವರನ್ನು ಸಮೀಪಿಸಿದ್ದ ಎಎಐಡಿಎಂಕೆ ಪಕ್ಷದ 18 ಶಾಸಕರನ್ನು ಅನರ್ಹ ಮಾಡಲಾಗಿತ್ತು. ಸ್ಪೀಕರ್ ಅವರ ತೀರ್ಮಾನವನ್ನು ಪ್ರಶ್ನಿಸಿ ಈ ಶಾಸಕರು ಹೈಕೋರ್ಟ್ ಮೆಟ್ಟಿಲೇರಿದ್ದರು.</p>.<p>1986ರ ಪಕ್ಷಾಂತರ ವಿರೋಧಿ ಮತ್ತು ಅನರ್ಹತೆ ನಿಯಮಗಳ ಅಡಿಯಲ್ಲಿ 18 ಶಾಸಕರನ್ನು ಅನರ್ಹಗೊಳಿಸಲಾಗಿತ್ತು.<br />ಹೈಕೋರ್ಟ್ ನ ವಿಭಾಗೀಯ ಪೀಠ ಕೂಡಾ ಶಾಸಕರು ಅನರ್ಹರು ಎಂದು ಹೇಳಿದ ಕಾರಣ ಅದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರುವ ಸಾಧ್ಯತೆ ಇದೆ ಎಂದು<a href="https://www.hindustantimes.com/india-news/tamil-nadu-government-safe-as-madras-hc-upholds-disqualification-of-18-dissident-mlas/story-fBVIgYUlzTxC9dlsyD2MCL.html" target="_blank"> ಹಿಂದೂಸ್ತಾನ್ ಟೈಮ್ಸ್</a> ಪತ್ರಿಕೆ ವರದಿ ಮಾಡಿದೆ</p>.<p>ತೀರ್ಪಿನ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಟಿಟಿವಿ ದಿನಕರನ್, ಇದು ಹಿನ್ನಡೆ ಎಂದು ನಾವು ಹೇಳುವುದಿಲ್ಲ, ಇದು ಅನುಭವ. ಈ ಪರಿಸ್ಥಿತಿಯನ್ನು ನಾವು ನಿಭಾಯಿಸುತ್ತೇವೆ. 18 ಶಾಸಕರು ಸಭೆ ಸೇರಿ ತೀರ್ಮಾನ ಕೈಗೊಳುತ್ತೇವೆ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ: </strong>ದಿನಕರನ್ ಬಣದಲ್ಲಿ ಗುರುತಿಸಿಕೊಂಡಿದ್ದ ಎಎಐಡಿಎಂಕೆ ಪಕ್ಷದ 18 ಶಾಸಕರು ಅನರ್ಹರು ಎಂದು ಮದ್ರಾಸ್ ಹೈಕೋರ್ಟ್ ತೀರ್ಪು ನೀಡಿದೆ.ಶಾಸಕರನ್ನು ಅನರ್ಹಗೊಳಿಸಿದ್ದ ತಮಿಳುನಾಡು ಸ್ಪೀಕರ್ ನಿರ್ಧಾರವನ್ನು ಸರಿ ಎಂದು ಹೇಳಿ ಮದ್ರಾಸ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸತ್ಯ ನಾರಾಯಣ್ ಈ ತೀರ್ಪು ನೀಡಿದ್ದಾರೆ.</p>.<p>ಪಳನಿಸ್ವಾಮಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಬೇಕು ಎಂದು ಒತ್ತಾಯಿಸಿ 2017 ಸೆಪ್ಟೆಂಬರ್ 18ರಂದು ಸ್ಪೀಕರ್ ಪಿ.ಧನಪಾಲನ್ ಅವರನ್ನು ಸಮೀಪಿಸಿದ್ದ ಎಎಐಡಿಎಂಕೆ ಪಕ್ಷದ 18 ಶಾಸಕರನ್ನು ಅನರ್ಹ ಮಾಡಲಾಗಿತ್ತು. ಸ್ಪೀಕರ್ ಅವರ ತೀರ್ಮಾನವನ್ನು ಪ್ರಶ್ನಿಸಿ ಈ ಶಾಸಕರು ಹೈಕೋರ್ಟ್ ಮೆಟ್ಟಿಲೇರಿದ್ದರು.</p>.<p>1986ರ ಪಕ್ಷಾಂತರ ವಿರೋಧಿ ಮತ್ತು ಅನರ್ಹತೆ ನಿಯಮಗಳ ಅಡಿಯಲ್ಲಿ 18 ಶಾಸಕರನ್ನು ಅನರ್ಹಗೊಳಿಸಲಾಗಿತ್ತು.<br />ಹೈಕೋರ್ಟ್ ನ ವಿಭಾಗೀಯ ಪೀಠ ಕೂಡಾ ಶಾಸಕರು ಅನರ್ಹರು ಎಂದು ಹೇಳಿದ ಕಾರಣ ಅದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರುವ ಸಾಧ್ಯತೆ ಇದೆ ಎಂದು<a href="https://www.hindustantimes.com/india-news/tamil-nadu-government-safe-as-madras-hc-upholds-disqualification-of-18-dissident-mlas/story-fBVIgYUlzTxC9dlsyD2MCL.html" target="_blank"> ಹಿಂದೂಸ್ತಾನ್ ಟೈಮ್ಸ್</a> ಪತ್ರಿಕೆ ವರದಿ ಮಾಡಿದೆ</p>.<p>ತೀರ್ಪಿನ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಟಿಟಿವಿ ದಿನಕರನ್, ಇದು ಹಿನ್ನಡೆ ಎಂದು ನಾವು ಹೇಳುವುದಿಲ್ಲ, ಇದು ಅನುಭವ. ಈ ಪರಿಸ್ಥಿತಿಯನ್ನು ನಾವು ನಿಭಾಯಿಸುತ್ತೇವೆ. 18 ಶಾಸಕರು ಸಭೆ ಸೇರಿ ತೀರ್ಮಾನ ಕೈಗೊಳುತ್ತೇವೆ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>