ಪರಿಶಿಷ್ಟ ಜಾತಿಗೆ ಸೇರಿರುವ ಸಂತ್ರಸ್ತ ಅಶೋಕ್ ಸಾಕೇತ್, ಪಾಡ್ರಿ ಗ್ರಾಮದ ನಿವಾಸಿಯಾಗಿದ್ದು ಈ ಮೊದಲು ಡೊಲ್ಮಾವು ಗ್ರಾಮದ ಗಣೇಶ ಮಿಶ್ರಾ ಅವರ ನಿರ್ಮಾಣ ಕೆಲಸದಲ್ಲಿ ಕಾರ್ಮಿಕನಾಗಿ ದುಡಿಯುತ್ತಿದ್ದರು. ಬಾಕಿ ಕೂಲಿಯ ಸಂಬಂಧ ಸಾಕೇತ್ ಮತ್ತು ಮಿಶ್ರಾ ನಡುವೆ ಮಾತಿನ ಚಕಮಕಿ ನಡೆದಿದೆ. ಬಳಿಕ ಮಾತು ವಿಕೋಪಕ್ಕೆ ತಿರುಗಿ ಮಿಶ್ರಾ ಮತ್ತು ಆತನ ಕಡೆಯವರು ಹರಿತ ಆಯುಧದಿಂದ ಸಾಕೇತ್ ಮೇಲೆ ಹಲ್ಲೆ ನಡೆಸಿದ್ದಾರೆ. ಮಿಶ್ರಾ ಅವರು ಆಯುಧದಿಂದ ಸಾಕೇತ್ ಕೈ ಕತ್ತರಿಸಿದ್ದಾರೆ ಎಂದು ಸಹಾಯಕ ಪೊಲೀಸ್ ಅಧೀಕ್ಷಕ ಶಿವಕುಮಾರ್ ವರ್ಮಾ ಹೇಳಿದರು.