<p><strong>ಮುಂಬೈ</strong>: ಏಕರೂಪ ನಾಗರಿಕ ಸಂಹಿತೆಗೆ ಸಂಬಂಧಿಸಿದ ಮಸೂದೆಯು ಈ ಬಾರಿಯ ಕೇಂದ್ರ ಬಜೆಟ್ ಅಧಿವೇಶನದ ವೇಳೆಯೇ ಅಂಗೀಕಾರಗೊಳ್ಳಬೇಕು ಎಂದು ಶಿವಸೇನಾ ಪಕ್ಷದ ಏಕನಾಥ ಶಿಂದೆ ಬಣ ಆಗ್ರಹಿಸಿದೆ.</p><p>ಬಜೆಟ್ ಅಧಿವೇಶನದ ಮುನ್ನಾದಿನ (ಜನವರಿ 30, ಮಂಗಳವಾರ) ದೆಹಲಿಯಲ್ಲಿ ನಡೆದ ಸರ್ವಪಕ್ಷಗಳ ಸಭೆ ಬಳಿಕ, ಶಿವಸೇನಾ ಸಂಸದ ರಾಹುಲ್ ಶೆವೆಲೆ ಅವರು ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ.</p><p>ಲೋಕಸಭೆಯಲ್ಲಿ ಶಿವಸೇನಾ ನಾಯಕರಾಗಿರುವ ಶೆವೆಲೆ, ಈ ಬಜೆಟ್ ಅಧಿವೇಶನವು ಸಾರ್ವತ್ರಿಕ ಚುನಾವಣೆಗೂ ಮುನ್ನ ನಡೆಯುವ ಕೊನೇ ಅಧಿವೇಶನವಾಗಲಿದೆ. ಹಾಗಾಗಿ, ಏಕರೂಪ ನಾಗರಿಕ ಸಂಹಿತೆ ಮಸೂದೆ ಅಂಗೀಕಾರಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.</p><p>ಸರ್ಕಾರ ರೂಪಿಸುವ ಪ್ರತಿ ಮಸೂದೆಯನ್ನೂ ತಮ್ಮ ಪಕ್ಷ ಬೆಂಬಲಿಸಲಿದೆ ಎಂದಿರುವ ಅವರು, ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣ ಮಾಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸುವ ನಿರ್ಣಯವೂ ಸಂಸತ್ತಿನಲ್ಲಿ ಅಂಗೀಕಾರವಾಗಬೇಕು. ಎಲ್ಲ ಪಕ್ಷಗಳೂ ಅದನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದ್ದಾರೆ.</p><p>ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರುವರಿ 1ರಂದು ಮಧ್ಯಂತರ ಬಜೆಟ್ ಮಂಡಿಸಲಿದ್ದಾರೆ. ಇದರ ಮೇಲಿನ ಅಧಿವೇಶನವು ಜನವರಿ 31ರಿಂದ ಫೆಬ್ರುವರಿ 9ರ ವರೆಗೆ ನಡೆಯಲಿದೆ. ಲೋಕಸಭೆ ಚುನಾವಣೆ ಬಳಿಕ ರಚನೆಯಾಗುವ ಹೊಸ ಸರ್ಕಾರವು ಪೂರ್ಣಪ್ರಮಾಣದ ಬಜೆಟ್ ಮಂಡಿಸಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಏಕರೂಪ ನಾಗರಿಕ ಸಂಹಿತೆಗೆ ಸಂಬಂಧಿಸಿದ ಮಸೂದೆಯು ಈ ಬಾರಿಯ ಕೇಂದ್ರ ಬಜೆಟ್ ಅಧಿವೇಶನದ ವೇಳೆಯೇ ಅಂಗೀಕಾರಗೊಳ್ಳಬೇಕು ಎಂದು ಶಿವಸೇನಾ ಪಕ್ಷದ ಏಕನಾಥ ಶಿಂದೆ ಬಣ ಆಗ್ರಹಿಸಿದೆ.</p><p>ಬಜೆಟ್ ಅಧಿವೇಶನದ ಮುನ್ನಾದಿನ (ಜನವರಿ 30, ಮಂಗಳವಾರ) ದೆಹಲಿಯಲ್ಲಿ ನಡೆದ ಸರ್ವಪಕ್ಷಗಳ ಸಭೆ ಬಳಿಕ, ಶಿವಸೇನಾ ಸಂಸದ ರಾಹುಲ್ ಶೆವೆಲೆ ಅವರು ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ.</p><p>ಲೋಕಸಭೆಯಲ್ಲಿ ಶಿವಸೇನಾ ನಾಯಕರಾಗಿರುವ ಶೆವೆಲೆ, ಈ ಬಜೆಟ್ ಅಧಿವೇಶನವು ಸಾರ್ವತ್ರಿಕ ಚುನಾವಣೆಗೂ ಮುನ್ನ ನಡೆಯುವ ಕೊನೇ ಅಧಿವೇಶನವಾಗಲಿದೆ. ಹಾಗಾಗಿ, ಏಕರೂಪ ನಾಗರಿಕ ಸಂಹಿತೆ ಮಸೂದೆ ಅಂಗೀಕಾರಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.</p><p>ಸರ್ಕಾರ ರೂಪಿಸುವ ಪ್ರತಿ ಮಸೂದೆಯನ್ನೂ ತಮ್ಮ ಪಕ್ಷ ಬೆಂಬಲಿಸಲಿದೆ ಎಂದಿರುವ ಅವರು, ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣ ಮಾಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸುವ ನಿರ್ಣಯವೂ ಸಂಸತ್ತಿನಲ್ಲಿ ಅಂಗೀಕಾರವಾಗಬೇಕು. ಎಲ್ಲ ಪಕ್ಷಗಳೂ ಅದನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದ್ದಾರೆ.</p><p>ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರುವರಿ 1ರಂದು ಮಧ್ಯಂತರ ಬಜೆಟ್ ಮಂಡಿಸಲಿದ್ದಾರೆ. ಇದರ ಮೇಲಿನ ಅಧಿವೇಶನವು ಜನವರಿ 31ರಿಂದ ಫೆಬ್ರುವರಿ 9ರ ವರೆಗೆ ನಡೆಯಲಿದೆ. ಲೋಕಸಭೆ ಚುನಾವಣೆ ಬಳಿಕ ರಚನೆಯಾಗುವ ಹೊಸ ಸರ್ಕಾರವು ಪೂರ್ಣಪ್ರಮಾಣದ ಬಜೆಟ್ ಮಂಡಿಸಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>