<p><strong>ಪ್ರಯಾಗ್ರಾಜ್</strong>: ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಬುಧವಾರ ಮಹಾಕುಂಭಮೇಳದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 30ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದರು. ಘಟನಾ ಸ್ಥಳದಿಂದ 3 ಕಿ.ಮೀ ದೂರದಲ್ಲಿ ಸಂಭವಿಸಿದ ಮತ್ತೊಂದು ಕಾಲ್ತುಳಿತದಲ್ಲಿ ಏಳು ಜನರು ಸಾವಿಗೀಡಾಗಿದ್ದಾರೆ.</p><p>ಸಂಗಮದಿಂದ 3 ಕಿ.ಮೀ ದೂರದಲ್ಲಿರುವ ಜೂಸಿ ಘಾಟ್ನಲ್ಲಿ ಈ ಕಾಲ್ತುಳಿತ ಸಂಭವಿಸಿದೆ ಎಂದು ಕಲ್ಪವಾಸಿ ಪೊಲೀಸ್ ಠಾಣೆಯ ವೃತ್ತಾಧಿಕಾರಿ ರುದ್ರ ಕುಮಾರ್ ಸಿಂಗ್ ತಿಳಿಸಿರುವುದಾಗಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.</p><p>‘ಜನಸಂದಣಿಯ ಅತಿಯಾದ ಒತ್ತಡದಿಂದಾಗಿ ಜೂಸಿಯಲ್ಲಿ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿ ಹೇಳಿದರು.</p><p>ಬುಧವಾರ ಸಂಜೆ 7 ಗಂಟೆಗೆ ಮಹಾಕುಂಭನಗರದ ಜಿಲ್ಲಾಧಿಕಾರಿ ವಿಜಯ್ ಕಿರಣ್ ಆನಂದ್ ಮತ್ತು ಮೇಳದ ಡಿಐಜಿ ವೈಭವ್ ಕೃಷ್ಣ ಅವರು ಮೊದಲ ಕಾಲ್ತುಳಿತದ ಕುರಿತು ಮಾಹಿತಿ ನೀಡಿದ್ದರು. ಈ ವೇಳೆ ಬುಧವಾರ ನಸುಕಿನ 1 ಗಂಟೆಯಿಂದ 2 ಗಂಟೆಯ ನಡುವೆ ಸಂಗಮದ ಬಳಿ ನೂಕುನುಗ್ಗಲು ಉಂಟಾಗಿ 30 ಮಂದಿ ಸಾವಿಗೀಡಾಗಿರುವುದಾಗಿ ಹೇಳಿದ್ದರು.</p><p>ಕಾಲ್ತುಳಿತದ ನಂತರ, ಉತ್ತರ ಪ್ರದೇಶದ ಸರ್ಕಾರವು ಸುರಕ್ಷತಾ ಕ್ರಮಗಳ ಭಾಗವಾಗಿ ವಿವಿಐಪಿ ಪಾಸ್ಗಳು ಮತ್ತು ವಾಹನಗಳ ಪ್ರವೇಶವನ್ನು ರದ್ದುಪಡಿಸಿತ್ತು.</p>.Maha Kumbh Stampede | ಪುಣ್ಯಸ್ನಾನಕ್ಕೆ ನೂಕುನುಗ್ಗಲು: 30 ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪ್ರಯಾಗ್ರಾಜ್</strong>: ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಬುಧವಾರ ಮಹಾಕುಂಭಮೇಳದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 30ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದರು. ಘಟನಾ ಸ್ಥಳದಿಂದ 3 ಕಿ.ಮೀ ದೂರದಲ್ಲಿ ಸಂಭವಿಸಿದ ಮತ್ತೊಂದು ಕಾಲ್ತುಳಿತದಲ್ಲಿ ಏಳು ಜನರು ಸಾವಿಗೀಡಾಗಿದ್ದಾರೆ.</p><p>ಸಂಗಮದಿಂದ 3 ಕಿ.ಮೀ ದೂರದಲ್ಲಿರುವ ಜೂಸಿ ಘಾಟ್ನಲ್ಲಿ ಈ ಕಾಲ್ತುಳಿತ ಸಂಭವಿಸಿದೆ ಎಂದು ಕಲ್ಪವಾಸಿ ಪೊಲೀಸ್ ಠಾಣೆಯ ವೃತ್ತಾಧಿಕಾರಿ ರುದ್ರ ಕುಮಾರ್ ಸಿಂಗ್ ತಿಳಿಸಿರುವುದಾಗಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.</p><p>‘ಜನಸಂದಣಿಯ ಅತಿಯಾದ ಒತ್ತಡದಿಂದಾಗಿ ಜೂಸಿಯಲ್ಲಿ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿ ಹೇಳಿದರು.</p><p>ಬುಧವಾರ ಸಂಜೆ 7 ಗಂಟೆಗೆ ಮಹಾಕುಂಭನಗರದ ಜಿಲ್ಲಾಧಿಕಾರಿ ವಿಜಯ್ ಕಿರಣ್ ಆನಂದ್ ಮತ್ತು ಮೇಳದ ಡಿಐಜಿ ವೈಭವ್ ಕೃಷ್ಣ ಅವರು ಮೊದಲ ಕಾಲ್ತುಳಿತದ ಕುರಿತು ಮಾಹಿತಿ ನೀಡಿದ್ದರು. ಈ ವೇಳೆ ಬುಧವಾರ ನಸುಕಿನ 1 ಗಂಟೆಯಿಂದ 2 ಗಂಟೆಯ ನಡುವೆ ಸಂಗಮದ ಬಳಿ ನೂಕುನುಗ್ಗಲು ಉಂಟಾಗಿ 30 ಮಂದಿ ಸಾವಿಗೀಡಾಗಿರುವುದಾಗಿ ಹೇಳಿದ್ದರು.</p><p>ಕಾಲ್ತುಳಿತದ ನಂತರ, ಉತ್ತರ ಪ್ರದೇಶದ ಸರ್ಕಾರವು ಸುರಕ್ಷತಾ ಕ್ರಮಗಳ ಭಾಗವಾಗಿ ವಿವಿಐಪಿ ಪಾಸ್ಗಳು ಮತ್ತು ವಾಹನಗಳ ಪ್ರವೇಶವನ್ನು ರದ್ದುಪಡಿಸಿತ್ತು.</p>.Maha Kumbh Stampede | ಪುಣ್ಯಸ್ನಾನಕ್ಕೆ ನೂಕುನುಗ್ಗಲು: 30 ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>