<p><strong>ಪ್ರಯಾಗರಾಜ್:</strong> ಮಾಘಮೇಳದಲ್ಲಿ ವಸಂತ ಪಂಚಮಿ ದಿನದ ಅಂಗವಾಗಿ ಇಂದು (ಶುಕ್ರವಾರ) ತ್ರಿವೇಣಿ ಸಂಗಮದಲ್ಲಿ ಒಂದು ಕೋಟಿಗೂ ಅಧಿಕ ಭಕ್ತರು ಪುಣ್ಯ ಸ್ನಾನ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ಗುರುವಾರ ಮಧ್ಯರಾತ್ರಿಯಿಂದಲೇ ಭಕ್ತರ ದಂಡು ಗಂಗಾ ಮತ್ತು ಸಂಗಮ ಘಾಟ್ ಕಡೆಗೆ ಹರಿದುಬಂದಿತ್ತು. ಇಂದು ಬೆಳಿಗ್ಗೆ 8 ಗಂಟೆ ವೇಳೆಗೆ ಗಂಗಾ ಹಾಗೂ ಸಂಗಮದಲ್ಲಿ ಒಂದು ಕೋಟಿಗೂ ಅಧಿಕ ಮಂದಿ ಪವಿತ್ರ ಸ್ನಾನ ಮಾಡಿದ್ದಾರೆ ಎಂದು ಅವರು ತಿಳಿಸಿದ್ದಾರೆ. </p>.ಮಾಘ ಮೇಳದಲ್ಲಿ ಗಮನ ಸೆಳೆದ ಏಳು ವರ್ಷಗಳಿಂದ ಒಂದೇ ಕಾಲಿನಲ್ಲಿ ನಿಂತಿರುವ 26ರ ಸಾಧು!.‘ಮಾಘ ಹುಣ್ಣಿಮೆ’ ಸ್ನಾನ: ಕುಂಭಮೇಳ ಸಂಪನ್ನ .<p>'ಗಂಗಾ, ಯಮುನಾ ಮತ್ತು ಗುಪ್ತಗಾಮಿನಿ ಸರಸ್ವತಿ ನದಿ ಸೇರುವ ಸ್ಥಳವಾದ ತ್ರಿವೇಣಿ ಸಂಗಮದಲ್ಲಿ ವಸಂತ ಪಂಚಮಿ ಆಚರಣೆಗೆ ವಿಶೇಷ ಮಹತ್ವವಿದೆ' ಎಂದು ತೀರ್ಥ ಪುರೋಹಿತ ರಾಜೇಂದ್ರ ಮಿಶ್ರಾ ತಿಳಿಸಿದ್ದಾರೆ. </p><p>ಈ ವಿಶೇಷ ದಿನದಂದು ಸರಸ್ವತಿ ದೇವಿಯ ಆರಾಧನೆ, ಪೂಜೆ ಹಾಗೂ ಹಳದಿ ಬಟ್ಟೆಗಳನ್ನು ಧರಿಸಲಾಗುತ್ತದೆ. ವಸಂತಕಾಲದ ಆರಂಭಕ್ಕೆ ಸಂಬಂಧಿಸಿದ ಆಚರಣೆಯು ಇದಾಗಿದೆ. </p><p>ಏಳು ವಲಯಗಳ 800 ಹೆಕ್ಟೇರ್ ಪ್ರದೇಶದಲ್ಲಿ ಮಾಘ ಮೇಳವನ್ನು ಆಯೋಜಿಸಲಾಗಿದೆ. 25 ಸಾವಿರಕ್ಕೂ ಹೆಚ್ಚು ಶೌಚಾಲಯಗಳನ್ನು ನಿರ್ಮಿಸಲಾಗಿದೆ. 3,500ಕ್ಕೂ ಅಧಿಕ ನೈರ್ಮಲ್ಯ ಕಾರ್ಮಿಕರನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ. </p><p>ಧ್ಯಾನ ಹಾಗೂ ಯೋಗ ಮಾಡುವುದಾಗಿ ಸೌಲಭ್ಯಗಳನ್ನು ಏರ್ಪಡಿಸಲಾಗಿದೆ. ಯಾತ್ರಿಕರ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ವ್ಯವಸ್ಥೆ ಕಲ್ಪಿಸಲಾಗಿದೆ. </p><p>ಭಕ್ತರ ಸುರಕ್ಷತೆಗಾಗಿ 10 ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಮಾಘ ಮೇಳ) ನೀರಜ್ ಪಾಂಡೆ ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪ್ರಯಾಗರಾಜ್:</strong> ಮಾಘಮೇಳದಲ್ಲಿ ವಸಂತ ಪಂಚಮಿ ದಿನದ ಅಂಗವಾಗಿ ಇಂದು (ಶುಕ್ರವಾರ) ತ್ರಿವೇಣಿ ಸಂಗಮದಲ್ಲಿ ಒಂದು ಕೋಟಿಗೂ ಅಧಿಕ ಭಕ್ತರು ಪುಣ್ಯ ಸ್ನಾನ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ಗುರುವಾರ ಮಧ್ಯರಾತ್ರಿಯಿಂದಲೇ ಭಕ್ತರ ದಂಡು ಗಂಗಾ ಮತ್ತು ಸಂಗಮ ಘಾಟ್ ಕಡೆಗೆ ಹರಿದುಬಂದಿತ್ತು. ಇಂದು ಬೆಳಿಗ್ಗೆ 8 ಗಂಟೆ ವೇಳೆಗೆ ಗಂಗಾ ಹಾಗೂ ಸಂಗಮದಲ್ಲಿ ಒಂದು ಕೋಟಿಗೂ ಅಧಿಕ ಮಂದಿ ಪವಿತ್ರ ಸ್ನಾನ ಮಾಡಿದ್ದಾರೆ ಎಂದು ಅವರು ತಿಳಿಸಿದ್ದಾರೆ. </p>.ಮಾಘ ಮೇಳದಲ್ಲಿ ಗಮನ ಸೆಳೆದ ಏಳು ವರ್ಷಗಳಿಂದ ಒಂದೇ ಕಾಲಿನಲ್ಲಿ ನಿಂತಿರುವ 26ರ ಸಾಧು!.‘ಮಾಘ ಹುಣ್ಣಿಮೆ’ ಸ್ನಾನ: ಕುಂಭಮೇಳ ಸಂಪನ್ನ .<p>'ಗಂಗಾ, ಯಮುನಾ ಮತ್ತು ಗುಪ್ತಗಾಮಿನಿ ಸರಸ್ವತಿ ನದಿ ಸೇರುವ ಸ್ಥಳವಾದ ತ್ರಿವೇಣಿ ಸಂಗಮದಲ್ಲಿ ವಸಂತ ಪಂಚಮಿ ಆಚರಣೆಗೆ ವಿಶೇಷ ಮಹತ್ವವಿದೆ' ಎಂದು ತೀರ್ಥ ಪುರೋಹಿತ ರಾಜೇಂದ್ರ ಮಿಶ್ರಾ ತಿಳಿಸಿದ್ದಾರೆ. </p><p>ಈ ವಿಶೇಷ ದಿನದಂದು ಸರಸ್ವತಿ ದೇವಿಯ ಆರಾಧನೆ, ಪೂಜೆ ಹಾಗೂ ಹಳದಿ ಬಟ್ಟೆಗಳನ್ನು ಧರಿಸಲಾಗುತ್ತದೆ. ವಸಂತಕಾಲದ ಆರಂಭಕ್ಕೆ ಸಂಬಂಧಿಸಿದ ಆಚರಣೆಯು ಇದಾಗಿದೆ. </p><p>ಏಳು ವಲಯಗಳ 800 ಹೆಕ್ಟೇರ್ ಪ್ರದೇಶದಲ್ಲಿ ಮಾಘ ಮೇಳವನ್ನು ಆಯೋಜಿಸಲಾಗಿದೆ. 25 ಸಾವಿರಕ್ಕೂ ಹೆಚ್ಚು ಶೌಚಾಲಯಗಳನ್ನು ನಿರ್ಮಿಸಲಾಗಿದೆ. 3,500ಕ್ಕೂ ಅಧಿಕ ನೈರ್ಮಲ್ಯ ಕಾರ್ಮಿಕರನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ. </p><p>ಧ್ಯಾನ ಹಾಗೂ ಯೋಗ ಮಾಡುವುದಾಗಿ ಸೌಲಭ್ಯಗಳನ್ನು ಏರ್ಪಡಿಸಲಾಗಿದೆ. ಯಾತ್ರಿಕರ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ವ್ಯವಸ್ಥೆ ಕಲ್ಪಿಸಲಾಗಿದೆ. </p><p>ಭಕ್ತರ ಸುರಕ್ಷತೆಗಾಗಿ 10 ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಮಾಘ ಮೇಳ) ನೀರಜ್ ಪಾಂಡೆ ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>