‘ಬಿಜೆಪಿಯನ್ನು ವಿರೋಧಿಸುವವರ ವಿರುದ್ಧ ಸಿಬಿಐ, ತನಿಖೆಯ ಅಸ್ತ್ರ ಪ್ರಯೋಗಿಸುತ್ತಿರುವುದು ಅಚ್ಚರಿ ಮೂಡಿಸಿದೆ. ತನಿಖಾ ಸಂಸ್ಥೆಯು ಬಿಜೆಪಿ ನಾಯಕರ ವಿರುದ್ಧ ಯಾವುದೇ ಪ್ರಕರಣ ದಾಖಲಿಸುತ್ತಿಲ್ಲ. ವಿರೋಧ ಪಕ್ಷಗಳ ನಾಯಕರ ವರ್ಚಸ್ಸು ಕೆಡಿಸಲು ಕೇಂದ್ರದ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ’ ಎಂದು ಬಿಹಾರದ ಹಣಕಾಸು ಸಚಿವ ವಿಜಯ್ಕುಮಾರ್ ಚೌಧರಿ ದೂರಿದ್ದಾರೆ.