ಇದಕ್ಕೂ ಮೊದಲು ಕಚೇರಿಯಲ್ಲಿ ಪೂಜಾ ವಿಧಿ ವಿಧಾನಗಳು ನಡೆದವು. ಮುಖ್ಯಮಂತ್ರಿ ಕಚೇರಿಯಲ್ಲಿ ಶಿವಸೇನಾ ಸಂಸ್ಥಾಪಕ ಬಾಳಾ ಠಾಕ್ರೆ ಅವರ ದೊಡ್ಡ ಫೋಟೊ ಮತ್ತು ಶಿಂಧೆ ಅವರ ಗುರು ಆನಂದ್ ದಿಘೆ ಅವರ ಚಿತ್ರ ಇದೆ. ಸಚಿವಾಲಯದ ಕಟ್ಟಡವನ್ನು ಪ್ರವೇಶಿಸುತ್ತಿದ್ದಂತೆ ಮುಖ್ಯಮಂತ್ರಿ ಅವರು ಛತ್ರಪತಿ ಶಿವಾಜಿ ಮಹಾರಾಜ್ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಿದರು.