<p><strong>ಪ್ರಯಾಗರಾಜ್:</strong> ಮಾಘಮೇಳದ ಅಂಗವಾಗಿ ಮೌನಿ ಅಮಾವಾಸ್ಯೆ ದಿನವಾದ ಭಾನುವಾರ ತ್ರಿವೇಣಿ ಸಂಗಮದಲ್ಲಿ 4.52 ಕೋಟಿಗೂ ಅಧಿಕ ಭಕ್ತರು ಪುಣ್ಯಸ್ನಾನ ಮಾಡಿದರು.</p><p>ಮಧ್ಯರಾತ್ರಿಯಿಂದಲೇ ಭಕ್ತರ ದಂಡು ಗಂಗಾ ಮತ್ತು ಸಂಗಮ ಘಾಟ್ ಕಡೆಗೆ ಹರಿದುಬಂದಿತ್ತು. ದಟ್ಟಮಂಜಿನ ನಡುವೆಯೂ ಭಕ್ತರು ತೀರ್ಥಸ್ನಾನ ಮಾಡಿದರು.</p><p>ಭಕ್ತ ಸಮೂಹದ ಮೇಲೆ ಹೆಲಿಕಾಪ್ಟರ್ ಮೂಲಕ ಪುಷ್ಪವೃಷ್ಟಿ ಮಾಡಲಾಯಿತು.</p><p><strong>ಗೊಂದಲ:</strong> ಅಪಾರ ಬೆಂಬಲಿಗರೊಂದಿಗೆ ತೀರ್ಥಸ್ನಾನಕ್ಕೆ ಆಗಮಿಸಿದ ಜೋತಿರ್ಪೀಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸ್ವಾಮೀಜಿ ಅವರನ್ನು ಪೊಲೀಸರು ತಡೆದ ಕಾರಣ, ಕೆಲ ಸಮಯ ಗೊಂದಲ ಉಂಟಾಯಿತು.</p><p>ಈ ಕುರಿತ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು, ‘ಸ್ವಾಮೀಜಿಯವರಿಗೆ ಅಗೌರವ ತೋರಿರುವ ಬಗ್ಗೆ ತನಿಖೆ ನಡೆಸಬೇಕು’ ಎಂದು ಆಗ್ರಹಿಸಿದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪ್ರಯಾಗರಾಜ್:</strong> ಮಾಘಮೇಳದ ಅಂಗವಾಗಿ ಮೌನಿ ಅಮಾವಾಸ್ಯೆ ದಿನವಾದ ಭಾನುವಾರ ತ್ರಿವೇಣಿ ಸಂಗಮದಲ್ಲಿ 4.52 ಕೋಟಿಗೂ ಅಧಿಕ ಭಕ್ತರು ಪುಣ್ಯಸ್ನಾನ ಮಾಡಿದರು.</p><p>ಮಧ್ಯರಾತ್ರಿಯಿಂದಲೇ ಭಕ್ತರ ದಂಡು ಗಂಗಾ ಮತ್ತು ಸಂಗಮ ಘಾಟ್ ಕಡೆಗೆ ಹರಿದುಬಂದಿತ್ತು. ದಟ್ಟಮಂಜಿನ ನಡುವೆಯೂ ಭಕ್ತರು ತೀರ್ಥಸ್ನಾನ ಮಾಡಿದರು.</p><p>ಭಕ್ತ ಸಮೂಹದ ಮೇಲೆ ಹೆಲಿಕಾಪ್ಟರ್ ಮೂಲಕ ಪುಷ್ಪವೃಷ್ಟಿ ಮಾಡಲಾಯಿತು.</p><p><strong>ಗೊಂದಲ:</strong> ಅಪಾರ ಬೆಂಬಲಿಗರೊಂದಿಗೆ ತೀರ್ಥಸ್ನಾನಕ್ಕೆ ಆಗಮಿಸಿದ ಜೋತಿರ್ಪೀಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸ್ವಾಮೀಜಿ ಅವರನ್ನು ಪೊಲೀಸರು ತಡೆದ ಕಾರಣ, ಕೆಲ ಸಮಯ ಗೊಂದಲ ಉಂಟಾಯಿತು.</p><p>ಈ ಕುರಿತ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು, ‘ಸ್ವಾಮೀಜಿಯವರಿಗೆ ಅಗೌರವ ತೋರಿರುವ ಬಗ್ಗೆ ತನಿಖೆ ನಡೆಸಬೇಕು’ ಎಂದು ಆಗ್ರಹಿಸಿದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>