<p class="title"><strong>ಪುಣೆ: </strong>ಭೀಮಾ ಕೋರೆಗಾಂವ್ ಹೋರಾಟ ವಿಜಯೋತ್ಸವದ 203ನೇ ವರ್ಷದ ನಿಮಿತ್ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರೆ ಕೆಲ ನಾಯಕರು ಯುದ್ಧ ಸ್ಮಾರಕ ‘ಜಯಸ್ತಂಭ’ಕ್ಕೆ ಭೇಟಿ ನೀಡಿ ನಮಿಸಿದರು.</p>.<p class="title">ಪೆರ್ನೆ ಗ್ರಾಮದಲ್ಲಿರುವ ಜಯಸ್ತಂಭ ಸ್ಮಾರಕ ಸ್ಥಳಕ್ಕೆ ಗೃಹಸಚಿವ ಅನಿಲ್ ದೇಶ್ಮುಖ್, ಇಂಧನ ಸಚಿವ ಡಾ.ನಿತಿನ್ ರಾವುತ್, ವಂಚಿತ್ ಬಹುಜನ ಅಂಘಡಿ (ವಿಬಿಎ) ಅಧ್ಯಕ್ಷ ಪ್ರಕಾಶ್ ಅಂಬೇಡ್ಕರ್ ಅವರೂ ಭೇಟಿ ನೀಡಿದ್ದರು.</p>.<p>ಕೊರೊನಾ ಪರಿಸ್ಥಿತಿ ಹಿನ್ನೆಲೆಯಲ್ಲಿ ಜನರು ಸ್ಮಾರಕ ಸ್ಥಳಕ್ಕೆ ಭೇಟಿ ನೀಡಬಾರದು. ಬದಲಾಗಿ ಮನೆಯಲ್ಲಿಯೇ ಉಳಿದು ಹುತಾತ್ಮರಿಗೆ ನಮನ ಸಲ್ಲಿಸಬೇಕು ಎಂದು ಇದೇ ಸಂದರ್ಭದಲ್ಲಿ ಅಜಿತ್ ಪವಾರ್ ಮನವಿ ಮಾಡಿದರು.</p>.<p>ಬ್ರಿಟೀಷ್ ಈಸ್ಟ್ ಇಂಡಿಯಾ ಕಂಪನಿ ಮತ್ತು ಮರಾಠಾ ಒಕ್ಕೂಟದ ಪೇಶ್ವೆ ಗುಂಪಿನ ನಡುವೆ 1818ರ ಜನವರಿ 1ರಂದು ಹೋರಾಟ ನಡೆದಿದ್ದು, ವಿಜಯೋತ್ಸವದ ಸ್ಮರಣಾರ್ಥ ಜಯಸ್ತಂಭ ಸ್ಮಾರಕ ಸ್ಥಾಪನೆಯಾಗಿದೆ.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಪ್ರಕಾಶ್ ಅಂಬೇಡ್ಕರ್ ಅವರು, ‘ಜನವರಿ 1 ಎಂಬುದು ಪ್ರತಿಯೊಬ್ಬರೂ ಸಾಮಾಜಿಕ ಸಂಕೋಲೆಗಳಿಂದ ಮುಕ್ತರಾಗುವ ದಿನ. ಭೀಮಾ ಕೋರೆಗಾಂವ್ ಹೋರಾಟವು ಪೇಶ್ವೆ ಆಡಳಿತದಲ್ಲಿ ಜಾರಿಯಲ್ಲಿದ್ದ ಅಸ್ಪೃಶ್ಯತೆ ವಿರುದ್ಧ ಹೋರಾಟ ನಡೆಸಿ ಜಯಗಳಿಸಿದ ದಿನವಾಗಿದೆ’ ಎಂದು ಸ್ಮರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಪುಣೆ: </strong>ಭೀಮಾ ಕೋರೆಗಾಂವ್ ಹೋರಾಟ ವಿಜಯೋತ್ಸವದ 203ನೇ ವರ್ಷದ ನಿಮಿತ್ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರೆ ಕೆಲ ನಾಯಕರು ಯುದ್ಧ ಸ್ಮಾರಕ ‘ಜಯಸ್ತಂಭ’ಕ್ಕೆ ಭೇಟಿ ನೀಡಿ ನಮಿಸಿದರು.</p>.<p class="title">ಪೆರ್ನೆ ಗ್ರಾಮದಲ್ಲಿರುವ ಜಯಸ್ತಂಭ ಸ್ಮಾರಕ ಸ್ಥಳಕ್ಕೆ ಗೃಹಸಚಿವ ಅನಿಲ್ ದೇಶ್ಮುಖ್, ಇಂಧನ ಸಚಿವ ಡಾ.ನಿತಿನ್ ರಾವುತ್, ವಂಚಿತ್ ಬಹುಜನ ಅಂಘಡಿ (ವಿಬಿಎ) ಅಧ್ಯಕ್ಷ ಪ್ರಕಾಶ್ ಅಂಬೇಡ್ಕರ್ ಅವರೂ ಭೇಟಿ ನೀಡಿದ್ದರು.</p>.<p>ಕೊರೊನಾ ಪರಿಸ್ಥಿತಿ ಹಿನ್ನೆಲೆಯಲ್ಲಿ ಜನರು ಸ್ಮಾರಕ ಸ್ಥಳಕ್ಕೆ ಭೇಟಿ ನೀಡಬಾರದು. ಬದಲಾಗಿ ಮನೆಯಲ್ಲಿಯೇ ಉಳಿದು ಹುತಾತ್ಮರಿಗೆ ನಮನ ಸಲ್ಲಿಸಬೇಕು ಎಂದು ಇದೇ ಸಂದರ್ಭದಲ್ಲಿ ಅಜಿತ್ ಪವಾರ್ ಮನವಿ ಮಾಡಿದರು.</p>.<p>ಬ್ರಿಟೀಷ್ ಈಸ್ಟ್ ಇಂಡಿಯಾ ಕಂಪನಿ ಮತ್ತು ಮರಾಠಾ ಒಕ್ಕೂಟದ ಪೇಶ್ವೆ ಗುಂಪಿನ ನಡುವೆ 1818ರ ಜನವರಿ 1ರಂದು ಹೋರಾಟ ನಡೆದಿದ್ದು, ವಿಜಯೋತ್ಸವದ ಸ್ಮರಣಾರ್ಥ ಜಯಸ್ತಂಭ ಸ್ಮಾರಕ ಸ್ಥಾಪನೆಯಾಗಿದೆ.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಪ್ರಕಾಶ್ ಅಂಬೇಡ್ಕರ್ ಅವರು, ‘ಜನವರಿ 1 ಎಂಬುದು ಪ್ರತಿಯೊಬ್ಬರೂ ಸಾಮಾಜಿಕ ಸಂಕೋಲೆಗಳಿಂದ ಮುಕ್ತರಾಗುವ ದಿನ. ಭೀಮಾ ಕೋರೆಗಾಂವ್ ಹೋರಾಟವು ಪೇಶ್ವೆ ಆಡಳಿತದಲ್ಲಿ ಜಾರಿಯಲ್ಲಿದ್ದ ಅಸ್ಪೃಶ್ಯತೆ ವಿರುದ್ಧ ಹೋರಾಟ ನಡೆಸಿ ಜಯಗಳಿಸಿದ ದಿನವಾಗಿದೆ’ ಎಂದು ಸ್ಮರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>