ಮುಂಬೈ: ಮಹಾರಾಷ್ಟ್ರ –ಕರ್ನಾಟಕ ಗಡಿ ವಿವಾದ ಕುರಿತಂತೆ ವಿವಾದಿತ ಪ್ರದೇಶಗಳಿಗೆ ಸಚಿವರ ಭೇಟಿ ಕುರಿತಂತೆ ಮುಖ್ಯಮಂತ್ರಿ ಏಕನಾಥ ಶಿಂದೆ ಅಂತಿಮ ತೀರ್ಮಾನ ತೆಗೆದುಕೊಳ್ಳುವರು ಎಂದು ಉಪಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಹೇಳಿದ್ದಾರೆ.
ಮಹಾರಾಷ್ಟ್ರ ಸಚಿವರಾದ ಚಂದ್ರಕಾಂತ ಪಾಟೀಲ, ಶಂಭುರಾಜ್ ದೇಸಾಯಿ ಅವರು ಡಿ.6ರಂದು ಕರ್ನಾಟಕದ ಬೆಳಗಾವಿಗೆ ಭೇಟಿ ನೀಡಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಪದಾಧಿಕಾರಿಗಳ ಜೊತೆಗೆ ಚರ್ಚಿಸುವ ಕಾರ್ಯಕ್ರಮವಿತ್ತು.
‘ಇಬ್ಬರೂ ಸಚಿವರಿಗೆ ಡಿ.6ರಂದು ಡಾ.ಅಂಬೇಡ್ಕರ್ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಸ್ಥಳೀಯರು ಆಹ್ವಾನಿಸಿದ್ದಾರೆ. ವಿವಾದಿತ ಸ್ಥಳಕ್ಕೆ ಭೇಟಿಯಿಂದ ಕಾನೂನು ಸಮಸ್ಯೆಯಾಗಬಾರದು ಎಂಬುದು ನಮ್ಮ ಅಭಿಪ್ರಾಯ. ಸಿ.ಎಂ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುವರು‘ ಎಂದು ಫಡಣವೀಸ್ ತಿಳಿಸಿದರು.