<p><strong>ನವದೆಹಲಿ</strong>: ಮಹದೇವ್ ಆನ್ಲೈನ್ ಬೆಟ್ಟಿಂಗ್ ಆ್ಯಪ್ ನಂಟಿನ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು(ಇ.ಡಿ) 'ಈಸಿ ಮೈ ಟ್ರಿಪ್' ಸಂಸ್ಥಾಪಕ ನಿಶಾಂತ್ ಪಿಟ್ಟಿ ಅವರಿಗೆ ಸೇರಿದ ಸ್ಥಳಗಳು ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ದಾಳಿ ನಡೆಸಿದೆ.</p><p>ದೆಹಲಿ, ಮುಂಬೈ, ಚಂಡೀಗಢ, ಅಹಮದಾಬಾದ್, ಇಂದೋರ್, ಜೈಪುರ, ಚೆನ್ನೈ ಮತ್ತು ಸಂಬಲ್ಪುರದಲ್ಲಿ ಇ.ಡಿ ದಾಳಿ ನಡೆಸಿದೆ.</p><p>ಛತ್ತೀಸಗಢದ ಹಲವು ಪ್ರಭಾವಿ ರಾಜಕಾರಣಿಗಳು ಮತ್ತು ಅಧಿಕಾರಿಗಳು ಆ್ಯಪ್ಗೆ ಸಂಬಂಧಿಸಿದ ಅಕ್ರಮ ಕಾರ್ಯಾಚರಣೆ ಮತ್ತು ನಂತರದ ಹಣಕಾಸು ವಹಿವಾಟುಗಳಲ್ಲಿ ಭಾಗಿಯಾಗಿದ್ದಾರೆಂದು ಕೆಲವು ವರ್ಷಗಳ ಹಿಂದೆ ಇ.ಡಿ ಹೇಳಿಕೆ ಬಿಡುಗಡೆ ಮಾಡಿದ ಬಳಿಕ ಈ ಪ್ರಕರಣವು ಭಾರಿ ಸುದ್ದಿಯಾಗಿತ್ತು.</p><p>ಪ್ರಕರಣದಲ್ಲಿ ಈ ಹಿಂದೆಯೂ ಶೋಧ ಕಾರ್ಯಾಚರಣೆ ನಡೆಸಲಾಗಿದೆ.</p><p>ಮಹದೇವ್ ಆನ್ಲೈನ್ ಬೆಟ್ಟಿಂಗ್ (ಎಂಒಬಿ) ಗೇಮಿಂಗ್ ಮತ್ತು ಬೆಟ್ಟಿಂಗ್ ಆ್ಯಪ್ನಲ್ಲಿನ ಅಕ್ರಮದಲ್ಲಿ ಛತ್ತೀಸಗಢದ ವಿವಿಧ ರಾಜಕಾರಣಿಗಳು ಮತ್ತು ಅಧಿಕಾರಿಗಳು ಭಾಗಿಯಾಗಿರುವುದು ಕಂಡುಬಂದಿದೆ ಎಂದು ಇ.ಡಿ ಈ ಹಿಂದೆ ಆರೋಪಿಸಿತ್ತು. ಈ ಆ್ಯಪ್ನ ಇಬ್ಬರು ಪ್ರವರ್ತಕರಾದ ಸೌರಭ್ ಚಂದ್ರಕರ್ ಮತ್ತು ರವಿ ಉಪ್ಪಲ್ ಪ್ರಕರಣದ ಪ್ರಮುಖ ಆರೋಪಿಗಳಾಗಿದ್ದಾರೆ.</p><p>ಅಕ್ರಮ ಬೆಟ್ಟಿಂಗ್ ವೆಬ್ಸೈಟ್ಗಳಿಗೆ ಹೊಸ ಬಳಕೆದಾರರನ್ನು ದಾಖಲಿಸಲು, ಐಡಿಗಳನ್ನು ರಚಿಸಲು ಮತ್ತು ಹಣ ವರ್ಗಾವಣೆ ಮಾಡಲು ಮಹದೇವ್ ಆ್ಯಪ್ ಅನುಕೂಲ ಮಾಡಿಕೊಡುತ್ತಿತ್ತು ಎಂದು ಇ.ಡಿ ಹೇಳಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಮಹದೇವ್ ಆನ್ಲೈನ್ ಬೆಟ್ಟಿಂಗ್ ಆ್ಯಪ್ ನಂಟಿನ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು(ಇ.ಡಿ) 'ಈಸಿ ಮೈ ಟ್ರಿಪ್' ಸಂಸ್ಥಾಪಕ ನಿಶಾಂತ್ ಪಿಟ್ಟಿ ಅವರಿಗೆ ಸೇರಿದ ಸ್ಥಳಗಳು ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ದಾಳಿ ನಡೆಸಿದೆ.</p><p>ದೆಹಲಿ, ಮುಂಬೈ, ಚಂಡೀಗಢ, ಅಹಮದಾಬಾದ್, ಇಂದೋರ್, ಜೈಪುರ, ಚೆನ್ನೈ ಮತ್ತು ಸಂಬಲ್ಪುರದಲ್ಲಿ ಇ.ಡಿ ದಾಳಿ ನಡೆಸಿದೆ.</p><p>ಛತ್ತೀಸಗಢದ ಹಲವು ಪ್ರಭಾವಿ ರಾಜಕಾರಣಿಗಳು ಮತ್ತು ಅಧಿಕಾರಿಗಳು ಆ್ಯಪ್ಗೆ ಸಂಬಂಧಿಸಿದ ಅಕ್ರಮ ಕಾರ್ಯಾಚರಣೆ ಮತ್ತು ನಂತರದ ಹಣಕಾಸು ವಹಿವಾಟುಗಳಲ್ಲಿ ಭಾಗಿಯಾಗಿದ್ದಾರೆಂದು ಕೆಲವು ವರ್ಷಗಳ ಹಿಂದೆ ಇ.ಡಿ ಹೇಳಿಕೆ ಬಿಡುಗಡೆ ಮಾಡಿದ ಬಳಿಕ ಈ ಪ್ರಕರಣವು ಭಾರಿ ಸುದ್ದಿಯಾಗಿತ್ತು.</p><p>ಪ್ರಕರಣದಲ್ಲಿ ಈ ಹಿಂದೆಯೂ ಶೋಧ ಕಾರ್ಯಾಚರಣೆ ನಡೆಸಲಾಗಿದೆ.</p><p>ಮಹದೇವ್ ಆನ್ಲೈನ್ ಬೆಟ್ಟಿಂಗ್ (ಎಂಒಬಿ) ಗೇಮಿಂಗ್ ಮತ್ತು ಬೆಟ್ಟಿಂಗ್ ಆ್ಯಪ್ನಲ್ಲಿನ ಅಕ್ರಮದಲ್ಲಿ ಛತ್ತೀಸಗಢದ ವಿವಿಧ ರಾಜಕಾರಣಿಗಳು ಮತ್ತು ಅಧಿಕಾರಿಗಳು ಭಾಗಿಯಾಗಿರುವುದು ಕಂಡುಬಂದಿದೆ ಎಂದು ಇ.ಡಿ ಈ ಹಿಂದೆ ಆರೋಪಿಸಿತ್ತು. ಈ ಆ್ಯಪ್ನ ಇಬ್ಬರು ಪ್ರವರ್ತಕರಾದ ಸೌರಭ್ ಚಂದ್ರಕರ್ ಮತ್ತು ರವಿ ಉಪ್ಪಲ್ ಪ್ರಕರಣದ ಪ್ರಮುಖ ಆರೋಪಿಗಳಾಗಿದ್ದಾರೆ.</p><p>ಅಕ್ರಮ ಬೆಟ್ಟಿಂಗ್ ವೆಬ್ಸೈಟ್ಗಳಿಗೆ ಹೊಸ ಬಳಕೆದಾರರನ್ನು ದಾಖಲಿಸಲು, ಐಡಿಗಳನ್ನು ರಚಿಸಲು ಮತ್ತು ಹಣ ವರ್ಗಾವಣೆ ಮಾಡಲು ಮಹದೇವ್ ಆ್ಯಪ್ ಅನುಕೂಲ ಮಾಡಿಕೊಡುತ್ತಿತ್ತು ಎಂದು ಇ.ಡಿ ಹೇಳಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>