<p><strong>ಮುಂಬೈ</strong>: ರಾಜ್ಯದಲ್ಲಿ ನಕ್ಸಲೀಯ ಚಟುವಟಿಕೆಗಳನ್ನು ನಿಗ್ರಹಿಸುವ ಮಸೂದೆಗೆ ಮಹಾರಾಷ್ಟ್ರ ವಿಧಾನ ಪರಿಷತ್ತು ಶುಕ್ರವಾರ ಅನುಮೋದನೆ ನೀಡಿತು.</p>.<p>ಮಸೂದೆ ವಿರೋಧಿಸಿ ವಿಪಕ್ಷಗಳ ಸದಸ್ಯರ ಸಭಾತ್ಯಾಗದ ನಡುವೆಯೇ, ‘ಮಹಾರಾಷ್ಟ್ರ ವಿಶೇಷ ಸಾರ್ವಜನಿಕ ಭದ್ರತಾ ಮಸೂದೆ’ಯನ್ನು ವಿಧಾನ ಪರಿಷತ್ತು ಅನುಮೋದಿಸಿತು.</p>.<p>ವಿಧಾನಸಭೆಯು ಈ ಮಸೂದೆಯನ್ನು ಗುರುವಾರ ಅನುಮೋದಿಸಿತ್ತು. ಗೃಹ ಖಾತೆ ರಾಜ್ಯ ಸಚಿವ ಯೋಗೇಶ್ ಕದಮ್, ಪರಿಷತ್ತಿನಲ್ಲಿ ಈ ಮಸೂದೆ ಮಂಡಿದರು. </p>.<p>ಮಸೂದೆ ಮಂಡಿಸಿ ಮಾತನಾಡಿದ ಸಚಿವ ಕದಮ್,‘ಸಿಪಿಐ(ಮಾವೋವಾದಿ) ರಾಜ್ಯದಲ್ಲಿ ಸಶಸ್ತ್ರ ದಂಗೆಯನ್ನು ಹಬ್ಬಿಸುತ್ತಿದೆ. ಇದನ್ನು ನಿಷೇಧಿಸಲಾಗಿದ್ದರೂ, ಇದರಡಿ ಕಾರ್ಯನಿರ್ವಹಿಸುವ ಕೆಲ ಸಂಘಟನೆಗಳು ಭಯೋತ್ಪಾದಕ ಕೃತ್ಯಗಳಲ್ಲಿ ತೊಡಗಿವೆ’ ಎಂದರು.</p>.<p>‘ಯುಎಪಿಎ ಮತ್ತು ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ ಇರುವಾಗ ನಕ್ಸಲೀಯ ಚಟುವಟಿಕೆಗಳ ನಿಗ್ರಹಕ್ಕೆ ಮತ್ತೊಂದು ಹೊಸ ಕಾನೂನಿನ ಅಗತ್ಯವಿದೆಯೇ’ ಎಂದು ವಿರೋಧ ಪಕ್ಷಗಳು ಪ್ರಶ್ನಿಸಿದವು. ಸಚಿವರ ಉತ್ತರದಿಂದ ತೃಪ್ತರಾಗದ ವಿರೋಧ ಪಕ್ಷಗಳ ಶಾಸಕರು ನಂತರ, ಸಭಾತ್ಯಾಗ ಮಾಡಿದರು.</p>.<p>ಇದು ಕಾಯ್ದೆಯಾಗಿ ಜಾರಿಗೆ ಬಂದ ನಂತರ, ಇದರಡಿ ದಾಖಲಾಗುವ ಎಲ್ಲ ಪ್ರಕರಣಗಳನ್ನು ಗಂಭೀರ ಸ್ವರೂಪದ ಹಾಗೂ ಜಾಮೀನು ರಹಿತ ಪ್ರಕರಣಗಳು ಎಂದು ಪರಿಗಣಿಸಲಾಗುತ್ತದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ರಾಜ್ಯದಲ್ಲಿ ನಕ್ಸಲೀಯ ಚಟುವಟಿಕೆಗಳನ್ನು ನಿಗ್ರಹಿಸುವ ಮಸೂದೆಗೆ ಮಹಾರಾಷ್ಟ್ರ ವಿಧಾನ ಪರಿಷತ್ತು ಶುಕ್ರವಾರ ಅನುಮೋದನೆ ನೀಡಿತು.</p>.<p>ಮಸೂದೆ ವಿರೋಧಿಸಿ ವಿಪಕ್ಷಗಳ ಸದಸ್ಯರ ಸಭಾತ್ಯಾಗದ ನಡುವೆಯೇ, ‘ಮಹಾರಾಷ್ಟ್ರ ವಿಶೇಷ ಸಾರ್ವಜನಿಕ ಭದ್ರತಾ ಮಸೂದೆ’ಯನ್ನು ವಿಧಾನ ಪರಿಷತ್ತು ಅನುಮೋದಿಸಿತು.</p>.<p>ವಿಧಾನಸಭೆಯು ಈ ಮಸೂದೆಯನ್ನು ಗುರುವಾರ ಅನುಮೋದಿಸಿತ್ತು. ಗೃಹ ಖಾತೆ ರಾಜ್ಯ ಸಚಿವ ಯೋಗೇಶ್ ಕದಮ್, ಪರಿಷತ್ತಿನಲ್ಲಿ ಈ ಮಸೂದೆ ಮಂಡಿದರು. </p>.<p>ಮಸೂದೆ ಮಂಡಿಸಿ ಮಾತನಾಡಿದ ಸಚಿವ ಕದಮ್,‘ಸಿಪಿಐ(ಮಾವೋವಾದಿ) ರಾಜ್ಯದಲ್ಲಿ ಸಶಸ್ತ್ರ ದಂಗೆಯನ್ನು ಹಬ್ಬಿಸುತ್ತಿದೆ. ಇದನ್ನು ನಿಷೇಧಿಸಲಾಗಿದ್ದರೂ, ಇದರಡಿ ಕಾರ್ಯನಿರ್ವಹಿಸುವ ಕೆಲ ಸಂಘಟನೆಗಳು ಭಯೋತ್ಪಾದಕ ಕೃತ್ಯಗಳಲ್ಲಿ ತೊಡಗಿವೆ’ ಎಂದರು.</p>.<p>‘ಯುಎಪಿಎ ಮತ್ತು ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ ಇರುವಾಗ ನಕ್ಸಲೀಯ ಚಟುವಟಿಕೆಗಳ ನಿಗ್ರಹಕ್ಕೆ ಮತ್ತೊಂದು ಹೊಸ ಕಾನೂನಿನ ಅಗತ್ಯವಿದೆಯೇ’ ಎಂದು ವಿರೋಧ ಪಕ್ಷಗಳು ಪ್ರಶ್ನಿಸಿದವು. ಸಚಿವರ ಉತ್ತರದಿಂದ ತೃಪ್ತರಾಗದ ವಿರೋಧ ಪಕ್ಷಗಳ ಶಾಸಕರು ನಂತರ, ಸಭಾತ್ಯಾಗ ಮಾಡಿದರು.</p>.<p>ಇದು ಕಾಯ್ದೆಯಾಗಿ ಜಾರಿಗೆ ಬಂದ ನಂತರ, ಇದರಡಿ ದಾಖಲಾಗುವ ಎಲ್ಲ ಪ್ರಕರಣಗಳನ್ನು ಗಂಭೀರ ಸ್ವರೂಪದ ಹಾಗೂ ಜಾಮೀನು ರಹಿತ ಪ್ರಕರಣಗಳು ಎಂದು ಪರಿಗಣಿಸಲಾಗುತ್ತದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>