ಎಸ್.ಜಿ. ಸೂರ್ಯ ಬಂಧನ ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಅಣ್ಣಾಮಲೈ, 'ಬಿಜೆಪಿ ರಾಜ್ಯ ಕಾರ್ಯದರ್ಶಿ ಎಸ್.ಜಿ. ಸೂರ್ಯ ಅವರನ್ನು ಬಂಧಿಸಿರುವುದು ತೀವ್ರ ಖಂಡನೀಯ. ಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡಿರುವ ಕಮ್ಯುನಿಸ್ಟ್ ಪಕ್ಷದ ಇಬ್ಬಗೆಯ ನೀತಿಯನ್ನು ಬಯಲು ಮಾಡಿದ್ದೇ ಸೂರ್ಯ ಮಾಡಿದ ಏಕೈಕ ತಪ್ಪು. ಈ ರೀತಿಯ ಬಂಧನಗಳಿಂದ ನಮ್ಮನ್ನು ತಡೆಯಲಾಗದು. ಇಂತಹ ಕಹಿ ಸತ್ಯಗಳನ್ನು ಹೇಳುವುದನ್ನು ಮುಂದುವರಿಸುತ್ತೇವೆ' ಎಂದಿದ್ದಾರೆ.