<p><strong>ಪಾಟ್ನಾ:</strong> ಬಿಹಾರದಲ್ಲಿ ‘ಮಹಾಘಟಬಂಧನ’ ಮೈತ್ರಿಕೂಟವು ಅಧಿಕಾರಕ್ಕೇರಿದರೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತಂದಿರುವ ವಕ್ಫ್ ಕಾಯ್ದೆಯನ್ನು ಕಸದ ಬುಟ್ಟಿಗೆ ಎಸೆಯಲಿದೆ ಎಂದು ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಭಾನುವಾರ ಹೇಳಿದ್ದಾರೆ.</p>.<p>ಇಲ್ಲಿನ ಗಾಂಧಿ ಮೈದಾನದಲ್ಲಿ ನಡೆದ ‘ವಕ್ಫ್ ಉಳಿಸಿ, ಸಂವಿಧಾನ ಉಳಿಸಿ’ ರ್ಯಾಲಿಯಲ್ಲಿ ಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಪ್ರತಿಭಟನೆಯ ಸಂಕೇತವಾಗಿ ಕಪ್ಪು ಪಟ್ಟಿ ಧರಿಸಿದ್ದರು.</p>.<p class="bodytext">‘ಆರ್ಜೆಡಿಯು ವಕ್ಫ್ ಕಾಯ್ದೆಯನ್ನು ಪ್ರಬಲವಾಗಿ ವಿರೋಧಿಸುತ್ತದೆ ಎಂದು ನಮ್ಮ ರಾಷ್ಟ್ರೀಯ ಅಧ್ಯಕ್ಷ ಲಾಲು ಪ್ರಸಾದ್ ಸ್ಪಷ್ಟಪಡಿಸಿದ್ದಾರೆ. ನಮ್ಮ ಪಕ್ಷದ ಸಂಸದರು ಇದನ್ನು ಸಂಸತ್ತಿನ ಎರಡೂ ಸದನಗಳಲ್ಲಿ ವಿರೋಧಿಸಿದ್ದಾರೆ. ವಕ್ಫ್ ಕಾಯ್ದೆ ವಿರೋಧಿಸಿ ನಾವು ನ್ಯಾಯಾಲಯದ ಮೊರೆ ಹೋಗಿದ್ದೇವೆ’ ಎಂದಿದ್ದಾರೆ.</p>.<p class="bodytext">‘ಬಿಹಾರದಲ್ಲಿ ಎನ್ಡಿಎ ಸರ್ಕಾರ ಪತನಗೊಳ್ಳುವ ಹಾದಿಯಲ್ಲಿದೆ ಎಂಬುದನ್ನು ರಾಜ್ಯದ ನನ್ನ ಮುಸ್ಲಿಂ ಸಹೋದರರು ನೆನಪಿನಲ್ಲಿಟ್ಟುಕೊಳ್ಳಬೇಕು ಎಂದು ಕೇಳಿಕೊಳ್ಳುತ್ತೇನೆ. ನವೆಂಬರ್ನಲ್ಲಿ, ರಾಜ್ಯದಲ್ಲಿ ಬಡವರ ಪರವಾಗಿರುವ ಹೊಸ ಸರ್ಕಾರ ಸ್ಥಾಪಿಸಲಾಗುವುದು ಮತ್ತು ಅದು ವಕ್ಫ್ ಕಾಯ್ದೆಯನ್ನು ಕಸದ ಬುಟ್ಟಿಗೆ ಎಸೆಯಲಿದೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾಟ್ನಾ:</strong> ಬಿಹಾರದಲ್ಲಿ ‘ಮಹಾಘಟಬಂಧನ’ ಮೈತ್ರಿಕೂಟವು ಅಧಿಕಾರಕ್ಕೇರಿದರೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತಂದಿರುವ ವಕ್ಫ್ ಕಾಯ್ದೆಯನ್ನು ಕಸದ ಬುಟ್ಟಿಗೆ ಎಸೆಯಲಿದೆ ಎಂದು ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಭಾನುವಾರ ಹೇಳಿದ್ದಾರೆ.</p>.<p>ಇಲ್ಲಿನ ಗಾಂಧಿ ಮೈದಾನದಲ್ಲಿ ನಡೆದ ‘ವಕ್ಫ್ ಉಳಿಸಿ, ಸಂವಿಧಾನ ಉಳಿಸಿ’ ರ್ಯಾಲಿಯಲ್ಲಿ ಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಪ್ರತಿಭಟನೆಯ ಸಂಕೇತವಾಗಿ ಕಪ್ಪು ಪಟ್ಟಿ ಧರಿಸಿದ್ದರು.</p>.<p class="bodytext">‘ಆರ್ಜೆಡಿಯು ವಕ್ಫ್ ಕಾಯ್ದೆಯನ್ನು ಪ್ರಬಲವಾಗಿ ವಿರೋಧಿಸುತ್ತದೆ ಎಂದು ನಮ್ಮ ರಾಷ್ಟ್ರೀಯ ಅಧ್ಯಕ್ಷ ಲಾಲು ಪ್ರಸಾದ್ ಸ್ಪಷ್ಟಪಡಿಸಿದ್ದಾರೆ. ನಮ್ಮ ಪಕ್ಷದ ಸಂಸದರು ಇದನ್ನು ಸಂಸತ್ತಿನ ಎರಡೂ ಸದನಗಳಲ್ಲಿ ವಿರೋಧಿಸಿದ್ದಾರೆ. ವಕ್ಫ್ ಕಾಯ್ದೆ ವಿರೋಧಿಸಿ ನಾವು ನ್ಯಾಯಾಲಯದ ಮೊರೆ ಹೋಗಿದ್ದೇವೆ’ ಎಂದಿದ್ದಾರೆ.</p>.<p class="bodytext">‘ಬಿಹಾರದಲ್ಲಿ ಎನ್ಡಿಎ ಸರ್ಕಾರ ಪತನಗೊಳ್ಳುವ ಹಾದಿಯಲ್ಲಿದೆ ಎಂಬುದನ್ನು ರಾಜ್ಯದ ನನ್ನ ಮುಸ್ಲಿಂ ಸಹೋದರರು ನೆನಪಿನಲ್ಲಿಟ್ಟುಕೊಳ್ಳಬೇಕು ಎಂದು ಕೇಳಿಕೊಳ್ಳುತ್ತೇನೆ. ನವೆಂಬರ್ನಲ್ಲಿ, ರಾಜ್ಯದಲ್ಲಿ ಬಡವರ ಪರವಾಗಿರುವ ಹೊಸ ಸರ್ಕಾರ ಸ್ಥಾಪಿಸಲಾಗುವುದು ಮತ್ತು ಅದು ವಕ್ಫ್ ಕಾಯ್ದೆಯನ್ನು ಕಸದ ಬುಟ್ಟಿಗೆ ಎಸೆಯಲಿದೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>