<p><strong>ಮುಂಬೈ</strong>: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ದೀಪಾವಳಿ ಹಬ್ಬದ ಬಳಿಕ ಮತ್ತು ನವೆಂಬರ್ 26ರ ಮುನ್ನ ನಡೆಯುವ ಸಾಧ್ಯತೆ ಇದೆ. </p>.<p>ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಈ ಬಗ್ಗೆ ಸುಳಿವು ನೀಡಿದ್ದಾರೆ.</p>.<p>ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಕೈಗೊಂಡಿರುವ ಪೂರ್ವಸಿದ್ಧತೆಗಳನ್ನು ಪರಿಶೀಲಿಸಲು ಮುಂಬೈಗೆ ಭೇಟಿ ನೀಡಿದ್ದ ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ನಾವು 11 ಪಕ್ಷಗಳ ನಾಯಕರನ್ನು ಭೇಟಿಯಾಗಿದ್ದೇವೆ. ಚುನಾವಣೆ ದಿನಾಂಕಗಳನ್ನು ಘೋಷಿಸುವ ಮುನ್ನ ದೀಪಾವಳಿ ಸೇರಿದಂತೆ ವಿವಿಧ ಹಬ್ಬಗಳನ್ನು ಸಹ ಪರಿಗಣಿಸಬೇಕು ಎಂದು ಕೋರಿದ್ದಾರೆ. ಹಬ್ಬದ ವೇಳೆ ರಜೆಗಳಿರುವುದರಿಂದ, ಮತದಾನ ಪ್ರಮಾಣ ಇಳಿಕೆಗೆ ಕಾರಣವಾಗಬಹುದು ಎನ್ನುವುದನ್ನು ಗಮನಕ್ಕೆ ತಂದಿದ್ದಾರೆ‘ ಎಂದು ವಿವರಿಸಿದರು.</p>.<p>’ಮಹಾರಾಷ್ಟ್ರ ವಿಧಾನಸಭೆಯ ಅವಧಿಯು ನವೆಂಬರ್ 26ಕ್ಕೆ ಅಂತ್ಯಗೊಳ್ಳಲಿದ್ದು, ಅದಕ್ಕೂ ಮೊದಲೇ ಚುನಾವಣೆ ನಡೆಯಬೇಕಿದೆ’ ಎಂದು ತಿಳಿಸಿದರು.</p>.<p><strong>‘ನಗರ ಪ್ರದೇಶದ ಜನರ ನಿರಾಸಕ್ತಿ’ </strong></p><p>ನಗರ ಪ್ರದೇಶದಲ್ಲಿನ ಜನರು ತಮ್ಮ ಮತ ಚಲಾಯಿಸಲು ನಿರಾಸಕ್ತಿ ಹೊಂದಿರುವ ಕುರಿತು ರಾಜೀವ್ ಕುಮಾರ್ ಅವರು ಕಳವಳ ವ್ಯಕ್ತಪಡಿಸಿದರು. ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ನಗರ ಪ್ರದೇಶದಲ್ಲಿಯೂ ಮತದಾನ ಪ್ರಮಾಣ ಹೆಚ್ಚಿಸಲು ಚುನಾವಣಾ ಆಯೋಗವು ಕಾರ್ಯಪ್ರವೃತ್ತವಾಗಿದೆ ಎಂದು ಇದೇ ವೇಳೆ ಹೇಳಿದರು. </p>.<p>ಒಟ್ಟು ಕ್ಷೇತ್ರಗಳು: 288 </p><p>ಎಸ್ಸಿ ಮೀಸಲು: 29</p><p>ಎಸ್ಟಿ ಮೀಸಲು: 25 </p><p>ಒಟ್ಟು ಮತದಾರರು: 9.59 ಕೋಟಿ </p><p>ಪುರುಷ ಮತದಾರರು: 4.95 ಕೋಟಿ </p><p>ಮಹಿಳಾ ಮತದಾರರು: 4.64 ಕೋಟಿ </p><p>ತೃತೀಯ ಲಿಂಗಿಗಳು: 5997 </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ದೀಪಾವಳಿ ಹಬ್ಬದ ಬಳಿಕ ಮತ್ತು ನವೆಂಬರ್ 26ರ ಮುನ್ನ ನಡೆಯುವ ಸಾಧ್ಯತೆ ಇದೆ. </p>.<p>ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಈ ಬಗ್ಗೆ ಸುಳಿವು ನೀಡಿದ್ದಾರೆ.</p>.<p>ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಕೈಗೊಂಡಿರುವ ಪೂರ್ವಸಿದ್ಧತೆಗಳನ್ನು ಪರಿಶೀಲಿಸಲು ಮುಂಬೈಗೆ ಭೇಟಿ ನೀಡಿದ್ದ ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ನಾವು 11 ಪಕ್ಷಗಳ ನಾಯಕರನ್ನು ಭೇಟಿಯಾಗಿದ್ದೇವೆ. ಚುನಾವಣೆ ದಿನಾಂಕಗಳನ್ನು ಘೋಷಿಸುವ ಮುನ್ನ ದೀಪಾವಳಿ ಸೇರಿದಂತೆ ವಿವಿಧ ಹಬ್ಬಗಳನ್ನು ಸಹ ಪರಿಗಣಿಸಬೇಕು ಎಂದು ಕೋರಿದ್ದಾರೆ. ಹಬ್ಬದ ವೇಳೆ ರಜೆಗಳಿರುವುದರಿಂದ, ಮತದಾನ ಪ್ರಮಾಣ ಇಳಿಕೆಗೆ ಕಾರಣವಾಗಬಹುದು ಎನ್ನುವುದನ್ನು ಗಮನಕ್ಕೆ ತಂದಿದ್ದಾರೆ‘ ಎಂದು ವಿವರಿಸಿದರು.</p>.<p>’ಮಹಾರಾಷ್ಟ್ರ ವಿಧಾನಸಭೆಯ ಅವಧಿಯು ನವೆಂಬರ್ 26ಕ್ಕೆ ಅಂತ್ಯಗೊಳ್ಳಲಿದ್ದು, ಅದಕ್ಕೂ ಮೊದಲೇ ಚುನಾವಣೆ ನಡೆಯಬೇಕಿದೆ’ ಎಂದು ತಿಳಿಸಿದರು.</p>.<p><strong>‘ನಗರ ಪ್ರದೇಶದ ಜನರ ನಿರಾಸಕ್ತಿ’ </strong></p><p>ನಗರ ಪ್ರದೇಶದಲ್ಲಿನ ಜನರು ತಮ್ಮ ಮತ ಚಲಾಯಿಸಲು ನಿರಾಸಕ್ತಿ ಹೊಂದಿರುವ ಕುರಿತು ರಾಜೀವ್ ಕುಮಾರ್ ಅವರು ಕಳವಳ ವ್ಯಕ್ತಪಡಿಸಿದರು. ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ನಗರ ಪ್ರದೇಶದಲ್ಲಿಯೂ ಮತದಾನ ಪ್ರಮಾಣ ಹೆಚ್ಚಿಸಲು ಚುನಾವಣಾ ಆಯೋಗವು ಕಾರ್ಯಪ್ರವೃತ್ತವಾಗಿದೆ ಎಂದು ಇದೇ ವೇಳೆ ಹೇಳಿದರು. </p>.<p>ಒಟ್ಟು ಕ್ಷೇತ್ರಗಳು: 288 </p><p>ಎಸ್ಸಿ ಮೀಸಲು: 29</p><p>ಎಸ್ಟಿ ಮೀಸಲು: 25 </p><p>ಒಟ್ಟು ಮತದಾರರು: 9.59 ಕೋಟಿ </p><p>ಪುರುಷ ಮತದಾರರು: 4.95 ಕೋಟಿ </p><p>ಮಹಿಳಾ ಮತದಾರರು: 4.64 ಕೋಟಿ </p><p>ತೃತೀಯ ಲಿಂಗಿಗಳು: 5997 </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>