<p><strong>ಮುಂಬೈ:</strong> ಅಪಘಾತಕ್ಕೊಳಗಾದವರು ವಿಮಾ ಸೌಲಭ್ಯವಿರುವ ಮತ್ತು ತುರ್ತು ಚಿಕಿತ್ಸಾ ಆಸ್ಪತ್ರೆಗಳಲ್ಲಿ ₹1 ಲಕ್ಷದವರೆಗೆ ನಗದು ರಹಿತ ಚಿಕಿತ್ಸೆ ಪಡೆಯಬಹುದು ಎಂದು ಮಹಾರಾಷ್ಟ್ರ ಸರ್ಕಾರ ಶುಕ್ರವಾರ ಹೇಳಿದೆ.</p><p>ಆರೋಗ್ಯ ಸಚಿವ ಪ್ರಕಾಶ್ ಅಬಿಟ್ಕರ್ ಮಾತನಾಡಿ, ಅಪಘಾತಕ್ಕೊಳಗಾದವರಿಗೆ ಸರಿಯಾದ ಸಮಯಕ್ಕೆ ಚಿಕಿತ್ಸೆ ದೊರೆಯುವಂತೆ ನೋಡಿಕೊಳ್ಳಿ ಮತ್ತು ₹1 ಲಕ್ಷದವರೆಗೆ ನಗದು ರಹಿತ ಚಿಕಿತ್ಸೆ ಪಡೆದ ಬಗ್ಗೆ ಖಚಿತಪಡಿಸಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು. ಜತೆಗೆ ಈ ಆರೋಗ್ಯ ಯೋಜನೆಯ ದುರುಪಯೋಗಪಡಿಸಿಕೊಂಡವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.</p><p>ಈ ಯೋಜನೆಯಡಿ ವಿಮಾ ಸೌಲಭ್ಯವಿರುವ ಆಸ್ಪತ್ರೆಗಳ ಸಂಖ್ಯೆಯನ್ನು 1,792 ರಿಂದ 4,180ಕ್ಕೆ ಹೆಚ್ಚಿಸಲಾಗುವುದು. ಈ ಪ್ರಕ್ರಿಯೆಯನ್ನು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಸಮಿತಿಗಳ ಮೂಲಕ ಪಾರದರ್ಶಕವಾಗಿ ಕೈಗೊಳ್ಳಲಾಗುವುದು.</p><p>ಸಮಿತಿಯು ಈ ಯೋಜನೆಯಡಿ ನೀಡಬಹುದಾದ ಹೆಚ್ಚಿನ ಚಿಕಿತ್ಸೆ, ಅಂಗಾಂಗ ಕಸಿಯಂತಹ ದುಬಾರಿ ಚಿಕಿತ್ಸೆ, ಪ್ರಾಥಮಿಕ ಚಿಕಿತ್ಸೆಗಳ ದರ ಪಟ್ಟಿ ಸೇರಿ ಇತ್ಯಾದಿಗಳ ವರದಿ ನೀಡಲಿದೆ. ಒಂದು ತಿಂಗಳೊಳಗೆ ವರದಿ ನೀಡುವಂತೆ ಸಮಿತಿಗೆ ನಿರ್ದೇಶಿಸಲಾಗಿದೆ ಎಂದು ಸಚಿವರು ತಿಳಿಸಿದರು.</p><p>ಸಾರ್ವಜನಿಕರಿಗೆ ಆಸ್ಪತ್ರೆಯಲ್ಲಿ ದೊರೆಯವ ವಿವಿಧ ಯೋಜನೆಗಳು, ಹಾಸಿಗೆ ಲಭ್ಯತೆ, ದೂರು ದಾಖಲಿಗೆ ಪ್ರತ್ಯೇಕ ಮೊಬೈಲ್ ಆ್ಯಪ್ ಅಭಿವೃದ್ಧಿಪಡಿಸಲಾಗುವುದು. ವಿಮಾ ಸೌಲಭ್ಯ ಹೊಂದಿರುವ ಎಲ್ಲಾ ಆಸ್ಪತ್ರೆಗಳು ಪ್ರತಿ ತಿಂಗಳು ಆರೋಗ್ಯ ಶಿಬಿರಗಳನ್ನು ಹಮ್ಮಿಕೊಳ್ಳಬೇಕು, ಜತೆಗೆ ಕನಿಷ್ಠ ಐವರಿಗೆ ಈ ಯೋಜನೆಯಡಿ ಚಿಕಿತ್ಸೆ ನೀಡಬೇಕು ಎಂದು ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಅಪಘಾತಕ್ಕೊಳಗಾದವರು ವಿಮಾ ಸೌಲಭ್ಯವಿರುವ ಮತ್ತು ತುರ್ತು ಚಿಕಿತ್ಸಾ ಆಸ್ಪತ್ರೆಗಳಲ್ಲಿ ₹1 ಲಕ್ಷದವರೆಗೆ ನಗದು ರಹಿತ ಚಿಕಿತ್ಸೆ ಪಡೆಯಬಹುದು ಎಂದು ಮಹಾರಾಷ್ಟ್ರ ಸರ್ಕಾರ ಶುಕ್ರವಾರ ಹೇಳಿದೆ.</p><p>ಆರೋಗ್ಯ ಸಚಿವ ಪ್ರಕಾಶ್ ಅಬಿಟ್ಕರ್ ಮಾತನಾಡಿ, ಅಪಘಾತಕ್ಕೊಳಗಾದವರಿಗೆ ಸರಿಯಾದ ಸಮಯಕ್ಕೆ ಚಿಕಿತ್ಸೆ ದೊರೆಯುವಂತೆ ನೋಡಿಕೊಳ್ಳಿ ಮತ್ತು ₹1 ಲಕ್ಷದವರೆಗೆ ನಗದು ರಹಿತ ಚಿಕಿತ್ಸೆ ಪಡೆದ ಬಗ್ಗೆ ಖಚಿತಪಡಿಸಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು. ಜತೆಗೆ ಈ ಆರೋಗ್ಯ ಯೋಜನೆಯ ದುರುಪಯೋಗಪಡಿಸಿಕೊಂಡವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.</p><p>ಈ ಯೋಜನೆಯಡಿ ವಿಮಾ ಸೌಲಭ್ಯವಿರುವ ಆಸ್ಪತ್ರೆಗಳ ಸಂಖ್ಯೆಯನ್ನು 1,792 ರಿಂದ 4,180ಕ್ಕೆ ಹೆಚ್ಚಿಸಲಾಗುವುದು. ಈ ಪ್ರಕ್ರಿಯೆಯನ್ನು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಸಮಿತಿಗಳ ಮೂಲಕ ಪಾರದರ್ಶಕವಾಗಿ ಕೈಗೊಳ್ಳಲಾಗುವುದು.</p><p>ಸಮಿತಿಯು ಈ ಯೋಜನೆಯಡಿ ನೀಡಬಹುದಾದ ಹೆಚ್ಚಿನ ಚಿಕಿತ್ಸೆ, ಅಂಗಾಂಗ ಕಸಿಯಂತಹ ದುಬಾರಿ ಚಿಕಿತ್ಸೆ, ಪ್ರಾಥಮಿಕ ಚಿಕಿತ್ಸೆಗಳ ದರ ಪಟ್ಟಿ ಸೇರಿ ಇತ್ಯಾದಿಗಳ ವರದಿ ನೀಡಲಿದೆ. ಒಂದು ತಿಂಗಳೊಳಗೆ ವರದಿ ನೀಡುವಂತೆ ಸಮಿತಿಗೆ ನಿರ್ದೇಶಿಸಲಾಗಿದೆ ಎಂದು ಸಚಿವರು ತಿಳಿಸಿದರು.</p><p>ಸಾರ್ವಜನಿಕರಿಗೆ ಆಸ್ಪತ್ರೆಯಲ್ಲಿ ದೊರೆಯವ ವಿವಿಧ ಯೋಜನೆಗಳು, ಹಾಸಿಗೆ ಲಭ್ಯತೆ, ದೂರು ದಾಖಲಿಗೆ ಪ್ರತ್ಯೇಕ ಮೊಬೈಲ್ ಆ್ಯಪ್ ಅಭಿವೃದ್ಧಿಪಡಿಸಲಾಗುವುದು. ವಿಮಾ ಸೌಲಭ್ಯ ಹೊಂದಿರುವ ಎಲ್ಲಾ ಆಸ್ಪತ್ರೆಗಳು ಪ್ರತಿ ತಿಂಗಳು ಆರೋಗ್ಯ ಶಿಬಿರಗಳನ್ನು ಹಮ್ಮಿಕೊಳ್ಳಬೇಕು, ಜತೆಗೆ ಕನಿಷ್ಠ ಐವರಿಗೆ ಈ ಯೋಜನೆಯಡಿ ಚಿಕಿತ್ಸೆ ನೀಡಬೇಕು ಎಂದು ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>