‘ನಾನು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕಾಯ್ದೆಗೆ ತಿದ್ದುಪಡಿ ತರಲಾಗಿತ್ತು. ಎತ್ತು, ಓಟದ ಸ್ಪರ್ಧೆಗಾಗಿಯೇ ಇರುವಂತಹ ಪ್ರಾಣಿ ಎಂಬ ವಾದವನ್ನು ನಾವು ನ್ಯಾಯಾಲಯದ ಮುಂದಿಟ್ಟಿದ್ದೆವು. ನ್ಯಾಯಾಲಯ ಇದನ್ನು ಪುರಸ್ಕರಿಸಿದೆ. ನಮ್ಮ ಪರವಾಗಿ ತೀರ್ಪು ಬಂದಿರುವುದು ಖುಷಿ ನೀಡಿದೆ. ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ಎತ್ತಿನ ಗಾಡಿ ಓಟದ ಸ್ಪರ್ಧೆಗಳನ್ನು ಆಯೋಜಿಸುವುದಕ್ಕೆ ಈ ತೀರ್ಪು ದಾರಿ ಮಾಡಿಕೊಟ್ಟಿದೆ’ ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಸಂತಸ ವ್ಯಕ್ತಪಡಿಸಿದ್ದಾರೆ.