<p><strong>ಠಾಣೆ :</strong> ಕೆರೆಯಲ್ಲಿ ಈಜಲು ಹೋಗಿದ್ದ 12 ವರ್ಷದ ಬಾಲಕನೊಬ್ಬ ಕೆರೆಯ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಮಹಾರಾಷ್ಟದ ಠಾಣೆ ನಗರದಲ್ಲಿ ನಡೆದಿದೆ.</p><p>ಕಾಸರ್ವಾಡವಲಿ ಪ್ರದೇಶದಲ್ಲಿ ಘಟನೆ ನಡೆದಿದೆ. ವಾಘ್ಬಿಲ್ ಪ್ರದೇಶದ ನಿವಾಸಿಯಾದ ಪಿಯೂಷ್ ಗಜಾನನ್ ಸೋನಾವಾನೆ (12) ಈಜಲೆಂದು ಕೆರೆಗೆ ಇಳಿದಿದ್ದಾನೆ. ಆಗ ಇದ್ದಕ್ಕಿಂದಂತೆ ನೀರಿನಲ್ಲಿ ಮುಳುಗಿದ್ದಾನೆ ಎಂದು ನಾಗರಿಕ ವಿಪತ್ತು ನಿರ್ವಹಣಾಧಿಕಾರಿ ಯಾಸಿನ್ ತಡ್ವಿ ತಿಳಿಸಿದ್ದಾರೆ. </p><p>ವಿಪತ್ತು ನಿರ್ವಹಣಾ ಪಡೆ ಹಾಗೂ ಅಗ್ನಿಶಾಮಕ ದಳದ ಜಂಟಿ ಕಾರ್ಯಾಚರಣೆಯಲ್ಲಿ ನೀರಿನಲ್ಲಿ ಮುಳುಗಿದ್ದ ಬಾಲಕನ್ನು ಹೊರ ತೆಗೆದು ಆಸ್ಪತ್ರೆಗೆ ದಾಖಲಿಸಲಾಯಿತು. ಬಾಲಕ ಸಾವನ್ನಪ್ಪಿರುವುದಾಗಿ ವೈದ್ಯರು ಧೃಢಪಡಿಸಿದ್ದಾರೆ. ಅಸಹಜ ಸಾವು ಎಂದು ಪ್ರಕರಣವನ್ನು ದಾಖಲಿಸಿಕೊಂಡಿದ್ದು ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. </p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಠಾಣೆ :</strong> ಕೆರೆಯಲ್ಲಿ ಈಜಲು ಹೋಗಿದ್ದ 12 ವರ್ಷದ ಬಾಲಕನೊಬ್ಬ ಕೆರೆಯ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಮಹಾರಾಷ್ಟದ ಠಾಣೆ ನಗರದಲ್ಲಿ ನಡೆದಿದೆ.</p><p>ಕಾಸರ್ವಾಡವಲಿ ಪ್ರದೇಶದಲ್ಲಿ ಘಟನೆ ನಡೆದಿದೆ. ವಾಘ್ಬಿಲ್ ಪ್ರದೇಶದ ನಿವಾಸಿಯಾದ ಪಿಯೂಷ್ ಗಜಾನನ್ ಸೋನಾವಾನೆ (12) ಈಜಲೆಂದು ಕೆರೆಗೆ ಇಳಿದಿದ್ದಾನೆ. ಆಗ ಇದ್ದಕ್ಕಿಂದಂತೆ ನೀರಿನಲ್ಲಿ ಮುಳುಗಿದ್ದಾನೆ ಎಂದು ನಾಗರಿಕ ವಿಪತ್ತು ನಿರ್ವಹಣಾಧಿಕಾರಿ ಯಾಸಿನ್ ತಡ್ವಿ ತಿಳಿಸಿದ್ದಾರೆ. </p><p>ವಿಪತ್ತು ನಿರ್ವಹಣಾ ಪಡೆ ಹಾಗೂ ಅಗ್ನಿಶಾಮಕ ದಳದ ಜಂಟಿ ಕಾರ್ಯಾಚರಣೆಯಲ್ಲಿ ನೀರಿನಲ್ಲಿ ಮುಳುಗಿದ್ದ ಬಾಲಕನ್ನು ಹೊರ ತೆಗೆದು ಆಸ್ಪತ್ರೆಗೆ ದಾಖಲಿಸಲಾಯಿತು. ಬಾಲಕ ಸಾವನ್ನಪ್ಪಿರುವುದಾಗಿ ವೈದ್ಯರು ಧೃಢಪಡಿಸಿದ್ದಾರೆ. ಅಸಹಜ ಸಾವು ಎಂದು ಪ್ರಕರಣವನ್ನು ದಾಖಲಿಸಿಕೊಂಡಿದ್ದು ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. </p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>