<p><strong>ಮುಂಬೈ</strong>: ಮಹಾರಾಷ್ಟ್ರದಲ್ಲಿ ಅರ್ಹ ಮರಾಠರಿಗೆ ಕುಣಬಿ ಜಾತಿ ಪ್ರಮಾಣಪತ್ರ ನೀಡಲು ಅನುಸರಿಸಬೇಕಾದ ಪ್ರಮಾಣಿತ ಕಾರ್ಯಾಚರಣೆ ವಿಧಾನವನ್ನು (ಎಸ್ಒಪಿ) ಅಂತಿಮಗೊಳಿಸಲು ರಚಿಸಲಾದ ನ್ಯಾಯಮೂರ್ತಿ ಶಿಂದೆ ಸಮಿತಿಯು ಸಲ್ಲಿಸಿರುವ ಎರಡು ಮತ್ತು ಮೂರನೇ ವರದಿಗಳನ್ನು ಮಹಾರಾಷ್ಟ್ರ ಸಚಿವ ಸಂಪುಟ ಸೋಮವಾರ ಅಂಗೀಕರಿಸಿದೆ.</p>.<p>ಮಹಾರಾಷ್ಟ್ರದಲ್ಲಿ ಕುಣಬಿ ಸಮುದಾಯವನ್ನು ಇತರೆ ಹಿಂದುಳಿದ ವರ್ಗಗಳ (ಒಬಿಸಿ) ವಿಭಾಗದ ಅಡಿಯಲ್ಲಿ ವರ್ಗೀಕರಿಸಲಾಗಿದೆ. ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ಮುಖ್ಯಮಂತ್ರಿ ಏಕನಾಥ ಶಿಂದೆ ನೇತೃತ್ವದ ಸರ್ಕಾರ ಸರಣಿ ಸಂಪುಟ ಸಭೆಗಳನ್ನು ನಡೆಸುತ್ತಿದೆ. ಸೋಮವಾರ ನಡೆದ ಸಭೆಯು 38 ಪ್ರಸ್ತಾವಗಳಿಗೆ ಅನುಮೋದನೆ ನೀಡಿದೆ.</p>.<p>ನಿವೃತ್ತ ನ್ಯಾಯಮೂರ್ತಿ ಸಂದೀಪ್ ಶಿಂದೆ ಸಮಿತಿಯು ತನ್ನ ಎರಡನೇ ವರದಿಯನ್ನು ಕಳೆದ ವರ್ಷದ ಡಿಸೆಂಬರ್ನಲ್ಲಿ ಸಲ್ಲಿಸಿತ್ತು. ಸರ್ಕಾರವು ಅದನ್ನು ಅಧಿಕೃತವಾಗಿ ಅಂಗೀಕರಿಸಿರಲಿಲ್ಲ.</p>.<p>ವರದಿಯನ್ನು ಈಗ ಅಂಗಿಕರಿಸಿರುವುದು, ಒಬಿಸಿ ಪ್ರವರ್ಗದಲ್ಲಿ ಮೀಸಲಾತಿ ನೀಡಬೇಕು ಎಂಬ ಆಗ್ರಹದೊಂದಿಗೆ ಹೋರಾಟ ನಡೆಸುತ್ತಿರುವ ಮರಾಠ ಸಮುದಾಯವನ್ನು ಸಮಾಧಾನಪಡಿಸಲು ಸರ್ಕಾರ ಇಟ್ಟಿರುವ ಮಹತ್ವದ ಹೆಜ್ಜೆ ಎಂದು ವಿಶ್ಲೇಷಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಮಹಾರಾಷ್ಟ್ರದಲ್ಲಿ ಅರ್ಹ ಮರಾಠರಿಗೆ ಕುಣಬಿ ಜಾತಿ ಪ್ರಮಾಣಪತ್ರ ನೀಡಲು ಅನುಸರಿಸಬೇಕಾದ ಪ್ರಮಾಣಿತ ಕಾರ್ಯಾಚರಣೆ ವಿಧಾನವನ್ನು (ಎಸ್ಒಪಿ) ಅಂತಿಮಗೊಳಿಸಲು ರಚಿಸಲಾದ ನ್ಯಾಯಮೂರ್ತಿ ಶಿಂದೆ ಸಮಿತಿಯು ಸಲ್ಲಿಸಿರುವ ಎರಡು ಮತ್ತು ಮೂರನೇ ವರದಿಗಳನ್ನು ಮಹಾರಾಷ್ಟ್ರ ಸಚಿವ ಸಂಪುಟ ಸೋಮವಾರ ಅಂಗೀಕರಿಸಿದೆ.</p>.<p>ಮಹಾರಾಷ್ಟ್ರದಲ್ಲಿ ಕುಣಬಿ ಸಮುದಾಯವನ್ನು ಇತರೆ ಹಿಂದುಳಿದ ವರ್ಗಗಳ (ಒಬಿಸಿ) ವಿಭಾಗದ ಅಡಿಯಲ್ಲಿ ವರ್ಗೀಕರಿಸಲಾಗಿದೆ. ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ಮುಖ್ಯಮಂತ್ರಿ ಏಕನಾಥ ಶಿಂದೆ ನೇತೃತ್ವದ ಸರ್ಕಾರ ಸರಣಿ ಸಂಪುಟ ಸಭೆಗಳನ್ನು ನಡೆಸುತ್ತಿದೆ. ಸೋಮವಾರ ನಡೆದ ಸಭೆಯು 38 ಪ್ರಸ್ತಾವಗಳಿಗೆ ಅನುಮೋದನೆ ನೀಡಿದೆ.</p>.<p>ನಿವೃತ್ತ ನ್ಯಾಯಮೂರ್ತಿ ಸಂದೀಪ್ ಶಿಂದೆ ಸಮಿತಿಯು ತನ್ನ ಎರಡನೇ ವರದಿಯನ್ನು ಕಳೆದ ವರ್ಷದ ಡಿಸೆಂಬರ್ನಲ್ಲಿ ಸಲ್ಲಿಸಿತ್ತು. ಸರ್ಕಾರವು ಅದನ್ನು ಅಧಿಕೃತವಾಗಿ ಅಂಗೀಕರಿಸಿರಲಿಲ್ಲ.</p>.<p>ವರದಿಯನ್ನು ಈಗ ಅಂಗಿಕರಿಸಿರುವುದು, ಒಬಿಸಿ ಪ್ರವರ್ಗದಲ್ಲಿ ಮೀಸಲಾತಿ ನೀಡಬೇಕು ಎಂಬ ಆಗ್ರಹದೊಂದಿಗೆ ಹೋರಾಟ ನಡೆಸುತ್ತಿರುವ ಮರಾಠ ಸಮುದಾಯವನ್ನು ಸಮಾಧಾನಪಡಿಸಲು ಸರ್ಕಾರ ಇಟ್ಟಿರುವ ಮಹತ್ವದ ಹೆಜ್ಜೆ ಎಂದು ವಿಶ್ಲೇಷಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>