<p><strong>ಮುಂಬೈ</strong>: ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರು ರೈತರಿಗಾಗಿ ಸಾಲ ಮನ್ನಾ ಯೋಜನೆಯನ್ನು ಘೋಷಿಸಿದ್ದು, 2025ರ ಸೆಪ್ಟೆಂಬರ್ 30ರವರೆಗೆ ಪಡೆದ ₹2 ಲಕ್ಷಗಳವರೆಗಿನ ಬೆಳೆ ಸಾಲವನ್ನು ಮನ್ನಾ ಮಾಡಲಾಗುವುದು ಎಂದು ತಾವು ಮಂಡಿಸಿದ ಬಜೆಟ್ ಭಾಷಣದಲ್ಲಿ ಹೇಳಿದ್ದಾರೆ.</p><p>ರೈತರಿಗಾಗಿ ಪುಣ್ಯಶ್ಲೋಕ್ ಅಹಿಲ್ಯಾದೇವಿ ಹೊಲ್ಕರ್ ಶಟ್ಕಾರಿ ಕರ್ಜ್ಮಾಫಿ ಯೋಜನೆ ಘೋಷಿಸಿರುವ ಫಡಣವೀಸ್, ಸಾಲವನ್ನು ನಿಯಮಿತವಾಗಿ ಮರುಪಾವತಿ ಮಾಡುವ ರೈತರಿಗೆ ₹50,000 ಸಹಾಯಧನ ಸಿಗಲಿದೆ ಎಂದೂ ಹೇಳಿದ್ದಾರೆ. </p><p>ಮಹಿಳೆಯರಿಗೆಂದು ಇರುವ ‘ಮುಖ್ಯಮಂತ್ರಿ ಮಾಝಿ ಲಾಡ್ಕಿ ಬಹಿನ್’ ಯೋಜನೆಯಡಿಯಲ್ಲಿ ಧನ ಸಹಾಯವನ್ನು ಮುಂದುವರೆಸಲಾಗುವುದು ಎಂದು ಫಡಣವೀಸ್ ತಿಳಿಸಿದರು. ಸಾವಿರ ಜನಸಂಖ್ಯೆಯನ್ನು ಹೊಂದಿರುವ ಮಹಾರಾಷ್ರ್ಟದ ಹಳ್ಳಿಗಳಿಗೆ ಕಾಂಕ್ರೀಟ್ ರಸ್ತೆಗಳನ್ನು ನಿರ್ಮಾಣ ಮಾಡಲಾಗುವುದು ಎಂದೂ ಹೇಳಿದ್ದಾರೆ.</p><p>ವಿಮಾನ ಅಪಘಾತದಲ್ಲಿ ನಿಧನರಾದ ಎನ್ಸಿಪಿ ನಾಯಕ ಅಜಿತ್ ಪವಾರ್ ಅವರನ್ನು ಫಡಣವೀಸ್ ಸ್ಮರಿಸಿದರು. ಅವರ ಸ್ಮಾರಕನ್ನು ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದರು.</p><p>ಬಜೆಟ್ ಮಂಡಿಸಲು ಫಡಣವೀಸ್ ಎದ್ದು ನಿಂತಾಗ ವಿಧಾನಸಭೆಯಲ್ಲಿ ಭಾವನಾತ್ಮಕ ದೃಶ್ಯಗಳು ಕಂಡುಬಂದವು. ಸದನದ ಸದಸ್ಯರು ‘ಅಜಿತ್ ದಾದಾ ಅಮರ್ ರಹೇ’ ಎಂಬ ಘೋಷಣೆಯನ್ನು ಕೂಗುವ ಮೂಲಕ ದಿವಂಗತ ನಾಯಕನಿಗೆ ಗೌರವ ಸಲ್ಲಿಸಿದರು.</p><p>ಪವಾರ್ ಅವರ ನಿಧನದ ನಂತರ, ಫಡಣವೀಸ್ ಅವರು ಹಣಕಾಸು ಖಾತೆಯನ್ನು ತಾವೇ ಉಳಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರು ರೈತರಿಗಾಗಿ ಸಾಲ ಮನ್ನಾ ಯೋಜನೆಯನ್ನು ಘೋಷಿಸಿದ್ದು, 2025ರ ಸೆಪ್ಟೆಂಬರ್ 30ರವರೆಗೆ ಪಡೆದ ₹2 ಲಕ್ಷಗಳವರೆಗಿನ ಬೆಳೆ ಸಾಲವನ್ನು ಮನ್ನಾ ಮಾಡಲಾಗುವುದು ಎಂದು ತಾವು ಮಂಡಿಸಿದ ಬಜೆಟ್ ಭಾಷಣದಲ್ಲಿ ಹೇಳಿದ್ದಾರೆ.</p><p>ರೈತರಿಗಾಗಿ ಪುಣ್ಯಶ್ಲೋಕ್ ಅಹಿಲ್ಯಾದೇವಿ ಹೊಲ್ಕರ್ ಶಟ್ಕಾರಿ ಕರ್ಜ್ಮಾಫಿ ಯೋಜನೆ ಘೋಷಿಸಿರುವ ಫಡಣವೀಸ್, ಸಾಲವನ್ನು ನಿಯಮಿತವಾಗಿ ಮರುಪಾವತಿ ಮಾಡುವ ರೈತರಿಗೆ ₹50,000 ಸಹಾಯಧನ ಸಿಗಲಿದೆ ಎಂದೂ ಹೇಳಿದ್ದಾರೆ. </p><p>ಮಹಿಳೆಯರಿಗೆಂದು ಇರುವ ‘ಮುಖ್ಯಮಂತ್ರಿ ಮಾಝಿ ಲಾಡ್ಕಿ ಬಹಿನ್’ ಯೋಜನೆಯಡಿಯಲ್ಲಿ ಧನ ಸಹಾಯವನ್ನು ಮುಂದುವರೆಸಲಾಗುವುದು ಎಂದು ಫಡಣವೀಸ್ ತಿಳಿಸಿದರು. ಸಾವಿರ ಜನಸಂಖ್ಯೆಯನ್ನು ಹೊಂದಿರುವ ಮಹಾರಾಷ್ರ್ಟದ ಹಳ್ಳಿಗಳಿಗೆ ಕಾಂಕ್ರೀಟ್ ರಸ್ತೆಗಳನ್ನು ನಿರ್ಮಾಣ ಮಾಡಲಾಗುವುದು ಎಂದೂ ಹೇಳಿದ್ದಾರೆ.</p><p>ವಿಮಾನ ಅಪಘಾತದಲ್ಲಿ ನಿಧನರಾದ ಎನ್ಸಿಪಿ ನಾಯಕ ಅಜಿತ್ ಪವಾರ್ ಅವರನ್ನು ಫಡಣವೀಸ್ ಸ್ಮರಿಸಿದರು. ಅವರ ಸ್ಮಾರಕನ್ನು ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದರು.</p><p>ಬಜೆಟ್ ಮಂಡಿಸಲು ಫಡಣವೀಸ್ ಎದ್ದು ನಿಂತಾಗ ವಿಧಾನಸಭೆಯಲ್ಲಿ ಭಾವನಾತ್ಮಕ ದೃಶ್ಯಗಳು ಕಂಡುಬಂದವು. ಸದನದ ಸದಸ್ಯರು ‘ಅಜಿತ್ ದಾದಾ ಅಮರ್ ರಹೇ’ ಎಂಬ ಘೋಷಣೆಯನ್ನು ಕೂಗುವ ಮೂಲಕ ದಿವಂಗತ ನಾಯಕನಿಗೆ ಗೌರವ ಸಲ್ಲಿಸಿದರು.</p><p>ಪವಾರ್ ಅವರ ನಿಧನದ ನಂತರ, ಫಡಣವೀಸ್ ಅವರು ಹಣಕಾಸು ಖಾತೆಯನ್ನು ತಾವೇ ಉಳಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>