ಗುರುವಾರ, 23 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮ್‌ ಕದಂ ನಾಲಿಗೆ ಕತ್ತರಿಸಿದವರಿಗೆ ₹ 5 ಲಕ್ಷ ಬಹುಮಾನ: ಮಾಜಿ ಸಚಿವ ಸುಬೋದ್‌

Last Updated 7 ಸೆಪ್ಟೆಂಬರ್ 2018, 4:04 IST
ಅಕ್ಷರ ಗಾತ್ರ

ಪುಣೆ:'ಹುಡುಗಿ ನಿರಾಕರಿಸಿದರೆ ಕರೆ ಮಾಡಿ, ಕಿಡ್ನಾಪ್ ಮಾಡಿ ತಂದು ಕೊಡ್ತೀನಿ’ ಎಂದಿದ್ದ ಮುಂಬೈಯ ಘಟ್ಕೋಪರ್ ಕ್ಷೇತ್ರದ ಶಾಸಕ ರಾಮ್‌ ಕದಂ ಅವರ ನಾಲಿಗೆ ಕತ್ತರಿಸಿದವರಿಗೆ ₹ 5 ಲಕ್ಷ ಬಹುಮಾನ ನೀಡುವುದಾಗಿ ಕಾಂಗ್ರೆಸ್‌ನ ಮಾಜಿ ಸಚಿವ ಸುಬೋದ್‌ ಸಾಹುಜಿ ತಿಳಿಸಿದ್ದಾರೆ.

ವಿಡಿಯೊ ಮೂಲಕ ಪ್ರತಿಕ್ರಿಯಿಸಿರುವ ಅವರು ‘ಯಾರೇ ಆಗಲಿ ಬಿಜೆಪಿ ಶಾಸಕ ರಾಮ್ ಕದಂ ಅವರ ನಾಲಿಗೆಯನ್ನು ಕತ್ತರಿಸಿ ತಂದೆರೆ ಅವರಿಗೆ 5 ಲಕ್ಷ ರೂಪಾಯಿ ಬಹುಮಾನ ಕೊಡುವುದಾಗಿ ಹೇಳಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಸುಬೋದ್ ಸಾಹುಜಿ ಅವರ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ರಾಮ್ ಕದಂ ಅವರಿಗೆ ಮಹಾರಾಷ್ಟ್ರ ಮಹಿಳಾ ಆಯೋಗ ನೋಟಿಸ್‌ ನೀಡಿದ್ದು, ಎಂಟು ದಿನಗಳಲ್ಲಿ ಪ್ರತಿಕ್ರಿಯಿಸುವಂತೆ ಸೂಚಿಸಿದೆ.

ಇದನ್ನೂ ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT