<p><strong>ಮುಂಬೈ</strong>: ಮಹಾರಾಷ್ಟ್ರದಲ್ಲಿ ಇದೇ 15ರಂದು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನವೇ ಅವಿರೋಧ ಆಯ್ಕೆಯಲ್ಲಿ ಬಿಜೆಪಿ ಮತ್ತು ಅದರ ನೇತೃತ್ವದ ಮಹಾಯುತಿ ಮೈತ್ರಿಕೂಟದ ಮಿತ್ರ ಪಕ್ಷಗಳ ಅಭ್ಯರ್ಥಿಗಳು ಮೇಲುಗೈ ಸಾಧಿಸಿದ್ದಾರೆ.</p><p>ರಾಜ್ಯದಾದ್ಯಂತ ಬಿಜೆಪಿ ಮತ್ತು ಅದರ ಮಹಾಯುತಿ ಮಿತ್ರಪಕ್ಷಗಳು 68 ಸ್ಥಾನಗಳನ್ನು ಅವಿರೋಧವಾಗಿ ಗೆದ್ದಿವೆ. ಈ ಆಯ್ಕೆಯನ್ನು ಖಂಡಿಸಿರುವ ವಿರೋಧ ಪಕ್ಷಗಳು, ಆಡಳಿತ ಪಕ್ಷವು ಬೆದರಿಕೆ ಮತ್ತು ಹಣವನ್ನು ಬಳಸಿಕೊಂಡು ಅಭ್ಯರ್ಥಿಗಳನ್ನು ಕಣದಿಂದ ಹಿಂದೆ ಸರಿಯುವಂತೆ ಮಾಡಿದೆ ಎಂದು ಆರೋಪಿಸಿವೆ.</p><p>ರಾಜ್ಯದಾದ್ಯಂತ, ಬಿಜೆಪಿ ಮತ್ತು ಮಹಾಯುತಿಯಿಂದ 68 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪಕ್ಷದ ಬೆಳೆಯುತ್ತಿರುವ ಬಲವನ್ನು ಪ್ರತಿಬಿಂಬಿಸುತ್ತದೆ ಎಂದು ಬಿಜೆಪಿ ನಾಯಕ ಕೇಶವ್ ಉಪಾಧ್ಯೆ ಹೇಳಿದ್ದಾರೆ.</p><p>ಈ ಪೈಕಿ ಬಿಜೆಪಿಯಿಂದ 44 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಥಾಣೆ ಜಿಲ್ಲೆಯ ಕಲ್ಯಾಣ್-ಡೊಂಬಿವ್ಲಿ ಮುನ್ಸಿಪಲ್ ಕಾರ್ಪೊರೇಷನ್, ಪುಣೆ, ಪಿಂಪ್ರಿ ಚಿಂಚ್ವಾಡ್, ಪನ್ವೇಲ್, ಭಿವಾಂಡಿ, ಧುಲೆ, ಜಲಗಾಂವ್ ಮತ್ತು ಅಹಲ್ಯಾನಗರದಿಂದ ಹೆಚ್ಚು ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.</p><p>ಪುಣೆಯ ವಾರ್ಡ್ ಸಂಖ್ಯೆ 35ರ ಎರಡು ಕ್ಷೇತ್ರಗಳಲ್ಲಿ ಪ್ರತಿಸ್ಪರ್ಧಿಗಳು ತಮ್ಮ ನಾಮಪತ್ರಗಳನ್ನು ಹಿಂತೆಗೆದುಕೊಂಡ ನಂತರ ಬಿಜೆಪಿ ಅಭ್ಯರ್ಥಿಗಳಾದ ಮಂಜುಷಾ ನಾಗಪುರೆ ಮತ್ತು ಶ್ರೀಕಾಂತ್ ಜಗ್ತಾಪ್ ಅವರು ಅವಿರೋಧವಾಗಿ ಆಯ್ಕೆಯಾಗುವುದರೊಂದಿಗೆ ಬಿಜೆಪಿಯ ಸಂಖ್ಯೆ 44ಕ್ಕೆ ಏರಿದೆ.</p><p>ಬಿಜೆಪಿ ಅಬ್ಯರ್ಥಿಗಳ ಗೆಲುವನ್ನು ಸ್ವಾಗತಿಸಿದ ಕೇಂದ್ರ ಸಚಿವ ಮತ್ತು ಹಿರಿಯ ಬಿಜೆಪಿ ನಾಯಕ ಮುರಳೀಧರ್ ಮೊಹೋಲ್, ಪುಣೆಯ ಮುಂದಿನ ಮೇಯರ್ ತಮ್ಮ ಪಕ್ಷದವರಾಗಿರುತ್ತಾರೆ ಎಂದು ಹೇಳಿದರು.</p><p>‘ನಮಗೆ 125 ಸ್ಥಾನಗಳನ್ನೂ ಗೆಲ್ಲುವ ಗುರಿ ಇದೆ, ಅದರಲ್ಲಿ ಈಗಾಗಲೇ ಎರಡು ಸ್ಥಾನಗಳನ್ನು ಗೆದ್ದಿದ್ದೇವೆ, ಆದ್ದರಿಂದ 123 ಸ್ಥಾನ ಉಳಿದಿವೆ. ಇದು ನಮ್ಮ ಪಕ್ಷದ ಉತ್ತಮ ಆಡಳಿತಕ್ಕೆ ಪ್ರಮಾಣಪತ್ರ‘ ಎಂದು ಮೊಹೋಲ್ ಹೇಳಿದ್ದಾರೆ.</p><p>ಏಕನಾಥ ಶಿಂದೆ ನೇತೃತ್ವದ ಶಿವಸೇನಾದ 22 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ, ಆದರೆ, ಅಜಿತ್ ಪವಾರ್ ಅವರ ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ ಇಬ್ಬರು ಅಭ್ಯರ್ಥಿಗಳು ಮಾತ್ರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.</p><p>ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರ ಜನಪ್ರಿಯತೆ ಮತ್ತು ರಾಜ್ಯ ಘಟಕದ ಅಧ್ಯಕ್ಷ ರವೀಂದ್ರ ಚವಾಣ್ ಅವರ ಯಶಸ್ವಿ ಚುನಾವಣಾ ತಂತ್ರವೇ ಈ ಪ್ರವೃತ್ತಿಗೆ ಕಾರಣ ಎಂದು ಬಿಜೆಪಿ ನಾಯಕರು ಹೇಳಿದ್ದಾರೆ.</p><p>ಈ ಕುರಿತಂತೆ, ಎಕ್ಸ್ ಪೋಸ್ಟ್ನಲ್ಲಿ ಟೀಕಿಸಿರುವ ಶಿವಸೇನಾ(ಯುಬಿಟಿ) ನಾಯಕ ಸಂಜಯ್ ರಾವುತ್, ತಡರಾತ್ರಿಯವರೆಗೆ ಅಭ್ಯರ್ಥಿಗಳಿಂದ ನಾಮಪತ್ರ ಹಿಂಪಡೆಯುವಿಕೆಯನ್ನು ಸ್ವೀಕರಿಸಲು ಚುನಾವಣಾ ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ ಎಂದು ಹೇಳಿಕೊಂಡಿದ್ದಾರೆ.</p><p>ನಾಮಪತ್ರ ಹಿಂಪಡೆಯುವ ಮನವಿಯನ್ನು ಶುಕ್ರವಾರ ಮಧ್ಯಾಹ್ನ 3 ಗಂಟೆಯ ಗಡುವಿನ ಒಳಗೆ ಮಾಡಲಾಗಿದೆಯೇ ಎಂಬುದನ್ನು ಪರಿಶೀಲಿಸಬೇಕಿದೆ. ಈ ಚುನಾವಣಾ ಪ್ರಕ್ರಿಯೆಯಲ್ಲಿರುವ ನನ್ನ ಸ್ನೇಹಿತರೊಬ್ಬರು ಹೇಳುವ ಪ್ರಕಾರ, ಮಧ್ಯಾಹ್ನ 3 ಗಂಟೆಯ ನಂತರ ನಾಮಪತ್ರ ಹಿಂಪಡೆಯುವ ಮನವಿ (ಫಾರ್ಮ್ ಸಿ) ಸ್ವೀಕರಿಸುವುದು ಸೂಕ್ತವಲ್ಲ. ಆದರೆ, ಅವರಿಗೆ ಸಚಿವರು ಮತ್ತು ಶಾಸಕರು ಹೇಳಿದಂತೆ ಕೇಳಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.</p><p>ಇದು ಡೆಮಾಕ್ರಸಿ ಹೆಸರಲ್ಲಿ ನಡೆಯುತ್ತಿರುವ ಮೋಬೊಕ್ರಸಿ ಎಂದು ಅವರು ಟೀಕಿಸಿದ್ದಾರೆ.</p> .ಹಾಲಿಗೆ ಬೆರೆಸಿದ ಹನಿ ನೀರು ಮಗುವಿನ ಪ್ರಾಣ ತೆಗೆಯಿತು!.ಬೆಂಗಳೂರಲ್ಲಿ ಶಾಲೆಕಲಿತ ಐಐಟಿ ಹೈದರಾಬಾದ್ ವಿದ್ಯಾರ್ಥಿಗೆ ₹2.5 ಕೋಟಿ ಸಂಬಳದ ಕೆಲಸ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಮಹಾರಾಷ್ಟ್ರದಲ್ಲಿ ಇದೇ 15ರಂದು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನವೇ ಅವಿರೋಧ ಆಯ್ಕೆಯಲ್ಲಿ ಬಿಜೆಪಿ ಮತ್ತು ಅದರ ನೇತೃತ್ವದ ಮಹಾಯುತಿ ಮೈತ್ರಿಕೂಟದ ಮಿತ್ರ ಪಕ್ಷಗಳ ಅಭ್ಯರ್ಥಿಗಳು ಮೇಲುಗೈ ಸಾಧಿಸಿದ್ದಾರೆ.</p><p>ರಾಜ್ಯದಾದ್ಯಂತ ಬಿಜೆಪಿ ಮತ್ತು ಅದರ ಮಹಾಯುತಿ ಮಿತ್ರಪಕ್ಷಗಳು 68 ಸ್ಥಾನಗಳನ್ನು ಅವಿರೋಧವಾಗಿ ಗೆದ್ದಿವೆ. ಈ ಆಯ್ಕೆಯನ್ನು ಖಂಡಿಸಿರುವ ವಿರೋಧ ಪಕ್ಷಗಳು, ಆಡಳಿತ ಪಕ್ಷವು ಬೆದರಿಕೆ ಮತ್ತು ಹಣವನ್ನು ಬಳಸಿಕೊಂಡು ಅಭ್ಯರ್ಥಿಗಳನ್ನು ಕಣದಿಂದ ಹಿಂದೆ ಸರಿಯುವಂತೆ ಮಾಡಿದೆ ಎಂದು ಆರೋಪಿಸಿವೆ.</p><p>ರಾಜ್ಯದಾದ್ಯಂತ, ಬಿಜೆಪಿ ಮತ್ತು ಮಹಾಯುತಿಯಿಂದ 68 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪಕ್ಷದ ಬೆಳೆಯುತ್ತಿರುವ ಬಲವನ್ನು ಪ್ರತಿಬಿಂಬಿಸುತ್ತದೆ ಎಂದು ಬಿಜೆಪಿ ನಾಯಕ ಕೇಶವ್ ಉಪಾಧ್ಯೆ ಹೇಳಿದ್ದಾರೆ.</p><p>ಈ ಪೈಕಿ ಬಿಜೆಪಿಯಿಂದ 44 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಥಾಣೆ ಜಿಲ್ಲೆಯ ಕಲ್ಯಾಣ್-ಡೊಂಬಿವ್ಲಿ ಮುನ್ಸಿಪಲ್ ಕಾರ್ಪೊರೇಷನ್, ಪುಣೆ, ಪಿಂಪ್ರಿ ಚಿಂಚ್ವಾಡ್, ಪನ್ವೇಲ್, ಭಿವಾಂಡಿ, ಧುಲೆ, ಜಲಗಾಂವ್ ಮತ್ತು ಅಹಲ್ಯಾನಗರದಿಂದ ಹೆಚ್ಚು ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.</p><p>ಪುಣೆಯ ವಾರ್ಡ್ ಸಂಖ್ಯೆ 35ರ ಎರಡು ಕ್ಷೇತ್ರಗಳಲ್ಲಿ ಪ್ರತಿಸ್ಪರ್ಧಿಗಳು ತಮ್ಮ ನಾಮಪತ್ರಗಳನ್ನು ಹಿಂತೆಗೆದುಕೊಂಡ ನಂತರ ಬಿಜೆಪಿ ಅಭ್ಯರ್ಥಿಗಳಾದ ಮಂಜುಷಾ ನಾಗಪುರೆ ಮತ್ತು ಶ್ರೀಕಾಂತ್ ಜಗ್ತಾಪ್ ಅವರು ಅವಿರೋಧವಾಗಿ ಆಯ್ಕೆಯಾಗುವುದರೊಂದಿಗೆ ಬಿಜೆಪಿಯ ಸಂಖ್ಯೆ 44ಕ್ಕೆ ಏರಿದೆ.</p><p>ಬಿಜೆಪಿ ಅಬ್ಯರ್ಥಿಗಳ ಗೆಲುವನ್ನು ಸ್ವಾಗತಿಸಿದ ಕೇಂದ್ರ ಸಚಿವ ಮತ್ತು ಹಿರಿಯ ಬಿಜೆಪಿ ನಾಯಕ ಮುರಳೀಧರ್ ಮೊಹೋಲ್, ಪುಣೆಯ ಮುಂದಿನ ಮೇಯರ್ ತಮ್ಮ ಪಕ್ಷದವರಾಗಿರುತ್ತಾರೆ ಎಂದು ಹೇಳಿದರು.</p><p>‘ನಮಗೆ 125 ಸ್ಥಾನಗಳನ್ನೂ ಗೆಲ್ಲುವ ಗುರಿ ಇದೆ, ಅದರಲ್ಲಿ ಈಗಾಗಲೇ ಎರಡು ಸ್ಥಾನಗಳನ್ನು ಗೆದ್ದಿದ್ದೇವೆ, ಆದ್ದರಿಂದ 123 ಸ್ಥಾನ ಉಳಿದಿವೆ. ಇದು ನಮ್ಮ ಪಕ್ಷದ ಉತ್ತಮ ಆಡಳಿತಕ್ಕೆ ಪ್ರಮಾಣಪತ್ರ‘ ಎಂದು ಮೊಹೋಲ್ ಹೇಳಿದ್ದಾರೆ.</p><p>ಏಕನಾಥ ಶಿಂದೆ ನೇತೃತ್ವದ ಶಿವಸೇನಾದ 22 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ, ಆದರೆ, ಅಜಿತ್ ಪವಾರ್ ಅವರ ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ ಇಬ್ಬರು ಅಭ್ಯರ್ಥಿಗಳು ಮಾತ್ರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.</p><p>ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರ ಜನಪ್ರಿಯತೆ ಮತ್ತು ರಾಜ್ಯ ಘಟಕದ ಅಧ್ಯಕ್ಷ ರವೀಂದ್ರ ಚವಾಣ್ ಅವರ ಯಶಸ್ವಿ ಚುನಾವಣಾ ತಂತ್ರವೇ ಈ ಪ್ರವೃತ್ತಿಗೆ ಕಾರಣ ಎಂದು ಬಿಜೆಪಿ ನಾಯಕರು ಹೇಳಿದ್ದಾರೆ.</p><p>ಈ ಕುರಿತಂತೆ, ಎಕ್ಸ್ ಪೋಸ್ಟ್ನಲ್ಲಿ ಟೀಕಿಸಿರುವ ಶಿವಸೇನಾ(ಯುಬಿಟಿ) ನಾಯಕ ಸಂಜಯ್ ರಾವುತ್, ತಡರಾತ್ರಿಯವರೆಗೆ ಅಭ್ಯರ್ಥಿಗಳಿಂದ ನಾಮಪತ್ರ ಹಿಂಪಡೆಯುವಿಕೆಯನ್ನು ಸ್ವೀಕರಿಸಲು ಚುನಾವಣಾ ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ ಎಂದು ಹೇಳಿಕೊಂಡಿದ್ದಾರೆ.</p><p>ನಾಮಪತ್ರ ಹಿಂಪಡೆಯುವ ಮನವಿಯನ್ನು ಶುಕ್ರವಾರ ಮಧ್ಯಾಹ್ನ 3 ಗಂಟೆಯ ಗಡುವಿನ ಒಳಗೆ ಮಾಡಲಾಗಿದೆಯೇ ಎಂಬುದನ್ನು ಪರಿಶೀಲಿಸಬೇಕಿದೆ. ಈ ಚುನಾವಣಾ ಪ್ರಕ್ರಿಯೆಯಲ್ಲಿರುವ ನನ್ನ ಸ್ನೇಹಿತರೊಬ್ಬರು ಹೇಳುವ ಪ್ರಕಾರ, ಮಧ್ಯಾಹ್ನ 3 ಗಂಟೆಯ ನಂತರ ನಾಮಪತ್ರ ಹಿಂಪಡೆಯುವ ಮನವಿ (ಫಾರ್ಮ್ ಸಿ) ಸ್ವೀಕರಿಸುವುದು ಸೂಕ್ತವಲ್ಲ. ಆದರೆ, ಅವರಿಗೆ ಸಚಿವರು ಮತ್ತು ಶಾಸಕರು ಹೇಳಿದಂತೆ ಕೇಳಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.</p><p>ಇದು ಡೆಮಾಕ್ರಸಿ ಹೆಸರಲ್ಲಿ ನಡೆಯುತ್ತಿರುವ ಮೋಬೊಕ್ರಸಿ ಎಂದು ಅವರು ಟೀಕಿಸಿದ್ದಾರೆ.</p> .ಹಾಲಿಗೆ ಬೆರೆಸಿದ ಹನಿ ನೀರು ಮಗುವಿನ ಪ್ರಾಣ ತೆಗೆಯಿತು!.ಬೆಂಗಳೂರಲ್ಲಿ ಶಾಲೆಕಲಿತ ಐಐಟಿ ಹೈದರಾಬಾದ್ ವಿದ್ಯಾರ್ಥಿಗೆ ₹2.5 ಕೋಟಿ ಸಂಬಳದ ಕೆಲಸ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>