ಕರ್ನಾಟಕದ ಗಡಿಭಾಗದಲ್ಲಿ ಮರಾಠಿ ಭಾಷಿಕ ಗ್ರಾಮಗಳ ಮೇಲೆ ಮಹಾರಾಷ್ಟ್ರವು ಈ ಹಿಂದೆ ಹಕ್ಕು ಸಾಧಿಸಲು ಯತ್ನಿಸಿತ್ತು. ಆಗ ಈ ವಿಷಯ ಕುರಿತಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಉಭಯರಾಜ್ಯಗಳ ನಡುವಿನ ಗಡಿ ಉದ್ವಿಗ್ನತೆಯನ್ನು ಶಮನಗೊಳಿಸಲು ಮುಂದಾಗಿದ್ದರು. ಆಉಭಯ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದಿದ್ದ ಶಾ ಅವರು, ‘ಸುಪ್ರೀಂಕೋರ್ಟ್ ಆದೇಶ ಬರುವವರೆಗೆ ಕಾಯಬೇಕು’ ಎಂದು ಹೇಳಿದ್ದರು.