<p><strong>ಮುಂಬೈ:</strong> ಮಹಾರಾಷ್ಟ್ರದ ಎನ್ಸಿಪಿ ಹಿರಿಯ ನಾಯಕ ಮತ್ತು ಅತ್ಯಂತ ಅನುಭವಿ ರಾಜಕಾರಣಿಗಳಲ್ಲಿ ಒಬ್ಬರಾದ ಶಾಸಕ ಛಗನ್ ಭುಜಬಲ್ ಅವರು ಇಂದು (ಮಂಗಳವಾರ) ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. </p><p>ಮುಂಬೈನ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಛಗನ್ ಭುಜಬಲ್ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಸಿ.ಪಿ ರಾಧಾಕೃಷ್ಣನ್ ಅವರು ಪ್ರತಿಜ್ಞಾ ವಿಧಿ ಬೋಧಿಸಿದ್ದಾರೆ.</p><p>ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ‘ಮಹಾಯುತಿ’ ಮೈತ್ರಿಕೂಟ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ನೇತೃತ್ವದ ಸಚಿವ ಸಂಪುಟದಲ್ಲಿ ಭುಜಬಲ್ ಅವರನ್ನು ಕೈಬಿಡಲಾಗಿತ್ತು. ಇದರ ಬಗ್ಗೆ ಭುಜಬಲ್ ಅವರು ಅಸಮಾಧಾನ ಹೊರಹಾಕಿದ್ದರು.</p><p>ಈ ವರ್ಷದ ಆರಂಭದಲ್ಲಿ ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ನಡೆದಿದ್ದ ಸರಪಂಚ್ ಒಬ್ಬರ ಕೊಲೆ ಪ್ರಕರಣದ ಸೂತ್ರಧಾರ ಆಹಾರ ಸಚಿವ ಧನಂಜಯ ಮುಂಡೆ ಅವರ ಪರಮಾಪ್ತ ವಾಲ್ಮೀಕ್ ಕರಾಡ್ ಎಂಬುದು ಪೊಲೀಸ್ ತನಿಖೆಯಲ್ಲಿ ಬಯಲಾದ ಕಾರಣ, ಮುಂಡೆ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. </p><p>ಧನಂಜಯ್ ಮುಂಡೆ ಅವರ ರಾಜೀನಾಮೆಯಿಂದ ತೆರವಾಗಿದ್ದ ಆಹಾರ ಮತ್ತು ನಾಗರಿಕ ಸರಬರಾಜು ಖಾತೆಯನ್ನು ಭುಜಬಲ್ಗೆ ನೀಡುವ ಸಾಧ್ಯತೆ ದಟ್ಟವಾಗಿದೆ.</p>.ಮಹಾರಾಷ್ಟ್ರ | ಸರಪಂಚ್ ಹತ್ಯೆ ಪ್ರಕರಣ: ಸಚಿವ ಸ್ಥಾನಕ್ಕೆ ಧನಂಜಯ ಮುಂಡೆ ರಾಜೀನಾಮೆ.ಸರಪಂಚ್ ಹತ್ಯೆ: ಧನಂಜಯ ಮುಂಡೆ ಬಂಗಲೆಯಲ್ಲಿ ಸುಲಿಗೆ ಸಭೆ ನಡೆದಿತ್ತು; ಬಿಜೆಪಿ ಶಾಸಕ.ಮಹಾರಾಷ್ಟ್ರ: ಸಚಿವ ಧನಂಜಯ ಮುಂಡೆ ರಾಜೀನಾಮೆ ಕೇಳಿದ ಸಿಎಂ ಫಡಣವೀಸ್.ಮಹಾರಾಷ್ಟ್ರ | ರಾಜೀನಾಮೆಗೆ ಕಾರಣ ತಿಳಿಸಿದ ಧನಂಜಯ ಮುಂಡೆ.ಮಹಾರಾಷ್ಟ್ರ ಸಂಪುಟದಿಂದ ಧನಂಜಯ ಮುಂಡೆ ಕೈಬಿಡಲು ಹೆಚ್ಚಿದ ಒತ್ತಡ.ಸರಪಂಚ್ ಹತ್ಯೆ ಪ್ರಕರಣ: ಬೀಡ್-ಪರ್ಭಾನಿ ಪರಿಸ್ಥಿತಿ ಕುರಿತು ಫಡಣವೀಸ್-ಪವಾರ್ ಚರ್ಚೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಮಹಾರಾಷ್ಟ್ರದ ಎನ್ಸಿಪಿ ಹಿರಿಯ ನಾಯಕ ಮತ್ತು ಅತ್ಯಂತ ಅನುಭವಿ ರಾಜಕಾರಣಿಗಳಲ್ಲಿ ಒಬ್ಬರಾದ ಶಾಸಕ ಛಗನ್ ಭುಜಬಲ್ ಅವರು ಇಂದು (ಮಂಗಳವಾರ) ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. </p><p>ಮುಂಬೈನ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಛಗನ್ ಭುಜಬಲ್ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಸಿ.ಪಿ ರಾಧಾಕೃಷ್ಣನ್ ಅವರು ಪ್ರತಿಜ್ಞಾ ವಿಧಿ ಬೋಧಿಸಿದ್ದಾರೆ.</p><p>ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ‘ಮಹಾಯುತಿ’ ಮೈತ್ರಿಕೂಟ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ನೇತೃತ್ವದ ಸಚಿವ ಸಂಪುಟದಲ್ಲಿ ಭುಜಬಲ್ ಅವರನ್ನು ಕೈಬಿಡಲಾಗಿತ್ತು. ಇದರ ಬಗ್ಗೆ ಭುಜಬಲ್ ಅವರು ಅಸಮಾಧಾನ ಹೊರಹಾಕಿದ್ದರು.</p><p>ಈ ವರ್ಷದ ಆರಂಭದಲ್ಲಿ ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ನಡೆದಿದ್ದ ಸರಪಂಚ್ ಒಬ್ಬರ ಕೊಲೆ ಪ್ರಕರಣದ ಸೂತ್ರಧಾರ ಆಹಾರ ಸಚಿವ ಧನಂಜಯ ಮುಂಡೆ ಅವರ ಪರಮಾಪ್ತ ವಾಲ್ಮೀಕ್ ಕರಾಡ್ ಎಂಬುದು ಪೊಲೀಸ್ ತನಿಖೆಯಲ್ಲಿ ಬಯಲಾದ ಕಾರಣ, ಮುಂಡೆ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. </p><p>ಧನಂಜಯ್ ಮುಂಡೆ ಅವರ ರಾಜೀನಾಮೆಯಿಂದ ತೆರವಾಗಿದ್ದ ಆಹಾರ ಮತ್ತು ನಾಗರಿಕ ಸರಬರಾಜು ಖಾತೆಯನ್ನು ಭುಜಬಲ್ಗೆ ನೀಡುವ ಸಾಧ್ಯತೆ ದಟ್ಟವಾಗಿದೆ.</p>.ಮಹಾರಾಷ್ಟ್ರ | ಸರಪಂಚ್ ಹತ್ಯೆ ಪ್ರಕರಣ: ಸಚಿವ ಸ್ಥಾನಕ್ಕೆ ಧನಂಜಯ ಮುಂಡೆ ರಾಜೀನಾಮೆ.ಸರಪಂಚ್ ಹತ್ಯೆ: ಧನಂಜಯ ಮುಂಡೆ ಬಂಗಲೆಯಲ್ಲಿ ಸುಲಿಗೆ ಸಭೆ ನಡೆದಿತ್ತು; ಬಿಜೆಪಿ ಶಾಸಕ.ಮಹಾರಾಷ್ಟ್ರ: ಸಚಿವ ಧನಂಜಯ ಮುಂಡೆ ರಾಜೀನಾಮೆ ಕೇಳಿದ ಸಿಎಂ ಫಡಣವೀಸ್.ಮಹಾರಾಷ್ಟ್ರ | ರಾಜೀನಾಮೆಗೆ ಕಾರಣ ತಿಳಿಸಿದ ಧನಂಜಯ ಮುಂಡೆ.ಮಹಾರಾಷ್ಟ್ರ ಸಂಪುಟದಿಂದ ಧನಂಜಯ ಮುಂಡೆ ಕೈಬಿಡಲು ಹೆಚ್ಚಿದ ಒತ್ತಡ.ಸರಪಂಚ್ ಹತ್ಯೆ ಪ್ರಕರಣ: ಬೀಡ್-ಪರ್ಭಾನಿ ಪರಿಸ್ಥಿತಿ ಕುರಿತು ಫಡಣವೀಸ್-ಪವಾರ್ ಚರ್ಚೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>