<p><strong>ಚೆನ್ನೈ:</strong> ಆದಾಯ ತೆರಿಗೆ ಇಲಾಖೆ ₹1.5 ಕೋಟಿ ದಂಡ ವಿಧಿಸಿರುವುದನ್ನು ಪ್ರಶ್ನಿಸಿ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ, ನಟ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಇಂದು (ಶುಕ್ರವಾರ) ವಜಾಗೊಳಿಸಿದೆ. </p><p>2015-16ರ ಆರ್ಥಿಕ ಸಾಲಿನಲ್ಲಿ ಆದಾಯ ಘೋಷಿಸದ ಆರೋಪದ ಮೇಲೆ ಆದಾಯ ತೆರಿಗೆ ಇಲಾಖೆಯು ₹1.50 ಕೋಟಿ ದಂಡ ವಿಧಿಸಿತ್ತು. ಇದನ್ನು ಪ್ರಶ್ನಿಸಿ ವಿಜಯ್ ಕೋರ್ಟ್ ಮೆಟ್ಟಿಲೇರಿದ್ದರು. </p>.ಟಿವಿಕೆ ಏಕಾಂಗಿಯಾಗಿ ಡಿಎಂಕೆಯನ್ನು ಮಣಿಸಬಲ್ಲದು: ವಿಜಯ್ .ಮುಂದೆ ನಡೆಯಲಿರುವುದು ಕೇವಲ ಚುನಾವಣೆಯಲ್ಲ, ಅದೊಂದು ಯುದ್ಧ: TVK ಮುಖ್ಯಸ್ಥ ವಿಜಯ್.<p>ಈ ಕುರಿತು ನ್ಯಾಯಮೂರ್ತಿ ಸೆಂಥಿಲ್ ಕುಮಾರ್ ರಾಮಮೂರ್ತಿ ಆದೇಶ ಹೊರಡಿಸಿದ್ದು, ಕಾಲಮಿತಿಯಲ್ಲಿ ತೆರಿಗೆ ಇಲಾಖೆಯು ಕ್ರಮ ಕೈಗೊಂಡಿದ್ದು, ಹಸ್ತಕ್ಷೇಪ ಮಾಡುವ ಅಗತ್ಯವಿಲ್ಲ ಎಂದಿದ್ದಾರೆ. </p><p>ಎರಡೂ ಕಡೆಯ ವಾದಗಳನ್ನು ಆಲಿಸಿದ ಬಳಿಕ ಜನವರಿ 23ರಂದು ಆದೇಶವನ್ನು ಕಾಯ್ದಿರಿಸಲಾಗಿತ್ತು. </p><p><strong>ಏನಿದು ಪ್ರಕರಣ?</strong></p><p>2016-17ರ ಆರ್ಥಿಕ ಸಾಲಿನಲ್ಲಿ ವಿಜಯ್ ₹35.42 ಕೋಟಿ ಆದಾಯ ಘೋಷಿಸಿದ್ದರು. ಆದರೆ 2015ರಲ್ಲಿ ವಿಜಯ್ ನಿವಾಸದ ಮೇಲೆ ತೆರಿಗೆ ಇಲಾಖೆ ನಡೆಸಿದ ದಾಳಿಯಲ್ಲಿ ವಶಪಡಿಸಿಕೊಂಡ ಆಧಾರದಲ್ಲಿ ತಮಿಳಿನ 'ಪುಲಿ' ಚಿತ್ರದಿಂದ ಗಳಿಸಿದ ₹15 ಕೋಟಿ ಆದಾಯವನ್ನು ಬಹಿರಂಗಪಡಿಸಿಲ್ಲ ಎಂದು ಆರೋಪಿಸಿತ್ತು. </p><p>ದಾಖಲೆಗಳ ಪರಿಶೀಲನೆಗಳ ಆಧಾರದಲ್ಲಿ 2022ರ ಜೂನ್ 30ರಂದು ವಿಜಯ್ ಮೇಲೆ ₹1.50 ಕೋಟಿ ದಂಡ ವಿಧಿಸಲಾಗಿತ್ತು. ಇದನ್ನು ಪ್ರಶ್ನಿಸಿ ನ್ಯಾಯಾಲಯದಲ್ಲಿ ವಿಜಯ್ ಮೇಲ್ಮನವಿ ಸಲ್ಲಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ಆದಾಯ ತೆರಿಗೆ ಇಲಾಖೆ ₹1.5 ಕೋಟಿ ದಂಡ ವಿಧಿಸಿರುವುದನ್ನು ಪ್ರಶ್ನಿಸಿ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ, ನಟ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಇಂದು (ಶುಕ್ರವಾರ) ವಜಾಗೊಳಿಸಿದೆ. </p><p>2015-16ರ ಆರ್ಥಿಕ ಸಾಲಿನಲ್ಲಿ ಆದಾಯ ಘೋಷಿಸದ ಆರೋಪದ ಮೇಲೆ ಆದಾಯ ತೆರಿಗೆ ಇಲಾಖೆಯು ₹1.50 ಕೋಟಿ ದಂಡ ವಿಧಿಸಿತ್ತು. ಇದನ್ನು ಪ್ರಶ್ನಿಸಿ ವಿಜಯ್ ಕೋರ್ಟ್ ಮೆಟ್ಟಿಲೇರಿದ್ದರು. </p>.ಟಿವಿಕೆ ಏಕಾಂಗಿಯಾಗಿ ಡಿಎಂಕೆಯನ್ನು ಮಣಿಸಬಲ್ಲದು: ವಿಜಯ್ .ಮುಂದೆ ನಡೆಯಲಿರುವುದು ಕೇವಲ ಚುನಾವಣೆಯಲ್ಲ, ಅದೊಂದು ಯುದ್ಧ: TVK ಮುಖ್ಯಸ್ಥ ವಿಜಯ್.<p>ಈ ಕುರಿತು ನ್ಯಾಯಮೂರ್ತಿ ಸೆಂಥಿಲ್ ಕುಮಾರ್ ರಾಮಮೂರ್ತಿ ಆದೇಶ ಹೊರಡಿಸಿದ್ದು, ಕಾಲಮಿತಿಯಲ್ಲಿ ತೆರಿಗೆ ಇಲಾಖೆಯು ಕ್ರಮ ಕೈಗೊಂಡಿದ್ದು, ಹಸ್ತಕ್ಷೇಪ ಮಾಡುವ ಅಗತ್ಯವಿಲ್ಲ ಎಂದಿದ್ದಾರೆ. </p><p>ಎರಡೂ ಕಡೆಯ ವಾದಗಳನ್ನು ಆಲಿಸಿದ ಬಳಿಕ ಜನವರಿ 23ರಂದು ಆದೇಶವನ್ನು ಕಾಯ್ದಿರಿಸಲಾಗಿತ್ತು. </p><p><strong>ಏನಿದು ಪ್ರಕರಣ?</strong></p><p>2016-17ರ ಆರ್ಥಿಕ ಸಾಲಿನಲ್ಲಿ ವಿಜಯ್ ₹35.42 ಕೋಟಿ ಆದಾಯ ಘೋಷಿಸಿದ್ದರು. ಆದರೆ 2015ರಲ್ಲಿ ವಿಜಯ್ ನಿವಾಸದ ಮೇಲೆ ತೆರಿಗೆ ಇಲಾಖೆ ನಡೆಸಿದ ದಾಳಿಯಲ್ಲಿ ವಶಪಡಿಸಿಕೊಂಡ ಆಧಾರದಲ್ಲಿ ತಮಿಳಿನ 'ಪುಲಿ' ಚಿತ್ರದಿಂದ ಗಳಿಸಿದ ₹15 ಕೋಟಿ ಆದಾಯವನ್ನು ಬಹಿರಂಗಪಡಿಸಿಲ್ಲ ಎಂದು ಆರೋಪಿಸಿತ್ತು. </p><p>ದಾಖಲೆಗಳ ಪರಿಶೀಲನೆಗಳ ಆಧಾರದಲ್ಲಿ 2022ರ ಜೂನ್ 30ರಂದು ವಿಜಯ್ ಮೇಲೆ ₹1.50 ಕೋಟಿ ದಂಡ ವಿಧಿಸಲಾಗಿತ್ತು. ಇದನ್ನು ಪ್ರಶ್ನಿಸಿ ನ್ಯಾಯಾಲಯದಲ್ಲಿ ವಿಜಯ್ ಮೇಲ್ಮನವಿ ಸಲ್ಲಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>