ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರದಲ್ಲಿ ಸರ್ಕಾರಿ ಬಸ್– ಕಂಟೇನರ್ ಟ್ರಕ್ ನಡುವೆ ಅಪಘಾತ: 6 ಮಂದಿ ಸಾವು

Published 23 ಮೇ 2023, 7:17 IST
Last Updated 23 ಮೇ 2023, 7:17 IST
ಅಕ್ಷರ ಗಾತ್ರ

ಮುಂಬೈ: ಮಹಾರಾಷ್ಟ್ರದ ಬುಲ್ಡಾಣಾ ಜಿಲ್ಲೆಯಲ್ಲಿ ಮಂಗಳವಾರ ಬೆಳಗಿನ ಜಾವ ಸರ್ಕಾರಿ ಬಸ್ ಮತ್ತು ಕಂಟೇನರ್ ಟ್ರಕ್ ನಡುವೆ ಸಂಭವಿಸಿದ ಅಪಘಾತದಲ್ಲಿ 6 ಮಂದಿ ಮೃತಪಟ್ಟು, 10 ಮಂದಿ ಗಾಯಗೊಂಡಿದ್ದಾರೆ.

ರಾಜಧಾನಿ ಮುಂಬೈನಿಂದ 450 ಕಿ.ಮೀ ದೂರದ ಹಳೆ ಮುಂಬೈ- ನಾಗ್ಪುರ ಹೆದ್ದಾರಿಯ ಸಿಂಧ್‌ಖೇಡ್ ರಾಜಾ ಪಟ್ಟಣದ ಬಳಿ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಅಪಘಾತಕ್ಕೀಡಾದ ಮಹಾರಾಷ್ಟ್ರ ಸಾರಿಗೆ ಸಂಸ್ಥೆಯ ಬಸ್, ಪುಣೆಯಿಂದ ಬುಲ್ಡಾಣಾದ ಮೆಹ್ಕರ್ ಕಡೆಗೆ ಸಂಚರಿಸುತ್ತಿತ್ತು.

‘ದುರ್ಘಟನೆಯಲ್ಲಿ 6 ಮಂದಿ ಮೃತಪಟ್ಟು, 10 ಜನರು ಗಾಯಗೊಂಡಿದ್ದಾರೆ’ ಎಂದೂ ಅಧಿಕಾರಿ ಹೇಳಿದ್ದಾರೆ.

ಮೃತರಲ್ಲಿ ನಾಲ್ವರು ಬಸ್ ಪ್ರಯಾಣಿಕರು, ಎರಡೂ ವಾಹನಗಳ ಚಾಲಕರು ಸೇರಿದ್ದಾರೆ.

ಗಾಯಾಳುಗಳನ್ನು ಸಿಂಧ್‌ಖೇಡ್ ರಾಜಾ ಪಟ್ಟಣದ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT