<p><strong>ಮುಂಬೈ:</strong> ಬಿಜೆಪಿ ನೇತೃತ್ವದ ಮಹಾರಾಷ್ಟ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ನಾಳೆ (ಡಿ.15) ನಡೆಯಲಿದೆ. ಸಚಿವರ ಪ್ರಮಾಣವಚನ ಸಮಾರಂಭ ನಾಗ್ಪುರದಲ್ಲಿ ನಡೆಯಲಿದೆ ಎಂದು ಸರ್ಕಾರದ ಅಧಿಕೃತ ಮೂಲಗಳು ತಿಳಿಸಿವೆ.</p><p>ಸುಮಾರು 40 ಸಚಿವರು ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಬಿಜೆಪಿಯ ಹಿರಿಯ ಮುಖಂಡರೊಬ್ಬರು ತಿಳಿಸಿದ್ದಾರೆ. </p>.ಮಹಾರಾಷ್ಟ್ರ ಚುನಾವಣೆ | 1,440 EVM – VVPAT ಫಲಿತಾಂಶ ಹೋಲಿಕೆ: ಅಧಿಕಾರಿಗಳು.ಮಹಾರಾಷ್ಟ್ರ: ಮತಪತ್ರಗಳನ್ನು ಬಳಸುವಂತೆ ಗ್ರಾಮಸಭೆಯಲ್ಲಿ ನಿರ್ಣಯ.<p>ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿಯನ್ನು ಒಳಗೊಂಡಂತೆ ಗರಿಷ್ಠ 43 ಸಚಿವರ ಸಂಪುಟ ರಚನೆ ಮಾಡಲು ಅವಕಾಶವಿದೆ. ಬಿಜೆಪಿ 20-21, ಶಿವಸೇನೆ (ಶಿಂಧೆ) 11-12, ಎನ್ಸಿಪಿ (ಅಜಿತ್) 9-10 ಸಚಿವ ಸ್ಥಾನಗಳು ದೊರೆಯುವ ಸಾಧ್ಯತೆ ಇದೆ ಎಂದು ಬಿಜೆಪಿಯ ಅಧಿಕೃತ ಮೂಲಗಳು ತಿಳಿಸಿವೆ.</p><p>ಕಳೆದ ಡಿಸೆಂಬರ್ 5ರಂದು ಮುಂಬೈನಲ್ಲಿ ದೇವೇಂದ್ರ ಫಡಣವೀಸ್ ಮುಖ್ಯಮಂತ್ರಿಯಾಗಿ, ಶಿವಸೇನೆ ನಾಯಕ ಏಕನಾಥ್ ಶಿಂಧೆ ಮತ್ತು ಎನ್ಸಿಪಿ ಮುಖ್ಯಸ್ಥ ಅಜಿತ್ ಪವಾರ್ ಉಪಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದ್ದರು.</p><p>ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಮಹಾಯುತಿ (ಬಿಜೆಪಿ,ಶಿವಸೇನೆ,ಎನ್ಸಿಪಿ) ಮೈತ್ರಿಕೂಟ 288 ಸ್ಥಾನಗಳ ಪೈಕಿ 230ರಲ್ಲಿ ಗೆದ್ದು ಅಧಿಕಾರಕ್ಕೆ ಬಂದಿತು. ಬಿಜೆಪಿ 132, ಶಿವಸೇನೆ (ಶಿಂಧೆ) 57 ಮತ್ತು ಎನ್ಸಿಪಿ(ಅಜಿತ್) 41 ಸ್ಥಾನಗಳನ್ನು ಪಡೆದಿವೆ.</p><p>ಡಿಸೆಂಬರ್ 16ರಂದು ಮಹಾರಾಷ್ಟ್ರದ ಎರಡನೇ ರಾಜಧಾನಿ ನಾಗ್ಪುರದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಈ ಅಧಿವೇಶನ ಒಂದು ವಾರ ನಡೆಯಲಿದೆ.</p>.ದಲಿತರ ಬಂಧನ ನಿಲ್ಲಿಸಿ: ಮಹಾರಾಷ್ಟ್ರ ಸಿಎಂ ಫಡಣವೀಸ್ಗೆ ಪ್ರಕಾಶ್ ಅಂಬೇಡ್ಕರ್ ಮನವಿ.ಮಹಾರಾಷ್ಟ್ರ ವಿಧಾನಸಭೆ: ವಿಶ್ವಾಸಮತ ಸಾಬೀತು ಮಾಡಿದ ಸಿಎಂ ಫಡಣವೀಸ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಬಿಜೆಪಿ ನೇತೃತ್ವದ ಮಹಾರಾಷ್ಟ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ನಾಳೆ (ಡಿ.15) ನಡೆಯಲಿದೆ. ಸಚಿವರ ಪ್ರಮಾಣವಚನ ಸಮಾರಂಭ ನಾಗ್ಪುರದಲ್ಲಿ ನಡೆಯಲಿದೆ ಎಂದು ಸರ್ಕಾರದ ಅಧಿಕೃತ ಮೂಲಗಳು ತಿಳಿಸಿವೆ.</p><p>ಸುಮಾರು 40 ಸಚಿವರು ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಬಿಜೆಪಿಯ ಹಿರಿಯ ಮುಖಂಡರೊಬ್ಬರು ತಿಳಿಸಿದ್ದಾರೆ. </p>.ಮಹಾರಾಷ್ಟ್ರ ಚುನಾವಣೆ | 1,440 EVM – VVPAT ಫಲಿತಾಂಶ ಹೋಲಿಕೆ: ಅಧಿಕಾರಿಗಳು.ಮಹಾರಾಷ್ಟ್ರ: ಮತಪತ್ರಗಳನ್ನು ಬಳಸುವಂತೆ ಗ್ರಾಮಸಭೆಯಲ್ಲಿ ನಿರ್ಣಯ.<p>ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿಯನ್ನು ಒಳಗೊಂಡಂತೆ ಗರಿಷ್ಠ 43 ಸಚಿವರ ಸಂಪುಟ ರಚನೆ ಮಾಡಲು ಅವಕಾಶವಿದೆ. ಬಿಜೆಪಿ 20-21, ಶಿವಸೇನೆ (ಶಿಂಧೆ) 11-12, ಎನ್ಸಿಪಿ (ಅಜಿತ್) 9-10 ಸಚಿವ ಸ್ಥಾನಗಳು ದೊರೆಯುವ ಸಾಧ್ಯತೆ ಇದೆ ಎಂದು ಬಿಜೆಪಿಯ ಅಧಿಕೃತ ಮೂಲಗಳು ತಿಳಿಸಿವೆ.</p><p>ಕಳೆದ ಡಿಸೆಂಬರ್ 5ರಂದು ಮುಂಬೈನಲ್ಲಿ ದೇವೇಂದ್ರ ಫಡಣವೀಸ್ ಮುಖ್ಯಮಂತ್ರಿಯಾಗಿ, ಶಿವಸೇನೆ ನಾಯಕ ಏಕನಾಥ್ ಶಿಂಧೆ ಮತ್ತು ಎನ್ಸಿಪಿ ಮುಖ್ಯಸ್ಥ ಅಜಿತ್ ಪವಾರ್ ಉಪಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದ್ದರು.</p><p>ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಮಹಾಯುತಿ (ಬಿಜೆಪಿ,ಶಿವಸೇನೆ,ಎನ್ಸಿಪಿ) ಮೈತ್ರಿಕೂಟ 288 ಸ್ಥಾನಗಳ ಪೈಕಿ 230ರಲ್ಲಿ ಗೆದ್ದು ಅಧಿಕಾರಕ್ಕೆ ಬಂದಿತು. ಬಿಜೆಪಿ 132, ಶಿವಸೇನೆ (ಶಿಂಧೆ) 57 ಮತ್ತು ಎನ್ಸಿಪಿ(ಅಜಿತ್) 41 ಸ್ಥಾನಗಳನ್ನು ಪಡೆದಿವೆ.</p><p>ಡಿಸೆಂಬರ್ 16ರಂದು ಮಹಾರಾಷ್ಟ್ರದ ಎರಡನೇ ರಾಜಧಾನಿ ನಾಗ್ಪುರದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಈ ಅಧಿವೇಶನ ಒಂದು ವಾರ ನಡೆಯಲಿದೆ.</p>.ದಲಿತರ ಬಂಧನ ನಿಲ್ಲಿಸಿ: ಮಹಾರಾಷ್ಟ್ರ ಸಿಎಂ ಫಡಣವೀಸ್ಗೆ ಪ್ರಕಾಶ್ ಅಂಬೇಡ್ಕರ್ ಮನವಿ.ಮಹಾರಾಷ್ಟ್ರ ವಿಧಾನಸಭೆ: ವಿಶ್ವಾಸಮತ ಸಾಬೀತು ಮಾಡಿದ ಸಿಎಂ ಫಡಣವೀಸ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>