<p>ಮುಂಬೈ:ಮಹಾರಾಷ್ಟ್ರದಲ್ಲಿ ಮಕ್ಕಳು ಭಿಕ್ಷೆ ಬೇಡುವುದನ್ನು ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಶೀಘ್ರವೇ ಕೌಶಲಾಭಿವೃದ್ಧಿ ಕಾರ್ಯಕ್ರಮ ಜಾರಿಗೆ ತರಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಯಶೋಮತಿ ಠಾಕೂರ್ ಶನಿವಾರ ಹೇಳಿದ್ದಾರೆ.</p>.<p>ಜಲಗಾಂವ ಹಾಗೂ ಧುಲೆ ಜಿಲ್ಲೆಗಳ ಪ್ರವಾಸ ಕೈಗೊಂಡಿರುವ ಸಚಿವೆ ಯಶೋಮತಿಯವರನ್ನು ಭೇಟಿಯಾಗಿದ್ದ ಬಾಲಕಿಯೊಬ್ಬಳು, ಭಿಕ್ಷೆ ಬೇಡಿಯೇ ಜೀವನ ಸಾಗಿಸುತ್ತಿರುವುದಾಗಿ ಹೇಳಿದ್ದಳು.</p>.<p>ಈ ಘಟನೆ ನಂತರ ಪೊಲೀಸ್ ಇಲಾಖೆ ಕಾರ್ಯವೈಖರಿ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದ ಸಚಿವೆ, ರಾಜ್ಯದಲ್ಲಿ ಮಕ್ಕಳು ಭಿಕ್ಷಾಟನೆಗಿಳಿಯುತ್ತಿರುವುದು ಹೆಚ್ಚುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.</p>.<p>ಮಕ್ಕಳು ಹಾಗೂ ವಯಸ್ಕ ಭಿಕ್ಷುಕರಲ್ಲಿ ಕೌಶಲ ಅಭಿವೃದ್ಧಿಗೆ ಕಾರ್ಯಕ್ರಮವನ್ನು ಜಾರಿಗೊಳಿಸಲಾಗುವುದು. ಆ ಮೂಲಕ ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡಲಾಗುವುದು ಎಂದು ಹೇಳಿದರು.</p>.<p>ಕೋವಿಡ್ನಿಂದಾಗಿ ಪಾಲಕರನ್ನು ಕಳೆದುಕೊಂಡು ಅನಾಥರಾಗಿರುವ ಮಕ್ಕಳಿಗೆ ನೆರವು ನೀಡುವುದಾಗಿಯೂ ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುಂಬೈ:ಮಹಾರಾಷ್ಟ್ರದಲ್ಲಿ ಮಕ್ಕಳು ಭಿಕ್ಷೆ ಬೇಡುವುದನ್ನು ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಶೀಘ್ರವೇ ಕೌಶಲಾಭಿವೃದ್ಧಿ ಕಾರ್ಯಕ್ರಮ ಜಾರಿಗೆ ತರಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಯಶೋಮತಿ ಠಾಕೂರ್ ಶನಿವಾರ ಹೇಳಿದ್ದಾರೆ.</p>.<p>ಜಲಗಾಂವ ಹಾಗೂ ಧುಲೆ ಜಿಲ್ಲೆಗಳ ಪ್ರವಾಸ ಕೈಗೊಂಡಿರುವ ಸಚಿವೆ ಯಶೋಮತಿಯವರನ್ನು ಭೇಟಿಯಾಗಿದ್ದ ಬಾಲಕಿಯೊಬ್ಬಳು, ಭಿಕ್ಷೆ ಬೇಡಿಯೇ ಜೀವನ ಸಾಗಿಸುತ್ತಿರುವುದಾಗಿ ಹೇಳಿದ್ದಳು.</p>.<p>ಈ ಘಟನೆ ನಂತರ ಪೊಲೀಸ್ ಇಲಾಖೆ ಕಾರ್ಯವೈಖರಿ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದ ಸಚಿವೆ, ರಾಜ್ಯದಲ್ಲಿ ಮಕ್ಕಳು ಭಿಕ್ಷಾಟನೆಗಿಳಿಯುತ್ತಿರುವುದು ಹೆಚ್ಚುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.</p>.<p>ಮಕ್ಕಳು ಹಾಗೂ ವಯಸ್ಕ ಭಿಕ್ಷುಕರಲ್ಲಿ ಕೌಶಲ ಅಭಿವೃದ್ಧಿಗೆ ಕಾರ್ಯಕ್ರಮವನ್ನು ಜಾರಿಗೊಳಿಸಲಾಗುವುದು. ಆ ಮೂಲಕ ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡಲಾಗುವುದು ಎಂದು ಹೇಳಿದರು.</p>.<p>ಕೋವಿಡ್ನಿಂದಾಗಿ ಪಾಲಕರನ್ನು ಕಳೆದುಕೊಂಡು ಅನಾಥರಾಗಿರುವ ಮಕ್ಕಳಿಗೆ ನೆರವು ನೀಡುವುದಾಗಿಯೂ ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>