<p><strong>ಚೆನ್ನೈ</strong>: ತಮಿಳುನಾಡು ಉನ್ನತ ಶಿಕ್ಷಣ ಸಚಿವ ಗೋವಿ ಚೆಳಿಯನ್ ಅವರು ಗುರುವಾರ ರಾಜ್ಯಪಾಲ ಆರ್.ಎನ್.ರವಿ ಅವರು ಅಧ್ಯಕ್ಷತೆ ವಹಿಸಿದ್ದ ಮದ್ರಾಸ್ ವಿಶ್ವವಿದ್ಯಾಲಯದ 167ನೇ ಘಟಿಕೋತ್ಸವ ಕಾರ್ಯಕ್ರಮವನ್ನು ಬಹಿಷ್ಕರಿಸಿದ್ದಾರೆ.</p>.<p>‘ರಾಜ್ಯಪಾಲರು ಚುನಾಯಿತ ಸರ್ಕಾರದ ವಿರುದ್ಧ ನಡೆದುಕೊಳ್ಳುತ್ತಿದ್ದು, ಪದವಿ ಪ್ರದಾನ ಮಾಡಲು ರಾಜ್ಯಪಾಲರಿಗೆ ಯಾವುದೇ ಅರ್ಹತೆ ಇಲ್ಲ’ ಎಂದು ತಿಳಿಸಿದ್ದಾರೆ.</p>.<p class="bodytext">‘ರಾಜ್ಯಪಾಲ ಆರ್.ಎನ್.ರವಿ ಅವರು ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡುವ ಯಾವುದೇ ಅರ್ಹತೆ ಹೊಂದಿಲ್ಲ. ಹೀಗಾಗಿ, ಮದ್ರಾಸ್ ವಿಶ್ವವಿದ್ಯಾಲಯ ಘಟಿಕೋತ್ಸವದಲ್ಲಿ ರಾಜ್ಯಪಾಲರು ಭಾಗವಹಿಸುವ ಕಾರ್ಯಕ್ರಮದಿಂದಲೇ ದೂರ ಉಳಿಯುತ್ತೇನೆ’ ಎಂದು ಚೆಳಿಯನ್ ಅವರು ಮಾಧ್ಯಮಗಳಿಗೆ ಬಿಡುಗಡೆಗೊಳಿಸಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ. </p>.<p class="bodytext">ರಾಜ್ಯ ವಿಧಾನಸಭೆ ಅಧಿವೇಶನದ ಮೊದಲ ದಿನ ರಾಜ್ಯಪಾಲ ಆರ್.ಎನ್.ರವಿ ಅವರು ಭಾಷಣ ಮಾಡದೇ, ಹೊರ ನಡೆದಿದ್ದನ್ನು ಟೀಕಿಸಿದ ಅವರು, ರಾಜ್ಯ ಸರ್ಕಾರದ ವಿರುದ್ಧ ಆರೋಪಗಳನ್ನು ಹೊರಿಸುವುದರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.</p>.<p class="bodytext">‘ರಾಜ್ಯಪಾಲರು ಚುನಾಯಿತ ಸರ್ಕಾರ ಹಾಗೂ ಸಂವಿಧಾನದ ವಿರುದ್ಧ ನಡೆದುಕೊಂಡಿದ್ದಾರೆ. ರವಿ ಅವರು ಸದನದ ಘನತೆಗೆ ಕುಂದುತಂದಿದ್ದು, ತಮಿಳು ಭಾಷೆ ಹಾಗೂ ತಮಿಳರ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ’ ಎಂದು ದೂರಿದ್ದಾರೆ.</p>.<p class="bodytext">ಘಟಿಕೋತ್ಸವವು ಗುರುವಾರ ಬೆಳಿಗ್ಗೆ 10.30ಕ್ಕೆ ಕುಲಪತಿ ಅವರ ಅನುಪಸ್ಥಿತಿಯಲ್ಲಿ ನಡೆಯಿತು. ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಪಿ.ಶಂಕರ್ ಅವರು ಪ್ರಮಾಣಪತ್ರಗಳಿಗೆ ಸಹಿ ಹಾಕಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ</strong>: ತಮಿಳುನಾಡು ಉನ್ನತ ಶಿಕ್ಷಣ ಸಚಿವ ಗೋವಿ ಚೆಳಿಯನ್ ಅವರು ಗುರುವಾರ ರಾಜ್ಯಪಾಲ ಆರ್.ಎನ್.ರವಿ ಅವರು ಅಧ್ಯಕ್ಷತೆ ವಹಿಸಿದ್ದ ಮದ್ರಾಸ್ ವಿಶ್ವವಿದ್ಯಾಲಯದ 167ನೇ ಘಟಿಕೋತ್ಸವ ಕಾರ್ಯಕ್ರಮವನ್ನು ಬಹಿಷ್ಕರಿಸಿದ್ದಾರೆ.</p>.<p>‘ರಾಜ್ಯಪಾಲರು ಚುನಾಯಿತ ಸರ್ಕಾರದ ವಿರುದ್ಧ ನಡೆದುಕೊಳ್ಳುತ್ತಿದ್ದು, ಪದವಿ ಪ್ರದಾನ ಮಾಡಲು ರಾಜ್ಯಪಾಲರಿಗೆ ಯಾವುದೇ ಅರ್ಹತೆ ಇಲ್ಲ’ ಎಂದು ತಿಳಿಸಿದ್ದಾರೆ.</p>.<p class="bodytext">‘ರಾಜ್ಯಪಾಲ ಆರ್.ಎನ್.ರವಿ ಅವರು ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡುವ ಯಾವುದೇ ಅರ್ಹತೆ ಹೊಂದಿಲ್ಲ. ಹೀಗಾಗಿ, ಮದ್ರಾಸ್ ವಿಶ್ವವಿದ್ಯಾಲಯ ಘಟಿಕೋತ್ಸವದಲ್ಲಿ ರಾಜ್ಯಪಾಲರು ಭಾಗವಹಿಸುವ ಕಾರ್ಯಕ್ರಮದಿಂದಲೇ ದೂರ ಉಳಿಯುತ್ತೇನೆ’ ಎಂದು ಚೆಳಿಯನ್ ಅವರು ಮಾಧ್ಯಮಗಳಿಗೆ ಬಿಡುಗಡೆಗೊಳಿಸಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ. </p>.<p class="bodytext">ರಾಜ್ಯ ವಿಧಾನಸಭೆ ಅಧಿವೇಶನದ ಮೊದಲ ದಿನ ರಾಜ್ಯಪಾಲ ಆರ್.ಎನ್.ರವಿ ಅವರು ಭಾಷಣ ಮಾಡದೇ, ಹೊರ ನಡೆದಿದ್ದನ್ನು ಟೀಕಿಸಿದ ಅವರು, ರಾಜ್ಯ ಸರ್ಕಾರದ ವಿರುದ್ಧ ಆರೋಪಗಳನ್ನು ಹೊರಿಸುವುದರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.</p>.<p class="bodytext">‘ರಾಜ್ಯಪಾಲರು ಚುನಾಯಿತ ಸರ್ಕಾರ ಹಾಗೂ ಸಂವಿಧಾನದ ವಿರುದ್ಧ ನಡೆದುಕೊಂಡಿದ್ದಾರೆ. ರವಿ ಅವರು ಸದನದ ಘನತೆಗೆ ಕುಂದುತಂದಿದ್ದು, ತಮಿಳು ಭಾಷೆ ಹಾಗೂ ತಮಿಳರ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ’ ಎಂದು ದೂರಿದ್ದಾರೆ.</p>.<p class="bodytext">ಘಟಿಕೋತ್ಸವವು ಗುರುವಾರ ಬೆಳಿಗ್ಗೆ 10.30ಕ್ಕೆ ಕುಲಪತಿ ಅವರ ಅನುಪಸ್ಥಿತಿಯಲ್ಲಿ ನಡೆಯಿತು. ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಪಿ.ಶಂಕರ್ ಅವರು ಪ್ರಮಾಣಪತ್ರಗಳಿಗೆ ಸಹಿ ಹಾಕಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>