<p><strong>ಮುಂಬೈ</strong>: ಮುಂಬರುವ ವಿಧಾನಸಭೆ ಚುನಾವಣೆಗೆ ಮಹಾರಾಷ್ಟ್ರದ ಮೈತ್ರಿ ಸರ್ಕಾರ ಭರ್ಜರಿ ತಯಾರಿ ನಡೆಸಿದ್ದು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಪ್ರಚಾರ ಮಾಡಲು ಬರೋಬ್ಬರಿ 50 ಸಾವಿರು ಯುವಕರನ್ನು ಅರೆಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಸಿದ್ದತೆ ಆರಂಭಿಸಿದೆ.</p><p>ಇವರಿಗೆ ‘ಯೋಜನಾ ದೂತರು’ ಎಂದು ಹೆಸರಿಡಲಾಗಿದೆ. ಸಚಿವ ಚಂದ್ರಕಾಂತ್ ಪಾಟೀಲ ಅವರು ಮಂಗಳವಾರ ವಿಧಾನ ಪರಿಷತ್ನಲ್ಲಿ ಈ ವಿಷಯ ತಿಳಿಸಿದ್ದಾರೆ.</p><p>ಯೋಜನಾ ದೂತರಿಗೆ ಕೆಲಕಾಲ ತರಬೇತಿ ನೀಡಿ ಕೇಂದ್ರ, ರಾಜ್ಯದ ಸಮಗ್ರ ಕಾರ್ಯಕ್ರಮಗಳ ಬಗ್ಗೆ ಹಾಗೂ ಅದರ ಫಲಾನುಭವಿಗಳ ಬಗ್ಗೆ ರಾಜ್ಯವ್ಯಾಪಿ ಪ್ರಚಾರ ಮಾಡಿಸಲು ಬಳಸಿಕೊಳ್ಳಲಾಗುತ್ತದೆ.</p><p>ಆದರೆ, ಪಾಟೀಲ ಅವರ ಈ ಪ್ರಸ್ತಾವನೆ ವಿವಾದ ಸ್ವರೂಪ ಪಡೆದಿದ್ದು ವಿರೋಧ ಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ. ಸರ್ಕಾರಿ ದುಡ್ಡಿನಲ್ಲಿ ಯುವಕರನ್ನು ಬಳಸಿಕೊಂಡು ಚುನಾವಣೆಗೋಸ್ಕರ ರಾಜಕೀಯ ಗಿಮಿಕ್ ಮಾಡುತ್ತಿದೆ ಎಂದು ಹರಿಹಾಯ್ದಿವೆ.</p><p>ಈ ವರ್ಷಾಂತ್ಯಕ್ಕೆ ಮಹಾರಾಷ್ಟ್ರ ವಿಧಾನಸಭೆಗೆ ಚುನಾವಣೆ ನಡೆಯುವ ಸಂಭವ ಇದೆ. ಸದ್ಯ ಮಹಾರಾಷ್ಟ್ರದಲ್ಲಿ ಬಿಜೆಪಿ–ಶಿವಸೇನೆ ಶಿಂದೆ ಬಣ–ಎನ್ಸಿಪಿ ಅಜಿತ್ ಪವಾರ್ ಬಣದ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿದೆ.</p>.ರಷ್ಯಾದಿಂದ ಆಸ್ಟ್ರಿಯಾಕ್ಕೆ ತೆರಳಿದ ಮೋದಿ: ಸೆಲ್ಫಿ ತೆಗೆದುಕೊಂಡ ಚಾನ್ಸಲರ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಮುಂಬರುವ ವಿಧಾನಸಭೆ ಚುನಾವಣೆಗೆ ಮಹಾರಾಷ್ಟ್ರದ ಮೈತ್ರಿ ಸರ್ಕಾರ ಭರ್ಜರಿ ತಯಾರಿ ನಡೆಸಿದ್ದು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಪ್ರಚಾರ ಮಾಡಲು ಬರೋಬ್ಬರಿ 50 ಸಾವಿರು ಯುವಕರನ್ನು ಅರೆಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಸಿದ್ದತೆ ಆರಂಭಿಸಿದೆ.</p><p>ಇವರಿಗೆ ‘ಯೋಜನಾ ದೂತರು’ ಎಂದು ಹೆಸರಿಡಲಾಗಿದೆ. ಸಚಿವ ಚಂದ್ರಕಾಂತ್ ಪಾಟೀಲ ಅವರು ಮಂಗಳವಾರ ವಿಧಾನ ಪರಿಷತ್ನಲ್ಲಿ ಈ ವಿಷಯ ತಿಳಿಸಿದ್ದಾರೆ.</p><p>ಯೋಜನಾ ದೂತರಿಗೆ ಕೆಲಕಾಲ ತರಬೇತಿ ನೀಡಿ ಕೇಂದ್ರ, ರಾಜ್ಯದ ಸಮಗ್ರ ಕಾರ್ಯಕ್ರಮಗಳ ಬಗ್ಗೆ ಹಾಗೂ ಅದರ ಫಲಾನುಭವಿಗಳ ಬಗ್ಗೆ ರಾಜ್ಯವ್ಯಾಪಿ ಪ್ರಚಾರ ಮಾಡಿಸಲು ಬಳಸಿಕೊಳ್ಳಲಾಗುತ್ತದೆ.</p><p>ಆದರೆ, ಪಾಟೀಲ ಅವರ ಈ ಪ್ರಸ್ತಾವನೆ ವಿವಾದ ಸ್ವರೂಪ ಪಡೆದಿದ್ದು ವಿರೋಧ ಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ. ಸರ್ಕಾರಿ ದುಡ್ಡಿನಲ್ಲಿ ಯುವಕರನ್ನು ಬಳಸಿಕೊಂಡು ಚುನಾವಣೆಗೋಸ್ಕರ ರಾಜಕೀಯ ಗಿಮಿಕ್ ಮಾಡುತ್ತಿದೆ ಎಂದು ಹರಿಹಾಯ್ದಿವೆ.</p><p>ಈ ವರ್ಷಾಂತ್ಯಕ್ಕೆ ಮಹಾರಾಷ್ಟ್ರ ವಿಧಾನಸಭೆಗೆ ಚುನಾವಣೆ ನಡೆಯುವ ಸಂಭವ ಇದೆ. ಸದ್ಯ ಮಹಾರಾಷ್ಟ್ರದಲ್ಲಿ ಬಿಜೆಪಿ–ಶಿವಸೇನೆ ಶಿಂದೆ ಬಣ–ಎನ್ಸಿಪಿ ಅಜಿತ್ ಪವಾರ್ ಬಣದ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿದೆ.</p>.ರಷ್ಯಾದಿಂದ ಆಸ್ಟ್ರಿಯಾಕ್ಕೆ ತೆರಳಿದ ಮೋದಿ: ಸೆಲ್ಫಿ ತೆಗೆದುಕೊಂಡ ಚಾನ್ಸಲರ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>