<p><strong>ನವದೆಹಲಿ:</strong> ಕಳಸಾ ನಾಲೆಯಿಂದ ಮಲಪ್ರಭಾ ನದಿಗೆ ನೀರು ಹರಿಯದಂತೆ ತಡೆಗೋಡೆ ನಿರ್ಮಿಸಬೇಕು ಎಂಬ ಮಧ್ಯಂತರ ಆದೇಶವನ್ನು ಕರ್ನಾಟಕ ಉಲ್ಲಂಘಿಸಿದೆ ಎಂದು ದೂರಿ ಗೋವಾ ಸರ್ಕಾರ ಮಹದಾಯಿ ನ್ಯಾಯಮಂಡಳಿಗೆ ಶನಿವಾರ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದೆ.</p>.<p>ತಿರುವು ಯೋಜನೆಗಾಗಿ ಅಂತರ್ ಸಂಪರ್ಕ ಕಾಲುವೆಗಳಿಂದ ಮಹದಾಯಿ ನದಿ ನೀರು ಹರಿಸಿಕೊಳ್ಳದಂತೆ 2014ರ ಏಪ್ರಿಲ್ 17ರಂದು ನ್ಯಾಯಮಂಡಳಿಯು ತಡೆಯಾಜ್ಞೆ ನೀಡಿದೆ. ಈ ಆದೇಶವು ಕೇಂದರ ಸರ್ಕಾರ ಅಧಿಸೂಚನೆ ಹೊರಡಿಸುವವರೆಗೂ ಜಾರಿಯಲ್ಲಿರಲಿದೆ. ಆದರೆ, ಈ ಆದೇಶ ಪಾಲಿಸದ ರಾಜ್ಯ ಸರ್ಕಾರ ಈಗಾಗಲೇ ಮಲಪ್ರಭಾ ನದಿಯತ್ತ ನೀರನ್ನು ತಿರುಗಿಸಿಕೊಂಡಿದೆ ಎಂದು ಗೋವಾ ಪರ ವಕೀಲ ಪ್ರತಾಪ್ ವೇಣುಗೋಪಾಲ್ ಸಲ್ಲಿಸಿರುವ ದೂರಿನಲ್ಲಿ ತಿಳಿಸಲಾಗಿದೆ.</p>.<p>ನ್ಯಾಯಮಂಡಳಿ ಆದೇಶ ಉಲ್ಲಂಘನೆಯಲ್ಲಿ ಕರ್ನಾಟಕ ಸರ್ಕಾರದ ಅಧಿಕಾರಿಗಳೇ ಜವಾಬ್ದಾರರಾಗಿದ್ದು, ತಪ್ಪಿತಸ್ಥರಾದ ಸರ್ಕಾರದ ಮುಖ್ಯ ಕಾರ್ಯದರ್ಶಿ, ಜಲಸಂಪನ್ಮೂಲ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಮುಖ್ಯ ಎಂಜಿನಿಯರ್, ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಇತರ ಅಧಿಕಾರಿಗಳನ್ನು ಬಂಧಿಸಬೇಕು ಎಂದು ದೂರಿನಲ್ಲಿ ಕೋರಲಾಗಿದೆ.</p>.<p>ಮಹದಾಯಿ ನದಿಯತ್ತ ಹರಿಯುವ ಕಳಸಾ ನಾಲೆಯು ನೈಸರ್ಗಿಕವಾಗಿ ಹರಿಯುವ ವಿರುದ್ಧ ದಿಕ್ಕಿಗೆ ತಿರುಗಿಸಿಕೊಳ್ಳಲಾಗಿದೆ. ಕಣಕುಂಬಿ ಗ್ರಾಮದ ಬಳಿ ನಿರ್ಮಿಸಲಾಗಿರುವ ತಡೆಗೋಡೆ ತೆರವುಗೊಳಿಸಿ ಮಲಪ್ರಭಾ ನದಿಯತ್ತ ನೀರನ್ನು ಹರಿಸಿಕೊಳ್ಳಲಾಗುತ್ತಿದೆ. ರಾಜ್ಯದ ಜನಪ್ರತಿನಿಧಿಗಳು, ಅಧಿಕಾರಿಗಳು ಕಳೆದ ಜುಲೈ 23ರಂದು ಗಡಿ ಭಾಗದಲ್ಲಿರುವ ಈ ಸ್ಥಳಕ್ಕೆ ಭೇಟಿ ನೀಡಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ ಎಂದು ವಿವರಿಸಲಾಗಿದ್ದು, ಗೋವಾದಿಂದ ಪ್ರಕಟವಾಗಿರುವ ಕೆಲವು ಪತ್ರಿಕೆಗಳ ವರದಿಗಳನ್ನು ಅಡಕಗೊಳಿಸಲಾಗಿದೆ.</p>.<p>ಕೇಂದ್ರ ಸರ್ಕಾರವು ನೀರು ಹಂಚಿಕೆ ಕುರಿತು ಅಧಿಸೂಚನೆ ಹೊರಡಿಸಿ, ಪ್ರಾಧಿಕಾರ ರಚನೆ ಆಗುವವರಗೆ ಇದುವರೆಗೆ ನೀಡಲಾದ ತನ್ನ ಎಲ್ಲ ಮಧ್ಯಂತರ ಆದೇಶಗಳು, ತಡೆಯಾಜ್ಞೆಗಳು ಜಾರಿಯಲ್ಲಿರುತ್ತವೆ ಎಂದು ಕಳೆದ ಮಂಗಳವಾರ ಪ್ರಕಟಿಸಲಾದ ಐತೀರ್ಪಿನಲ್ಲಿ ನ್ಯಾಯಮಂಡಳಿ ಸ್ಪಷ್ಟಪಡಿಸಿದೆ.</p>.<p>ಅಲ್ಲದೆ, ತಾನು ವಿಧಿಸಿರುವ ಎಲ್ಲ ಷರತ್ತುಗಳನ್ನು ಪಾಲಿಸುವವರಗೆ ಮಧ್ಯಂತರ ಆದೇಶಗಳು ಜಾರಿಯಲ್ಲಿರಲಿವೆ. ಕಳಸಾ ನಾಲೆಯಿಂದ ಕರ್ನಾಟಕದತ್ತ ನೀರು ತಿರುಗಿಸಲು ನಿರ್ಮಿಸುತ್ತಿರುವ ಕಾಲುವೆಯಿಂದ ನೀರನ್ನು ಹರಿಸಿಕೊಳ್ಳಕೂಡದು ಎಂದು ಐತೀರ್ಪಿನಲ್ಲಿ ಸಾರಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕಳಸಾ ನಾಲೆಯಿಂದ ಮಲಪ್ರಭಾ ನದಿಗೆ ನೀರು ಹರಿಯದಂತೆ ತಡೆಗೋಡೆ ನಿರ್ಮಿಸಬೇಕು ಎಂಬ ಮಧ್ಯಂತರ ಆದೇಶವನ್ನು ಕರ್ನಾಟಕ ಉಲ್ಲಂಘಿಸಿದೆ ಎಂದು ದೂರಿ ಗೋವಾ ಸರ್ಕಾರ ಮಹದಾಯಿ ನ್ಯಾಯಮಂಡಳಿಗೆ ಶನಿವಾರ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದೆ.</p>.<p>ತಿರುವು ಯೋಜನೆಗಾಗಿ ಅಂತರ್ ಸಂಪರ್ಕ ಕಾಲುವೆಗಳಿಂದ ಮಹದಾಯಿ ನದಿ ನೀರು ಹರಿಸಿಕೊಳ್ಳದಂತೆ 2014ರ ಏಪ್ರಿಲ್ 17ರಂದು ನ್ಯಾಯಮಂಡಳಿಯು ತಡೆಯಾಜ್ಞೆ ನೀಡಿದೆ. ಈ ಆದೇಶವು ಕೇಂದರ ಸರ್ಕಾರ ಅಧಿಸೂಚನೆ ಹೊರಡಿಸುವವರೆಗೂ ಜಾರಿಯಲ್ಲಿರಲಿದೆ. ಆದರೆ, ಈ ಆದೇಶ ಪಾಲಿಸದ ರಾಜ್ಯ ಸರ್ಕಾರ ಈಗಾಗಲೇ ಮಲಪ್ರಭಾ ನದಿಯತ್ತ ನೀರನ್ನು ತಿರುಗಿಸಿಕೊಂಡಿದೆ ಎಂದು ಗೋವಾ ಪರ ವಕೀಲ ಪ್ರತಾಪ್ ವೇಣುಗೋಪಾಲ್ ಸಲ್ಲಿಸಿರುವ ದೂರಿನಲ್ಲಿ ತಿಳಿಸಲಾಗಿದೆ.</p>.<p>ನ್ಯಾಯಮಂಡಳಿ ಆದೇಶ ಉಲ್ಲಂಘನೆಯಲ್ಲಿ ಕರ್ನಾಟಕ ಸರ್ಕಾರದ ಅಧಿಕಾರಿಗಳೇ ಜವಾಬ್ದಾರರಾಗಿದ್ದು, ತಪ್ಪಿತಸ್ಥರಾದ ಸರ್ಕಾರದ ಮುಖ್ಯ ಕಾರ್ಯದರ್ಶಿ, ಜಲಸಂಪನ್ಮೂಲ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಮುಖ್ಯ ಎಂಜಿನಿಯರ್, ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಇತರ ಅಧಿಕಾರಿಗಳನ್ನು ಬಂಧಿಸಬೇಕು ಎಂದು ದೂರಿನಲ್ಲಿ ಕೋರಲಾಗಿದೆ.</p>.<p>ಮಹದಾಯಿ ನದಿಯತ್ತ ಹರಿಯುವ ಕಳಸಾ ನಾಲೆಯು ನೈಸರ್ಗಿಕವಾಗಿ ಹರಿಯುವ ವಿರುದ್ಧ ದಿಕ್ಕಿಗೆ ತಿರುಗಿಸಿಕೊಳ್ಳಲಾಗಿದೆ. ಕಣಕುಂಬಿ ಗ್ರಾಮದ ಬಳಿ ನಿರ್ಮಿಸಲಾಗಿರುವ ತಡೆಗೋಡೆ ತೆರವುಗೊಳಿಸಿ ಮಲಪ್ರಭಾ ನದಿಯತ್ತ ನೀರನ್ನು ಹರಿಸಿಕೊಳ್ಳಲಾಗುತ್ತಿದೆ. ರಾಜ್ಯದ ಜನಪ್ರತಿನಿಧಿಗಳು, ಅಧಿಕಾರಿಗಳು ಕಳೆದ ಜುಲೈ 23ರಂದು ಗಡಿ ಭಾಗದಲ್ಲಿರುವ ಈ ಸ್ಥಳಕ್ಕೆ ಭೇಟಿ ನೀಡಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ ಎಂದು ವಿವರಿಸಲಾಗಿದ್ದು, ಗೋವಾದಿಂದ ಪ್ರಕಟವಾಗಿರುವ ಕೆಲವು ಪತ್ರಿಕೆಗಳ ವರದಿಗಳನ್ನು ಅಡಕಗೊಳಿಸಲಾಗಿದೆ.</p>.<p>ಕೇಂದ್ರ ಸರ್ಕಾರವು ನೀರು ಹಂಚಿಕೆ ಕುರಿತು ಅಧಿಸೂಚನೆ ಹೊರಡಿಸಿ, ಪ್ರಾಧಿಕಾರ ರಚನೆ ಆಗುವವರಗೆ ಇದುವರೆಗೆ ನೀಡಲಾದ ತನ್ನ ಎಲ್ಲ ಮಧ್ಯಂತರ ಆದೇಶಗಳು, ತಡೆಯಾಜ್ಞೆಗಳು ಜಾರಿಯಲ್ಲಿರುತ್ತವೆ ಎಂದು ಕಳೆದ ಮಂಗಳವಾರ ಪ್ರಕಟಿಸಲಾದ ಐತೀರ್ಪಿನಲ್ಲಿ ನ್ಯಾಯಮಂಡಳಿ ಸ್ಪಷ್ಟಪಡಿಸಿದೆ.</p>.<p>ಅಲ್ಲದೆ, ತಾನು ವಿಧಿಸಿರುವ ಎಲ್ಲ ಷರತ್ತುಗಳನ್ನು ಪಾಲಿಸುವವರಗೆ ಮಧ್ಯಂತರ ಆದೇಶಗಳು ಜಾರಿಯಲ್ಲಿರಲಿವೆ. ಕಳಸಾ ನಾಲೆಯಿಂದ ಕರ್ನಾಟಕದತ್ತ ನೀರು ತಿರುಗಿಸಲು ನಿರ್ಮಿಸುತ್ತಿರುವ ಕಾಲುವೆಯಿಂದ ನೀರನ್ನು ಹರಿಸಿಕೊಳ್ಳಕೂಡದು ಎಂದು ಐತೀರ್ಪಿನಲ್ಲಿ ಸಾರಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>