ಪುಣೆ:'ಹುಡುಗಿ ನಿರಾಕರಿಸಿದರೆ ಕರೆ ಮಾಡಿ, ಕಿಡ್ನಾಪ್ ಮಾಡಿ ತಂದು ಕೊಡ್ತೀನಿ’ ಎಂದಿದ್ದ ಮುಂಬೈಯ ಘಟ್ಕೋಪರ್ ಕ್ಷೇತ್ರದ ಶಾಸಕ ರಾಮ್ ಕದಂ ಅವರ ನಾಲಿಗೆ ಕತ್ತರಿಸಿದವರಿಗೆ ₹ 5 ಲಕ್ಷ ಬಹುಮಾನ ನೀಡುವುದಾಗಿ ಕಾಂಗ್ರೆಸ್ನ ಮಾಜಿ ಸಚಿವ ಸುಬೋದ್ ಸಾಹುಜಿ ತಿಳಿಸಿದ್ದಾರೆ.
ವಿಡಿಯೊ ಮೂಲಕ ಪ್ರತಿಕ್ರಿಯಿಸಿರುವ ಅವರು ‘ಯಾರೇ ಆಗಲಿ ಬಿಜೆಪಿ ಶಾಸಕ ರಾಮ್ ಕದಂ ಅವರ ನಾಲಿಗೆಯನ್ನು ಕತ್ತರಿಸಿ ತಂದೆರೆ ಅವರಿಗೆ 5 ಲಕ್ಷ ರೂಪಾಯಿ ಬಹುಮಾನ ಕೊಡುವುದಾಗಿ ಹೇಳಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
#WATCH: Former Maharashtra minister and Congress leader Subodh Savji says ‘I am announcing a Rs 5-lakh reward for anyone who chops off BJP MLA Ram Kadam’s tongue. I strongly condemn him saying girls should be abducted.' (06.09.18) pic.twitter.com/Y3h8AR7Vd1