<p><strong>ಭೋಪಾಲ್:</strong> ಕ್ಷಣಕ್ಷಣಕ್ಕೂ ಬದಲಾಗುತ್ತಿದ್ದ ಮಧ್ಯಪ್ರದೇಶ ವಿಧಾನಸಭೆ ಚುನಾವಣೆ ಫಲಿತಾಂಶದ ತೂಗುಯ್ಯಾಲೆ ಕೊನೆಯ ಕ್ಷಣದವರೆಗೂ ಎಲ್ಲರನ್ನೂ ತುದಿಗಾಲ ಮೇಲೆ ನಿಲ್ಲುವಂತೆ ಮಾಡಿತ್ತು.</p>.<p>ದೇಶದ ರಾಜಕೀಯ ಇತಿಹಾಸದಲ್ಲಿ ಹಿಂದೆಂದೂ ಕಾಣದ ತುರುಸಿನ ಪೈಪೋಟಿಗೆ ಮಧ್ಯ ಪ್ರದೇಶ ಮತ ಎಣಿಕೆ ಸಾಕ್ಷಿಯಾಯಿತು.</p>.<p>ಮಂಗಳವಾರ ತಡರಾತ್ರಿಯವರೆಗೂ ಮತ ಎಣಿಕೆ ಮುಂದುವರಿದಿತ್ತು. ವಿಜಯಮಾಲೆ ಒಮ್ಮೆ ಬಿಜೆಪಿಯತ್ತ ವಾಲಿದರೆ, ಮರುಕ್ಷಣದಲ್ಲಿ ಕಾಂಗ್ರೆಸ್ ನತ್ತ ವಾಲುತ್ತಿತ್ತು. ಯಾರು ಗೆಲ್ಲಬಹುದು ಎಂದು ಊಹಿಸಲು ಯಾರಿಂದಲೂ ಸಾಧ್ಯವಾಗಲಿಲ್ಲ.</p>.<p>ಕ್ಷಣ, ಕ್ಷಣಕ್ಕೂ ಬದಲಾಗುತ್ತಿದ್ದ ಚುನಾವಣಾ ಫಲಿತಾಂಶದ ಸ್ಪಷ್ಟ ಚಿತ್ರಣ ಪತ್ರಿಕೆ ಮುದ್ರಣಕ್ಕೆ ಹೋಗುವ ಕ್ಷಣದವರೆಗೂ ದೊರೆಯಲಿಲ್ಲ. ಎರಡೂ ಪಕ್ಷಗಳ ನಡುವೆ ಕೂದಲೆಳೆಯ ಅಂತರವಿದ್ದ ಕಾರಣ ಗೆಲುವು ಯಾರದ್ದು ಎನ್ನುವುದು ಕೊನೆಯ ಕ್ಷಣದವರೆಗೂ ನಿಗೂಢವಾಗಿತ್ತು.</p>.<p class="Subhead">ಮ್ಯಾಜಿಕ್ ನಂಬರ್ ತಲುಪದ ಪಕ್ಷಗಳು:ಮಧ್ಯ ಪ್ರದೇಶದ 230 ವಿಧಾನಸಭಾ ಸ್ಥಾನಗಳ ಪೈಕಿ ಸರಳ ಬಹುಮತ ಪಡೆಯುವ 116 ಮ್ಯಾಜಿಕ್ ನಂಬರ್ನತ್ತ ಎರಡೂ ಪಕ್ಷಗಳು ದಾಪುಗಾಲು ಹಾಕಿದ್ದವು. ಇನ್ನೇನು ಮ್ಯಾಜಿಕ್ ನಂಬರ್ ತಲುಪಬೇಕು ಎನ್ನುವಷ್ಟರಲ್ಲಿ ಓಟ ನಿಲ್ಲಿಸಿದವು.</p>.<p>ಈ ಸುದ್ದಿ ಅಚ್ಚಿಗೆ ಹೋಗುವ ವೇಳೆಗೆ ಕಾಂಗ್ರೆಸ್ 114 ಮತ್ತು ಬಿಜೆಪಿ 109 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದವು. ಎರಡು ಕ್ಷೇತ್ರಗಳಲ್ಲಿ ಬಿಎಸ್ಪಿ ಅಭ್ಯರ್ಥಿಗಳು ಮತ್ತು ಐದು ಸ್ಥಾನಗಳಲ್ಲಿ ಪಕ್ಷೇತರರು ಮುನ್ನಡೆ ಸಾಧಿಸಿದ್ದರು.</p>.<p>ಯಾರೂ ನಿರೀಕ್ಷಿಸದ ಈ ಅಚ್ಚರಿಯ ಬೆಳವಣಿಗೆ ಕುರಿತು ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರು ಮೂಕ ಪ್ರೇಕ್ಷಕರಾಗಿದ್ದು ಕಾಯ್ದು ನೋಡುವ ತಂತ್ರಕ್ಕೆ ಶರಣಾಗಿದ್ದಾರೆ.</p>.<p>ಭೋಪಾಲ್ನಲ್ಲಿ ಬಿಡಾರ ಹೂಡಿರುವ ಎರಡೂ ಪಕ್ಷಗಳ ನಾಯಕರು ರಣತಂತ್ರ ರೂಪಿಸುತ್ತಿದ್ದು ತುರುಸಿನ ರಾಜಕೀಯ ಚಟುವಟಿಕೆಗಳು ನಡೆಯುತ್ತಿವೆ.</p>.<p><strong>ಕೈ ಹಿಡಿದ ವಿಂಧ್ಯ</strong></p>.<p>2013ರಲ್ಲಿ 165ರಷ್ಟಿದ್ದ ಬಿಜೆಪಿಯ ಬಲ 109ಕ್ಕೆ ಕುಸಿದಿದೆ. ಕಾಂಗ್ರೆಸ್ ನಿರೀಕ್ಷೆಗೂ ಮೀರಿ ಚೇತರಿಸಿಕೊಂಡಿದೆ. ಕಳೆದ ಬಾರಿ 58 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದ ಕಾಂಗ್ರೆಸ್ ಈ ಬಾರಿ 114 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.</p>.<p>ವಿಂಧ್ಯ ಪ್ರದೇಶದಲ್ಲಿ ಹೊರತುಪಡಿಸಿ ರಾಜ್ಯದ ಉಳಿದೆಡೆ ಕಾಂಗ್ರೆಸ್ ಉತ್ತಮ ಸಾಧನೆ ಮಾಡಿದೆ. ವಿಂಧ್ಯದಲ್ಲಿ ಕಳೆದ ಬಾರಿ 12 ಸ್ಥಾನದಲ್ಲಿ ಗೆಲುವು ಸಾಧಿಸಿದ್ದ ಬಿಜೆಪಿ ಈ ಬಾರಿ 6 ಕ್ಷೇತ್ರಗಳನ್ನು ಕಳೆದುಕೊಂಡಿದೆ. ಇಲ್ಲಿ ಬಿಜೆಪಿ ಬಲ 16ರಿಂದ 22ಕ್ಕೆ ಏರಿದೆ.</p>.<p>ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಸಂಪುಟದ ಶಾಸಕರು ಮತ್ತು 12ಕ್ಕೂ ಹೆಚ್ಚು ಸಚಿವರು ಸೋಲುಂಡಿದ್ದಾರೆ. ಚಂಬಲ್, ಬುಂದೇಲಖಂಡ್ ಮತ್ತು ಮಾಳ್ವಾದಲ್ಲಿ ಬಿಜೆಪಿಗೆ ಭಾರಿ ಪೆಟ್ಟು ಬಿದ್ದಿದೆ.</p>.<p>ಬಿಜೆಪಿ ಭದ್ರಕೋಟೆಗಳಾಗಿದ್ದ ಭೋಪಾಲ್, ಜಬಲಪುರ್, ಇಂದೋರ್, ಗ್ವಾಲಿಯರ್ನಂತಹ ದೊಡ್ಡ ನಗರಗಳಲ್ಲಿ ಕಾಂಗ್ರೆಸ್ ಉತ್ತಮ ಸಾಧನೆ ಮಾಡಿದೆ. ಮಧ್ಯ ಪ್ರದೇಶದಲ್ಲಿ ಈ ಬಾರಿ ನಗರ ಮತ್ತು ಗ್ರಾಮೀಣ ಭಾಗಗಳ ಮತದಾರ ಕಾಂಗ್ರೆಸ್ ಕೈ ಹಿಡಿದಿರುವುದು ಅಚ್ಚರಿಯಬೆಳವಣಿಗೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭೋಪಾಲ್:</strong> ಕ್ಷಣಕ್ಷಣಕ್ಕೂ ಬದಲಾಗುತ್ತಿದ್ದ ಮಧ್ಯಪ್ರದೇಶ ವಿಧಾನಸಭೆ ಚುನಾವಣೆ ಫಲಿತಾಂಶದ ತೂಗುಯ್ಯಾಲೆ ಕೊನೆಯ ಕ್ಷಣದವರೆಗೂ ಎಲ್ಲರನ್ನೂ ತುದಿಗಾಲ ಮೇಲೆ ನಿಲ್ಲುವಂತೆ ಮಾಡಿತ್ತು.</p>.<p>ದೇಶದ ರಾಜಕೀಯ ಇತಿಹಾಸದಲ್ಲಿ ಹಿಂದೆಂದೂ ಕಾಣದ ತುರುಸಿನ ಪೈಪೋಟಿಗೆ ಮಧ್ಯ ಪ್ರದೇಶ ಮತ ಎಣಿಕೆ ಸಾಕ್ಷಿಯಾಯಿತು.</p>.<p>ಮಂಗಳವಾರ ತಡರಾತ್ರಿಯವರೆಗೂ ಮತ ಎಣಿಕೆ ಮುಂದುವರಿದಿತ್ತು. ವಿಜಯಮಾಲೆ ಒಮ್ಮೆ ಬಿಜೆಪಿಯತ್ತ ವಾಲಿದರೆ, ಮರುಕ್ಷಣದಲ್ಲಿ ಕಾಂಗ್ರೆಸ್ ನತ್ತ ವಾಲುತ್ತಿತ್ತು. ಯಾರು ಗೆಲ್ಲಬಹುದು ಎಂದು ಊಹಿಸಲು ಯಾರಿಂದಲೂ ಸಾಧ್ಯವಾಗಲಿಲ್ಲ.</p>.<p>ಕ್ಷಣ, ಕ್ಷಣಕ್ಕೂ ಬದಲಾಗುತ್ತಿದ್ದ ಚುನಾವಣಾ ಫಲಿತಾಂಶದ ಸ್ಪಷ್ಟ ಚಿತ್ರಣ ಪತ್ರಿಕೆ ಮುದ್ರಣಕ್ಕೆ ಹೋಗುವ ಕ್ಷಣದವರೆಗೂ ದೊರೆಯಲಿಲ್ಲ. ಎರಡೂ ಪಕ್ಷಗಳ ನಡುವೆ ಕೂದಲೆಳೆಯ ಅಂತರವಿದ್ದ ಕಾರಣ ಗೆಲುವು ಯಾರದ್ದು ಎನ್ನುವುದು ಕೊನೆಯ ಕ್ಷಣದವರೆಗೂ ನಿಗೂಢವಾಗಿತ್ತು.</p>.<p class="Subhead">ಮ್ಯಾಜಿಕ್ ನಂಬರ್ ತಲುಪದ ಪಕ್ಷಗಳು:ಮಧ್ಯ ಪ್ರದೇಶದ 230 ವಿಧಾನಸಭಾ ಸ್ಥಾನಗಳ ಪೈಕಿ ಸರಳ ಬಹುಮತ ಪಡೆಯುವ 116 ಮ್ಯಾಜಿಕ್ ನಂಬರ್ನತ್ತ ಎರಡೂ ಪಕ್ಷಗಳು ದಾಪುಗಾಲು ಹಾಕಿದ್ದವು. ಇನ್ನೇನು ಮ್ಯಾಜಿಕ್ ನಂಬರ್ ತಲುಪಬೇಕು ಎನ್ನುವಷ್ಟರಲ್ಲಿ ಓಟ ನಿಲ್ಲಿಸಿದವು.</p>.<p>ಈ ಸುದ್ದಿ ಅಚ್ಚಿಗೆ ಹೋಗುವ ವೇಳೆಗೆ ಕಾಂಗ್ರೆಸ್ 114 ಮತ್ತು ಬಿಜೆಪಿ 109 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದವು. ಎರಡು ಕ್ಷೇತ್ರಗಳಲ್ಲಿ ಬಿಎಸ್ಪಿ ಅಭ್ಯರ್ಥಿಗಳು ಮತ್ತು ಐದು ಸ್ಥಾನಗಳಲ್ಲಿ ಪಕ್ಷೇತರರು ಮುನ್ನಡೆ ಸಾಧಿಸಿದ್ದರು.</p>.<p>ಯಾರೂ ನಿರೀಕ್ಷಿಸದ ಈ ಅಚ್ಚರಿಯ ಬೆಳವಣಿಗೆ ಕುರಿತು ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರು ಮೂಕ ಪ್ರೇಕ್ಷಕರಾಗಿದ್ದು ಕಾಯ್ದು ನೋಡುವ ತಂತ್ರಕ್ಕೆ ಶರಣಾಗಿದ್ದಾರೆ.</p>.<p>ಭೋಪಾಲ್ನಲ್ಲಿ ಬಿಡಾರ ಹೂಡಿರುವ ಎರಡೂ ಪಕ್ಷಗಳ ನಾಯಕರು ರಣತಂತ್ರ ರೂಪಿಸುತ್ತಿದ್ದು ತುರುಸಿನ ರಾಜಕೀಯ ಚಟುವಟಿಕೆಗಳು ನಡೆಯುತ್ತಿವೆ.</p>.<p><strong>ಕೈ ಹಿಡಿದ ವಿಂಧ್ಯ</strong></p>.<p>2013ರಲ್ಲಿ 165ರಷ್ಟಿದ್ದ ಬಿಜೆಪಿಯ ಬಲ 109ಕ್ಕೆ ಕುಸಿದಿದೆ. ಕಾಂಗ್ರೆಸ್ ನಿರೀಕ್ಷೆಗೂ ಮೀರಿ ಚೇತರಿಸಿಕೊಂಡಿದೆ. ಕಳೆದ ಬಾರಿ 58 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದ ಕಾಂಗ್ರೆಸ್ ಈ ಬಾರಿ 114 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.</p>.<p>ವಿಂಧ್ಯ ಪ್ರದೇಶದಲ್ಲಿ ಹೊರತುಪಡಿಸಿ ರಾಜ್ಯದ ಉಳಿದೆಡೆ ಕಾಂಗ್ರೆಸ್ ಉತ್ತಮ ಸಾಧನೆ ಮಾಡಿದೆ. ವಿಂಧ್ಯದಲ್ಲಿ ಕಳೆದ ಬಾರಿ 12 ಸ್ಥಾನದಲ್ಲಿ ಗೆಲುವು ಸಾಧಿಸಿದ್ದ ಬಿಜೆಪಿ ಈ ಬಾರಿ 6 ಕ್ಷೇತ್ರಗಳನ್ನು ಕಳೆದುಕೊಂಡಿದೆ. ಇಲ್ಲಿ ಬಿಜೆಪಿ ಬಲ 16ರಿಂದ 22ಕ್ಕೆ ಏರಿದೆ.</p>.<p>ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಸಂಪುಟದ ಶಾಸಕರು ಮತ್ತು 12ಕ್ಕೂ ಹೆಚ್ಚು ಸಚಿವರು ಸೋಲುಂಡಿದ್ದಾರೆ. ಚಂಬಲ್, ಬುಂದೇಲಖಂಡ್ ಮತ್ತು ಮಾಳ್ವಾದಲ್ಲಿ ಬಿಜೆಪಿಗೆ ಭಾರಿ ಪೆಟ್ಟು ಬಿದ್ದಿದೆ.</p>.<p>ಬಿಜೆಪಿ ಭದ್ರಕೋಟೆಗಳಾಗಿದ್ದ ಭೋಪಾಲ್, ಜಬಲಪುರ್, ಇಂದೋರ್, ಗ್ವಾಲಿಯರ್ನಂತಹ ದೊಡ್ಡ ನಗರಗಳಲ್ಲಿ ಕಾಂಗ್ರೆಸ್ ಉತ್ತಮ ಸಾಧನೆ ಮಾಡಿದೆ. ಮಧ್ಯ ಪ್ರದೇಶದಲ್ಲಿ ಈ ಬಾರಿ ನಗರ ಮತ್ತು ಗ್ರಾಮೀಣ ಭಾಗಗಳ ಮತದಾರ ಕಾಂಗ್ರೆಸ್ ಕೈ ಹಿಡಿದಿರುವುದು ಅಚ್ಚರಿಯಬೆಳವಣಿಗೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>