<p><strong>ಮುಂಬೈ:</strong> ‘ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದ್ದು, ಇದಕ್ಕೆ ಜನರೇ ಹೊಣೆ. ಅವರು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದಿರುವ ಮತ್ತು ಸಾಮಾಜಿಕ ಅಂತರದ ನಿಯಮವನ್ನು ಪಾಲಿಸದ ಕಾರಣ ಪ್ರಕರಣಗಳು ಹೆಚ್ಚಿವೆ’ ಎಂದು ಆರೋಗ್ಯ ತಜ್ಞರು ದೂರಿದ್ದಾರೆ.</p>.<p>‘ಮಹಾರಾಷ್ಟ್ರದ ಗ್ರಾಮೀಣ ಪ್ರದೇಶ ಮತ್ತು ಮುಂಬೈ ಕೊಳಚೆ ಪ್ರದೇಶವಲ್ಲದ ಸ್ಥಳಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ಲಾಕ್ಡೌನ್ ಹೇರುವ ಸಾಧ್ಯತೆಗಳಿವೆ’ ಎಂಬ ಮಾತುಗಳು ಕೇಳಿ ಬಂದಿವೆ.</p>.<p>ಇಲ್ಲಿ ಶನಿವಾರ 6281 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸತತ ಐದನೇ ದಿನ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಈ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 20,93,913 ಕ್ಕೆ ಏರಿಕೆಯಾಗಿದೆ.</p>.<p>ಮಹಾರಾಷ್ಟ್ರದಲ್ಲಿ ಕೋವಿಡ್ನಿಂದಾಗಿ ಈವರೆಗೆ ಒಟ್ಟು 51,753 ಮಂದಿ ಸಾವಿಗೀಡಾಗಿದ್ದಾರೆ. ಇದರೊಂದಿಗೆ ಈ ರಾಜ್ಯದ ಮರಣ ಪ್ರಮಾಣವು ಶೇಕಡ 2.47ರಷ್ಟಿದೆ. ಇದು ದೇಶದ ಸಾವಿನ ಪ್ರಮಾಣಕ್ಕಿಂತ ಹೆಚ್ಚಾಗಿದೆ.</p>.<p>‘ಪ್ರಕರಣದಲ್ಲಾಗಿರುವ ಏರುಗತಿಯನ್ನು ಕೋವಿಡ್ನ ಎರಡನೇ ಅಲೆ ಎಂದು ಪರಿಗಣಿಸಲು ಸಾಧ್ಯವಿಲ್ಲ. ಜನರು ಕೋವಿಡ್ ನಿಯಮಗಳನ್ನು ಪಾಲಿಸುತ್ತಿಲ್ಲ. ಅವರು ತಮ್ಮನ್ನು ತಾವು ನಿಯಂತ್ರಿಸಿಕೊಳ್ಳಬೇಕು’ ಎಂದು ಕೋವಿಡ್ ಟಾಸ್ಕ್ ಪೋರ್ಸ್ನ ಮುಖ್ಯಸ್ಥ ಡಾ.ಸಂಜಯ್ ಓಕ್ ಅವರು ತಿಳಿಸಿದರು.</p>.<p>ಹೆಚ್ಚಿನ ಪ್ರಕರಣಗಳು ಕಟ್ಟಡಗಳಲ್ಲಿ ವರದಿಯಾಗುತ್ತಿವೆ. ಅವರಲ್ಲಿ ಸಣ್ಣ ಪುಟ್ಟ ಅಥವಾ ಲಕ್ಷಣ ರಹಿತ ಸೋಂಕುಗಳು ಕಾಣಿಸಿಕೊಳ್ಳುತ್ತಿದೆ. ಅವರಿಗೆ ಮನೆಯಲ್ಲೇ ಪ್ರತ್ಯೇಕ ವಾಸವಾಗುವಂತೆ ಸೂಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕೋವಿಡ್ ಪರೀಕ್ಷೆಯನ್ನು ಹೆಚ್ಚಿಸಲಾಗಿದೆ’ ಎಂದು ಮಹಾನಗರಪಾಲಿಕೆ ಹೆಚ್ಚುವರಿ ಆಯುಕ್ತರು ಸುರೇಶ್ ಕಕಾಣಿ ಅವರು ತಿಳಿಸಿದರು.</p>.<p>‘ಮುಂಬೈಗೆ ಅಂತರರಾಷ್ಟ್ರೀಯ ಪ್ರಯಣಿಕರು ಹೆಚ್ಚಿದ್ದಾರೆ. ಕೇರಳದಿಂದ ಬರುವ ಪ್ರಯಣಿಕರನ್ನು ಪರೀಕ್ಷಿಸಲಾಗುತ್ತಿದೆ’ ಎಂದು ಅವರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ‘ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದ್ದು, ಇದಕ್ಕೆ ಜನರೇ ಹೊಣೆ. ಅವರು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದಿರುವ ಮತ್ತು ಸಾಮಾಜಿಕ ಅಂತರದ ನಿಯಮವನ್ನು ಪಾಲಿಸದ ಕಾರಣ ಪ್ರಕರಣಗಳು ಹೆಚ್ಚಿವೆ’ ಎಂದು ಆರೋಗ್ಯ ತಜ್ಞರು ದೂರಿದ್ದಾರೆ.</p>.<p>‘ಮಹಾರಾಷ್ಟ್ರದ ಗ್ರಾಮೀಣ ಪ್ರದೇಶ ಮತ್ತು ಮುಂಬೈ ಕೊಳಚೆ ಪ್ರದೇಶವಲ್ಲದ ಸ್ಥಳಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ಲಾಕ್ಡೌನ್ ಹೇರುವ ಸಾಧ್ಯತೆಗಳಿವೆ’ ಎಂಬ ಮಾತುಗಳು ಕೇಳಿ ಬಂದಿವೆ.</p>.<p>ಇಲ್ಲಿ ಶನಿವಾರ 6281 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸತತ ಐದನೇ ದಿನ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಈ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 20,93,913 ಕ್ಕೆ ಏರಿಕೆಯಾಗಿದೆ.</p>.<p>ಮಹಾರಾಷ್ಟ್ರದಲ್ಲಿ ಕೋವಿಡ್ನಿಂದಾಗಿ ಈವರೆಗೆ ಒಟ್ಟು 51,753 ಮಂದಿ ಸಾವಿಗೀಡಾಗಿದ್ದಾರೆ. ಇದರೊಂದಿಗೆ ಈ ರಾಜ್ಯದ ಮರಣ ಪ್ರಮಾಣವು ಶೇಕಡ 2.47ರಷ್ಟಿದೆ. ಇದು ದೇಶದ ಸಾವಿನ ಪ್ರಮಾಣಕ್ಕಿಂತ ಹೆಚ್ಚಾಗಿದೆ.</p>.<p>‘ಪ್ರಕರಣದಲ್ಲಾಗಿರುವ ಏರುಗತಿಯನ್ನು ಕೋವಿಡ್ನ ಎರಡನೇ ಅಲೆ ಎಂದು ಪರಿಗಣಿಸಲು ಸಾಧ್ಯವಿಲ್ಲ. ಜನರು ಕೋವಿಡ್ ನಿಯಮಗಳನ್ನು ಪಾಲಿಸುತ್ತಿಲ್ಲ. ಅವರು ತಮ್ಮನ್ನು ತಾವು ನಿಯಂತ್ರಿಸಿಕೊಳ್ಳಬೇಕು’ ಎಂದು ಕೋವಿಡ್ ಟಾಸ್ಕ್ ಪೋರ್ಸ್ನ ಮುಖ್ಯಸ್ಥ ಡಾ.ಸಂಜಯ್ ಓಕ್ ಅವರು ತಿಳಿಸಿದರು.</p>.<p>ಹೆಚ್ಚಿನ ಪ್ರಕರಣಗಳು ಕಟ್ಟಡಗಳಲ್ಲಿ ವರದಿಯಾಗುತ್ತಿವೆ. ಅವರಲ್ಲಿ ಸಣ್ಣ ಪುಟ್ಟ ಅಥವಾ ಲಕ್ಷಣ ರಹಿತ ಸೋಂಕುಗಳು ಕಾಣಿಸಿಕೊಳ್ಳುತ್ತಿದೆ. ಅವರಿಗೆ ಮನೆಯಲ್ಲೇ ಪ್ರತ್ಯೇಕ ವಾಸವಾಗುವಂತೆ ಸೂಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕೋವಿಡ್ ಪರೀಕ್ಷೆಯನ್ನು ಹೆಚ್ಚಿಸಲಾಗಿದೆ’ ಎಂದು ಮಹಾನಗರಪಾಲಿಕೆ ಹೆಚ್ಚುವರಿ ಆಯುಕ್ತರು ಸುರೇಶ್ ಕಕಾಣಿ ಅವರು ತಿಳಿಸಿದರು.</p>.<p>‘ಮುಂಬೈಗೆ ಅಂತರರಾಷ್ಟ್ರೀಯ ಪ್ರಯಣಿಕರು ಹೆಚ್ಚಿದ್ದಾರೆ. ಕೇರಳದಿಂದ ಬರುವ ಪ್ರಯಣಿಕರನ್ನು ಪರೀಕ್ಷಿಸಲಾಗುತ್ತಿದೆ’ ಎಂದು ಅವರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>