<p><strong>ವಾಶಿಂ, ಮಹಾರಾಷ್ಟ್ರ</strong>: ಕಾಂಗ್ರೆಸ್ ಅನ್ನು ‘ನಗರ ನಕ್ಸಲರ ಗ್ಯಾಂಗ್’ ಮುನ್ನಡೆಸುತ್ತಿದೆ ಎಂದು ಆರೋಪಿಸಿರುವ ಪ್ರಧಾನಿ ನರೇಂದ್ರ ಮೋದಿ, ಆ ಪಕ್ಷದ ‘ಅಪಾಯಕಾರಿ ಸಿದ್ಧಾಂತ’ವನ್ನು ಸೋಲಿಸಲು ಜನರು ಒಟ್ಟಾಗಬೇಕು ಎಂದು ಕರೆ ನೀಡಿದರು.</p>.<p>‘ದೇಶವನ್ನು ವಿಭಜಿಸುವ ಅವರ ಕಾರ್ಯಸೂಚಿಯು ನಾವೆಲ್ಲರೂ ಒಗ್ಗೂಡಿದರೆ ವಿಫಲಗೊಳ್ಳುತ್ತದೆ’ ಎಂದು ಮಹಾರಾಷ್ಟ್ರದ ವಾಶಿಂ ಜಿಲ್ಲೆಯಲ್ಲಿ ಶನಿವಾರ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ ನಂತರ ರ್ಯಾಲಿಯನ್ನುದ್ದೇಶಿಸಿ ಮಾತನಾಡುತ್ತಾ ಹೇಳಿದರು.</p><p>‘ತನ್ನ ಸ್ವಾರ್ಥ ರಾಜಕಾರಣಕ್ಕಾಗಿ ಬಡವರನ್ನು ಲೂಟಿ ಮಾಡಿ ಅವರನ್ನು ಬಡವರಾಗಿಯೇ ಉಳಿಸುವುದು ಮಾತ್ರ ಕಾಂಗ್ರೆಸ್ಗೆ ಗೊತ್ತು. ಸಮಾಜವನ್ನು ಒಡೆಯುವುದಷ್ಟೆ ಆ ಪಕ್ಷದ ಕೆಲಸ. ನಾವು ಎಚ್ಚೆತ್ತುಕೊಂಡು ಒಗ್ಗಟ್ಟಿನಿಂದ ಇರಬೇಕು’ ಎಂದರು.</p><p>‘ಈಚೆಗೆ ದೆಹಲಿಯಲ್ಲಿ ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದ್ದು, ಕಾಂಗ್ರೆಸ್ನ ಮುಖಂಡರೊಬ್ಬರು ಅದರ ಕಿಂಗ್ಪಿನ್ ಆಗಿರುವ ಶಂಕೆ ವ್ಯಕ್ತವಾಗಿದೆ. ಯುವಕರಿಗೆ ಮಾದಕ ವಸ್ತುಗಳನ್ನು ಪೂರೈಸಿ, ಅದರಿಂದ ಬರುವ ಹಣದಿಂದ ಚುನಾವಣೆ ಎದುರಿಸಲು ಕಾಂಗ್ರೆಸ್ ಬಯಸಿದೆ’ ಎಂದು ಆರೋಪಿಸಿದರು.</p><p>‘ಬ್ರಿಟಿಷರಂತೆ ಈ ಕಾಂಗ್ರೆಸ್ನ ಕುಟುಂಬ ಕೂಡಾ ದಲಿತರು, ಹಿಂದುಳಿದವರು ಮತ್ತು ಬುಡಕಟ್ಟು ಸಮುದಾಯದವರು ತಮಗೆ ಸಮಾನರು ಎಂದು ಪರಿಗಣಿಸುವುದಿಲ್ಲ. ಭಾರತವನ್ನು ಒಂದೇ ಕುಟುಂಬ ಆಳಬೇಕು ಎಂದು ಬಯಸುವರು. ಆದ್ದರಿಂದಲೇ ಅವರು ಯಾವಾಗಲೂ ಬಂಜಾರ ಸಮುದಾಯದವರ ಬಗ್ಗೆ ತಿರಸ್ಕಾರ ಮನೋಭಾವ ಹೊಂದಿದ್ದಾರೆ’ ಎಂದರು. </p><p>‘ಬಂಜಾರ ಸಮುದಾಯದ ಸಂತರು ನಮ್ಮ ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಯನ್ನು ಪ್ರೇರೇಪಿಸಿದರು. ಬ್ರಿಟಿಷರು ಬಂಜಾರ ಸಮುದಾಯಕ್ಕೆ ಕಿರುಕುಳ ನೀಡಿದ್ದರು. ಅವರು ದೇಶ ಬಿಟ್ಟು ತೊಲಗಿದ ನಂತರ, ಕಾಂಗ್ರೆಸ್ ಸರ್ಕಾರಗಳು ಈ ಪ್ರವೃತ್ತಿಯನ್ನು ಮುಂದುವರಿಸಿತಲ್ಲದೆ, ಸಮುದಾಯವು ಮುಖ್ಯವಾಹಿನಿಗೆ ಬರುವುದಕ್ಕೆ ತಡೆಯೊಡ್ಡಿತು’ ಎಂದು ಆರೋಪಿಸಿದರು.</p>.PM–ಕಿಸಾನ್ ಹಣ ಬಿಡುಗಡೆ; ಮಹಾರಾಷ್ಟ್ರಕ್ಕೆ ₹ 23,000 ಮೊತ್ತದ ಯೋಜನೆ ನೀಡಿದ ಮೋದಿ.<div><div class="bigfact-title"><strong>ವಿವಿಧ ಯೋಜನೆಗಳಿಗೆ ಚಾಲನೆ:</strong></div><div class="bigfact-description">ಪ್ರಧಾನಿ ಮೋದಿ ಅವರು ಕೃಷಿ ಮತ್ತು ಪಶುಸಂಗೋಪನಾ ಕ್ಷೇತ್ರಕ್ಕೆ ಸಂಬಂಧಿಸಿದ ₹23 ಸಾವಿರ ಕೋಟಿ ಮೊತ್ತದ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದರು. ಪೊಹರಾದೇವಿಯಲ್ಲಿ ಬಂಜಾರ ವಿರಾಸತ್ ವಸ್ತುಸಂಗ್ರಹಾಲಯ ನಿರ್ಮಾಣ ಕಾರ್ಯ ಪೂರ್ಣಗೊಂಡದ್ದಕ್ಕೆ ಅವರು ಸಂತಸ ವ್ಯಕ್ತಪಡಿಸಿದರು.</div></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾಶಿಂ, ಮಹಾರಾಷ್ಟ್ರ</strong>: ಕಾಂಗ್ರೆಸ್ ಅನ್ನು ‘ನಗರ ನಕ್ಸಲರ ಗ್ಯಾಂಗ್’ ಮುನ್ನಡೆಸುತ್ತಿದೆ ಎಂದು ಆರೋಪಿಸಿರುವ ಪ್ರಧಾನಿ ನರೇಂದ್ರ ಮೋದಿ, ಆ ಪಕ್ಷದ ‘ಅಪಾಯಕಾರಿ ಸಿದ್ಧಾಂತ’ವನ್ನು ಸೋಲಿಸಲು ಜನರು ಒಟ್ಟಾಗಬೇಕು ಎಂದು ಕರೆ ನೀಡಿದರು.</p>.<p>‘ದೇಶವನ್ನು ವಿಭಜಿಸುವ ಅವರ ಕಾರ್ಯಸೂಚಿಯು ನಾವೆಲ್ಲರೂ ಒಗ್ಗೂಡಿದರೆ ವಿಫಲಗೊಳ್ಳುತ್ತದೆ’ ಎಂದು ಮಹಾರಾಷ್ಟ್ರದ ವಾಶಿಂ ಜಿಲ್ಲೆಯಲ್ಲಿ ಶನಿವಾರ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ ನಂತರ ರ್ಯಾಲಿಯನ್ನುದ್ದೇಶಿಸಿ ಮಾತನಾಡುತ್ತಾ ಹೇಳಿದರು.</p><p>‘ತನ್ನ ಸ್ವಾರ್ಥ ರಾಜಕಾರಣಕ್ಕಾಗಿ ಬಡವರನ್ನು ಲೂಟಿ ಮಾಡಿ ಅವರನ್ನು ಬಡವರಾಗಿಯೇ ಉಳಿಸುವುದು ಮಾತ್ರ ಕಾಂಗ್ರೆಸ್ಗೆ ಗೊತ್ತು. ಸಮಾಜವನ್ನು ಒಡೆಯುವುದಷ್ಟೆ ಆ ಪಕ್ಷದ ಕೆಲಸ. ನಾವು ಎಚ್ಚೆತ್ತುಕೊಂಡು ಒಗ್ಗಟ್ಟಿನಿಂದ ಇರಬೇಕು’ ಎಂದರು.</p><p>‘ಈಚೆಗೆ ದೆಹಲಿಯಲ್ಲಿ ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದ್ದು, ಕಾಂಗ್ರೆಸ್ನ ಮುಖಂಡರೊಬ್ಬರು ಅದರ ಕಿಂಗ್ಪಿನ್ ಆಗಿರುವ ಶಂಕೆ ವ್ಯಕ್ತವಾಗಿದೆ. ಯುವಕರಿಗೆ ಮಾದಕ ವಸ್ತುಗಳನ್ನು ಪೂರೈಸಿ, ಅದರಿಂದ ಬರುವ ಹಣದಿಂದ ಚುನಾವಣೆ ಎದುರಿಸಲು ಕಾಂಗ್ರೆಸ್ ಬಯಸಿದೆ’ ಎಂದು ಆರೋಪಿಸಿದರು.</p><p>‘ಬ್ರಿಟಿಷರಂತೆ ಈ ಕಾಂಗ್ರೆಸ್ನ ಕುಟುಂಬ ಕೂಡಾ ದಲಿತರು, ಹಿಂದುಳಿದವರು ಮತ್ತು ಬುಡಕಟ್ಟು ಸಮುದಾಯದವರು ತಮಗೆ ಸಮಾನರು ಎಂದು ಪರಿಗಣಿಸುವುದಿಲ್ಲ. ಭಾರತವನ್ನು ಒಂದೇ ಕುಟುಂಬ ಆಳಬೇಕು ಎಂದು ಬಯಸುವರು. ಆದ್ದರಿಂದಲೇ ಅವರು ಯಾವಾಗಲೂ ಬಂಜಾರ ಸಮುದಾಯದವರ ಬಗ್ಗೆ ತಿರಸ್ಕಾರ ಮನೋಭಾವ ಹೊಂದಿದ್ದಾರೆ’ ಎಂದರು. </p><p>‘ಬಂಜಾರ ಸಮುದಾಯದ ಸಂತರು ನಮ್ಮ ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಯನ್ನು ಪ್ರೇರೇಪಿಸಿದರು. ಬ್ರಿಟಿಷರು ಬಂಜಾರ ಸಮುದಾಯಕ್ಕೆ ಕಿರುಕುಳ ನೀಡಿದ್ದರು. ಅವರು ದೇಶ ಬಿಟ್ಟು ತೊಲಗಿದ ನಂತರ, ಕಾಂಗ್ರೆಸ್ ಸರ್ಕಾರಗಳು ಈ ಪ್ರವೃತ್ತಿಯನ್ನು ಮುಂದುವರಿಸಿತಲ್ಲದೆ, ಸಮುದಾಯವು ಮುಖ್ಯವಾಹಿನಿಗೆ ಬರುವುದಕ್ಕೆ ತಡೆಯೊಡ್ಡಿತು’ ಎಂದು ಆರೋಪಿಸಿದರು.</p>.PM–ಕಿಸಾನ್ ಹಣ ಬಿಡುಗಡೆ; ಮಹಾರಾಷ್ಟ್ರಕ್ಕೆ ₹ 23,000 ಮೊತ್ತದ ಯೋಜನೆ ನೀಡಿದ ಮೋದಿ.<div><div class="bigfact-title"><strong>ವಿವಿಧ ಯೋಜನೆಗಳಿಗೆ ಚಾಲನೆ:</strong></div><div class="bigfact-description">ಪ್ರಧಾನಿ ಮೋದಿ ಅವರು ಕೃಷಿ ಮತ್ತು ಪಶುಸಂಗೋಪನಾ ಕ್ಷೇತ್ರಕ್ಕೆ ಸಂಬಂಧಿಸಿದ ₹23 ಸಾವಿರ ಕೋಟಿ ಮೊತ್ತದ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದರು. ಪೊಹರಾದೇವಿಯಲ್ಲಿ ಬಂಜಾರ ವಿರಾಸತ್ ವಸ್ತುಸಂಗ್ರಹಾಲಯ ನಿರ್ಮಾಣ ಕಾರ್ಯ ಪೂರ್ಣಗೊಂಡದ್ದಕ್ಕೆ ಅವರು ಸಂತಸ ವ್ಯಕ್ತಪಡಿಸಿದರು.</div></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>