ಮುಂಬೈ: ಕಳೆದ ವಾರ ಸಿಯಾಚಿನ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಮೃತಪಟ್ಟಿರುವ ಅಗ್ನಿವೀರ ಅಕ್ಷಯ್ ಲಕ್ಷ್ಮಣ್ ಗಾವತೆ ಅವರ ಕುಟುಂಬಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಗುರುವಾರ ₹10 ಲಕ್ಷ ಪರಿಹಾರ ಘೋಷಿಸಿದ್ದಾರೆ.
ಮಹಾರಾಷ್ಟ್ರದ ಬುಲ್ದಾನಾ ಜಿಲ್ಲೆಯ ಪಿಂಪಲ್ಗಾಂವ್ನ ಸರಾಯ್ ಮೂಲದವರಾದ ಗಾವತೆ ಸಾವಿಗೆ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂದೆ ಸಂತಾಪ ಸೂಚಿಸಿದ್ದಾರೆ.
ಕಾರಕೋರಂ ಪರ್ವತ ಶ್ರೇಣಿಯಲ್ಲಿ ಸಮುದ್ರ ಮಟ್ಟಕ್ಕಿಂತ ಸುಮಾರು 20 ಸಾವಿರ ಅಡಿ ಎತ್ತರದಲ್ಲಿರುವ ಸಿಯಾಚಿನ್, ಜಗತ್ತಿನ ಅತಿ ಎತ್ತರದ ಸೇನಾ ನೆಲೆ ಎಂದು ಪರಿಗಣಿಸಲ್ಪಟ್ಟಿದೆ. ಇಲ್ಲಿನ ಹಿಮ ಪ್ರದೇಶದಲ್ಲಿ ಯೋಧರು ಅತಿ ಶೈತ್ಯದ ವಿರುದ್ಧವೂ ಹೋರಾಡಬೇಕಾಗುತ್ತದೆ.
ಗಾವತೆ ನಿಧನಕ್ಕೆ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಸಹ ಸಂತಾಪ ಸೂಚಿಸಿದ್ದಾರೆ.