<p><strong>ಮಹಾಕುಂಭ ನಗರ:</strong> ಪ್ರಯಾಗ್ರಾಜ್ನ ಸಂಗಮದಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಈವರೆಗೆ 40 ಕೋಟಿಗೂ ಅಧಿಕ ಭಕ್ತರು ಪವಿತ್ರ ಸ್ನಾನ ಮಾಡಿದ್ದಾರೆ ಎಂದು ಉತ್ತರ ಪ್ರದೇಶ ಸರ್ಕಾರ ಮೂಲಗಳು ತಿಳಿಸಿವೆ. </p><p>ಗಂಗಾ, ಯಮುನಾ ಮತ್ತು ಗುಪ್ತಗಾಮಿನಿ ಸರಸ್ವತಿ ನದಿಗಳ ಸಂಗಮ ಸ್ಥಳದಲ್ಲಿ ಶುಕ್ರವಾರ 48 ಲಕ್ಷ ಭಕ್ತರು ಪವಿತ್ರ ಸ್ನಾನ ಮಾಡಿದ್ದಾರೆ ಎಂದು ಹೇಳಿದೆ. </p><p>ಭಾರತ ಸೇರಿದಂತೆ ಜಗತ್ತಿನಾದ್ಯಂತ ಭಕ್ತರು ಅಮೃತ ಸ್ನಾನಕ್ಕಾಗಿ ಪ್ರಯಾಗ್ರಾಜ್ನತ್ತ ಹರಿದು ಬರುತ್ತಿದ್ದಾರೆ. </p><p>ಈಗಾಗಲೇ 'ಮಕರ ಸಂಕ್ರಾಂತಿ', 'ಮೌನಿ ಅಮಾವಾಸ್ಯೆ' ಮತ್ತು 'ವಸಂತ ಪಂಚಮಿ' ಸೇರಿದಂತೆ ಮೂರು ಪ್ರಮುಖ 'ಅಮೃತ ಸ್ನಾನ' ಕಾರ್ಯಕ್ರಮಗಳು ನೇರವೇರಿದೆ. </p><p>ಈ ಪೈಕಿ ಮೌನಿ ಅಮಾವಾಸ್ಯೆಯಂದು ಅತಿ ಹೆಚ್ಚು ಎಂಟು ಕೋಟಿ ಮಂದಿ ಪವಿತ್ರ ಸ್ನಾನ ಮಾಡಿದ್ದಾರೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. </p><p>ಹಾಗೆಯೇ ಮಕರ ಸಂಕ್ರಾಂತಿಯಂದು 3.5 ಕೋಟಿ ಮತ್ತು ವಸಂತ ಪಂಚಮಿಯಂದು 2.57 ಕೋಟಿ ಭಕ್ತರು ಪುಣ್ಯಸ್ನಾನ ಮಾಡಿದ್ದಾರೆ. </p><p>ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ರಾಜಕೀಯ, ಸಾಮಾಜಿಕ ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಪವಿತ್ರ ಸ್ನಾನ ಮಾಡಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ಸೋಮವಾರ ಸಂಗಮಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ. </p><p>ಮಹಾಕುಂಭಮೇಳವು ಫೆಬ್ರುವರಿ 26ರಂದು ಮುಕ್ತಾಯಗೊಳ್ಳಲಿದೆ. </p>.Kumbh Stampede | ಜೆಸಿಬಿ ಮೂಲಕ ಮೃತದೇಹಗಳ ಸಾಗಾಟ: ವಿಪಕ್ಷಗಳ ಆರೋಪ.Kumbh Stampede ಡಿಜಿಟಲ್ ಕುಂಭದಲ್ಲಿ ಮೃತರ ಸಂಖ್ಯೆ ಮುಚ್ಚಿಹಾಕಲು ಯತ್ನ: ಅಖಿಲೇಶ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಹಾಕುಂಭ ನಗರ:</strong> ಪ್ರಯಾಗ್ರಾಜ್ನ ಸಂಗಮದಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಈವರೆಗೆ 40 ಕೋಟಿಗೂ ಅಧಿಕ ಭಕ್ತರು ಪವಿತ್ರ ಸ್ನಾನ ಮಾಡಿದ್ದಾರೆ ಎಂದು ಉತ್ತರ ಪ್ರದೇಶ ಸರ್ಕಾರ ಮೂಲಗಳು ತಿಳಿಸಿವೆ. </p><p>ಗಂಗಾ, ಯಮುನಾ ಮತ್ತು ಗುಪ್ತಗಾಮಿನಿ ಸರಸ್ವತಿ ನದಿಗಳ ಸಂಗಮ ಸ್ಥಳದಲ್ಲಿ ಶುಕ್ರವಾರ 48 ಲಕ್ಷ ಭಕ್ತರು ಪವಿತ್ರ ಸ್ನಾನ ಮಾಡಿದ್ದಾರೆ ಎಂದು ಹೇಳಿದೆ. </p><p>ಭಾರತ ಸೇರಿದಂತೆ ಜಗತ್ತಿನಾದ್ಯಂತ ಭಕ್ತರು ಅಮೃತ ಸ್ನಾನಕ್ಕಾಗಿ ಪ್ರಯಾಗ್ರಾಜ್ನತ್ತ ಹರಿದು ಬರುತ್ತಿದ್ದಾರೆ. </p><p>ಈಗಾಗಲೇ 'ಮಕರ ಸಂಕ್ರಾಂತಿ', 'ಮೌನಿ ಅಮಾವಾಸ್ಯೆ' ಮತ್ತು 'ವಸಂತ ಪಂಚಮಿ' ಸೇರಿದಂತೆ ಮೂರು ಪ್ರಮುಖ 'ಅಮೃತ ಸ್ನಾನ' ಕಾರ್ಯಕ್ರಮಗಳು ನೇರವೇರಿದೆ. </p><p>ಈ ಪೈಕಿ ಮೌನಿ ಅಮಾವಾಸ್ಯೆಯಂದು ಅತಿ ಹೆಚ್ಚು ಎಂಟು ಕೋಟಿ ಮಂದಿ ಪವಿತ್ರ ಸ್ನಾನ ಮಾಡಿದ್ದಾರೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. </p><p>ಹಾಗೆಯೇ ಮಕರ ಸಂಕ್ರಾಂತಿಯಂದು 3.5 ಕೋಟಿ ಮತ್ತು ವಸಂತ ಪಂಚಮಿಯಂದು 2.57 ಕೋಟಿ ಭಕ್ತರು ಪುಣ್ಯಸ್ನಾನ ಮಾಡಿದ್ದಾರೆ. </p><p>ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ರಾಜಕೀಯ, ಸಾಮಾಜಿಕ ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಪವಿತ್ರ ಸ್ನಾನ ಮಾಡಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ಸೋಮವಾರ ಸಂಗಮಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ. </p><p>ಮಹಾಕುಂಭಮೇಳವು ಫೆಬ್ರುವರಿ 26ರಂದು ಮುಕ್ತಾಯಗೊಳ್ಳಲಿದೆ. </p>.Kumbh Stampede | ಜೆಸಿಬಿ ಮೂಲಕ ಮೃತದೇಹಗಳ ಸಾಗಾಟ: ವಿಪಕ್ಷಗಳ ಆರೋಪ.Kumbh Stampede ಡಿಜಿಟಲ್ ಕುಂಭದಲ್ಲಿ ಮೃತರ ಸಂಖ್ಯೆ ಮುಚ್ಚಿಹಾಕಲು ಯತ್ನ: ಅಖಿಲೇಶ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>