ಇತ್ತೀಚೆಗೆ ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿ ಕುರಿತ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಪಾಟೀಲ್ ಅವರು, ಸುಳೆ ಅವರನ್ನು ಉದ್ದೇಶಿಸಿ‘ದೆಹಲಿಗಾದರೂ ಹೋಗಿ ಅಥವಾ ಸ್ಮಶಾನಕ್ಕಾದರೂ ಹೋಗಿ,. ಆದರೆ, ಒಬಿಸಿಗಳಿಗೆ ಮೀಸಲಾತಿ ಕಲ್ಪಿಸಿ. ಸಂಸದೆಯಾಗಿದ್ದರೂ, ಮುಖ್ಯಮಂತ್ರಿ ಅವರ ಭೇಟಿಗೆ ಸಮಯಾವಕಾಶ ಕೋರಲು ಗೊತ್ತಿಲ್ಲ ಎಂದರೆ ಹೇಗೆ? ಮನೆಗೆ ಹೋಗಿ ಅಡುಗೆ ಮಾಡಿಕೊಂಡಿರಿ’ ಎಂದು ಹೇಳಿದ್ದರು. ಇದಕ್ಕೆ ಬಹುತೇಕ ಪಕ್ಷಗಳ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದರು.