ಇದನ್ನು ಒಪ್ಪದ ನ್ಯಾಯಮೂರ್ತಿಗಳಾದ ಎಸ್.ಎಸ್.ಶಿಂಧೆ ಹಾಗೂ ಮಾಧವ್ ಜಾಮ್ದಾರ್ ಅವರಿದ್ದ ಪೀಠವು, ‘ರಾವ್ ಅವರು ನಾನಾವತಿ ಆಸ್ಪತ್ರೆಗೆ ದಾಖಲಾದರೂ, ಎನ್ಐಎ ಕಸ್ಟಡಿಯಲ್ಲೇ ಇರಲಿದ್ದಾರೆ. ರಾವ್ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಬೇಕು. ನ್ಯಾಯಾಲಯದ ಗಮನಕ್ಕೆ ತರದೇ ಆಸ್ಪತ್ರೆಯಿಂದ ಅವರನ್ನು ಕಳುಹಿಸಬಾರದು. ರಾವ್ ಅವರ ಎಲ್ಲ ವೈದ್ಯಕೀಯ ವರದಿಯನ್ನು ನ್ಯಾಯಾಲಯದ ಮುಂದೆ ಸಲ್ಲಿಸಬೇಕು. ಜೊತೆಗೆ ರಾವ್ ಅವರ ಕುಟುಂಬದ ಸದಸ್ಯರಿಗೆ ಅವರನ್ನು ಆಸ್ಪತ್ರೆಯಲ್ಲಿ ಭೇಟಿಯಾಗಲು ಅವಕಾಶ ನೀಡಬೇಕು’ ಎಂದು ಆದೇಶಿಸಿ, ವಿಚಾರಣೆಯನ್ನು ಡಿ.3ಕ್ಕೆ ಮುಂದೂಡಿತು.